Homeಕರ್ನಾಟಕಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಎರಡು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಮೊದಲನೇಯದ್ದು ಶುಕ್ರವಾರ ರಾತ್ರಿ (ಮಾ.18) ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಮತ್ತೊಂದು ರವಿವಾರ (ಮಾ.19) ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳ ದಾಳಿ

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ಭಾನುವಾರ ತುಂಗಾ ನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ದಾಳಿ ನಡೆಸಿದರು. ಇಲ್ಲಿ ಹಿಂದೂ ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ.

ಈ ವಿಚಾರವಾಗಿ ಪ್ರಾರ್ಥನಾ ಮಂದಿರ ನಡೆಸುತ್ತಿದ್ದ ಫಾದರ್ ಮಣಿಕಂಠ ಇಮ್ಯಾನ್ಯುಯಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಸಿಯಿದ ಫಾದರ್ ಮಣಿಕಂಠ ಇಮ್ಯಾನ್ಯುಯಲ್, ”ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. 15 ವರ್ಷಗಳಿಂದ ಟ್ರಸ್ಟ್ ಸ್ಥಾಪಿಸಿ ಪ್ರಾರ್ಥನೆ ನಡೆಸುತ್ತಿದ್ದೇವೆ. ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಸಂದರ್ಭದಲ್ಲಿಯೂ ಪ್ರಾರ್ಥನೆ ನಡೆಸಿದ್ದೆವು” ಎಂದು ಅವರು ತಿಳಿಸಿದರು.

ಬಜರಂಗದಳದ ಕಾರ್ಯಕರ್ತ ರಾಜೇಶ್ ಗೌಡ ಮಾತನಾಡಿ, ”ಇಲ್ಲಿ ನಿರ್ಮಿಸಿರುವ ಶೆಡ್‌ಗೆ ಯಾವುದೇ ಟ್ರಸ್ಟ್‌ನ ನಾಮಫಲಕ ಅಳವಡಿಸಿಲ್ಲ. ಅಲ್ಲದೇ 42 ಜನರ ಪಟ್ಟಿ ದೊರೆತಿದೆ. ಇದು ಹಿಂದೂಗಳನ್ನು ಮತಾಂತರ ಮಾಡಲು ಸಿದ್ಧಪಡಿಸಿದ್ದ ಪಟ್ಟಿ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ದಾಳಿ ವೇಳೆ ಬಜರಂಗದಳದ ಜಿಲ್ಲಾ ಸಂಚಾಲಕ ಅಂಕುಶ್, ನಗರ ಕಾರ್ಯದರ್ಶಿ ಸಚಿನ್, ಜಿತೇಂದ್ರಗೌಡ ತುಂಗಾ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಪಿಎಸ್ಐ ರಾಜು ರೆಡ್ಡಿ ಇದ್ದರು.

ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ದಾಳಿ

ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ ನಂತರ, ಎಲ್ಲಾ ಮಹಿಳೆಯರು ಮತ್ತು ಅವರ ಜೊತೆಗಿದ್ದ ಪುರುಷರು ಹೋಟೆಲ್‌ನಿಂದ ಹೊರಬಂದಿದ್ದಾರೆ.

ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿದ್ದು, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದಾರೆ.

”ನಮ್ಮ ಸಂಘಟನೆಯು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲಿಲ್ಲ. ಬದಲಿಗೆ ಪೊಲೀಸರಿಗೆ ಮಾಹಿತಿ ನೀಡಿದರು, ಅವರು ಪಾರ್ಟಿಯನ್ನು ನಿಲ್ಲಿಸಿದ್ದಾರೆ ಎಂದು ರಾಜೇಶ್ ಗೌಡ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಮಿಥುನ್ ಕುಮಾರ್, ”ನಮ್ಮ ಪೊಲೀಸರು ಪಾರ್ಟಿಯನ್ನು ನಿಲ್ಲಿಸಲಿಲ್ಲ ಎಂದು ಹೇಳಿದ್ದಾರೆ.

”ಕೆಲವು ವ್ಯಕ್ತಿಗಳು ಪಾರ್ಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಬಳಿಕ ನಮ್ಮ ಅಧಿಕಾರಿಗಳು ಹೋಟೆಲ್‌ಗೆ ತೆರಳಿದರು” ಎಂದು ಅವರು ತಿಳಿಸಿದ್ದಾರೆ.

”ನಮ್ಮ ಪೊಲೀಸರು ಯಾವುದೇ ಕಾರಣಕ್ಕೂ ಆ ಪಾರ್ಟಿಯನ್ನು ನಿಲ್ಲಿಸಲು ಅಲ್ಲಿಗೆ ಹೋಗಿರಲಿಲ್ಲ. ಅಲ್ಲಿ ಗಲಾಟೆ ನಡೆಯಬಾರದು ಎನ್ನುವ ಉದ್ದೇಶದಿಂದ ಹೋಗಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ” ಎಂದು ಕುಮಾರ್ ಹೇಳಿದರು.

”ಪಾರ್ಟಿಯಲ್ಲಿ ಆಕ್ಷೇಪಾರ್ಹವಾಗುವಂತಹ ವಿಚಾರ ಏನೂ ಇರಲಿಲ್ಲ. ಆದರೆ ಪೊಲೀಸರು ಮತ್ತು ಕಾರ್ಯಕರ್ತರು ಪಾರ್ಟಿಯನ್ನು ಏಕೆ ತಡೆದರು ಎಂಬುದು ನಮಗೆ ತಿಳಿದಿಲ್ಲ” ಎಂದು ಹೋಟೆಲ್ ಜನರಲ್ ಮ್ಯಾನೇಜರ್ ಶಂಕರ್ ಕೆ. ಹೇಳಿದ್ದಾರೆ.

”ನಮ್ಮ ಹೋಟೆಲ್ ಅತ್ಯುತ್ತಮ ಹೆಸರು ಗಳಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಕಚೇರಿಯ ಜನರು ಸೇರಿದಂತೆ ವಿಐಪಿಗಳಿಗೆ ಇಲ್ಲಿ ನಾವು ಆತಿಥ್ಯ ನೀಡಿದ್ದೇವೆ. ಈ ಬಗ್ಗೆ ಜಿಲ್ಲಾಡಳಿತದ ಎಲ್ಲ ಹಿರಿಯ ಅಧಿಕಾರಿಗಳಿಗೆ ತಿಳಿದಿದೆ. ನಾವೇನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಆದರೆ ನಾವು ಆ ರೀತಿಯ ಯಾವ ತಪ್ಪನ್ನೂ ಮಾಡಿಲ್ಲ. ಆದರೂ ಏಕೆ ಅವರು ನಮ್ಮ ವ್ಯವಹಾರಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ನಮಗೆ ತಿಳಿದಿಲ್ಲ” ಎಂದು ಶಂಕರ್ ಅಸಮಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...