Homeಕರ್ನಾಟಕಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರು ಎರಡು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಮೊದಲನೇಯದ್ದು ಶುಕ್ರವಾರ ರಾತ್ರಿ (ಮಾ.18) ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಮತ್ತೊಂದು ರವಿವಾರ (ಮಾ.19) ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ.

ಪ್ರಾರ್ಥನಾ ಮಂದಿರದ ಮೇಲೆ ಬಜರಂಗದಳ ದಾಳಿ

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಮನೆಯೊಂದರಲ್ಲಿ ಆರಂಭಿಸಿರುವ ಪ್ರಾರ್ಥನಾ ಮಂದಿರವೊಂದರ ಮೇಲೆ ಬಜರಂಗದಳ ಕಾರ್ಯಕರ್ತರು ಭಾನುವಾರ ತುಂಗಾ ನಗರ ಠಾಣೆ ಪೊಲೀಸರ ಸಮ್ಮುಖದಲ್ಲಿ ದಾಳಿ ನಡೆಸಿದರು. ಇಲ್ಲಿ ಹಿಂದೂ ಧರ್ಮೀಯರಿಗೆ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ.

ಈ ವಿಚಾರವಾಗಿ ಪ್ರಾರ್ಥನಾ ಮಂದಿರ ನಡೆಸುತ್ತಿದ್ದ ಫಾದರ್ ಮಣಿಕಂಠ ಇಮ್ಯಾನ್ಯುಯಲ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ವಾಪಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆ ಬಗ್ಗೆ ಪ್ರತಿಕ್ರಿಸಿಯಿದ ಫಾದರ್ ಮಣಿಕಂಠ ಇಮ್ಯಾನ್ಯುಯಲ್, ”ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. 15 ವರ್ಷಗಳಿಂದ ಟ್ರಸ್ಟ್ ಸ್ಥಾಪಿಸಿ ಪ್ರಾರ್ಥನೆ ನಡೆಸುತ್ತಿದ್ದೇವೆ. ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಸಂದರ್ಭದಲ್ಲಿಯೂ ಪ್ರಾರ್ಥನೆ ನಡೆಸಿದ್ದೆವು” ಎಂದು ಅವರು ತಿಳಿಸಿದರು.

ಬಜರಂಗದಳದ ಕಾರ್ಯಕರ್ತ ರಾಜೇಶ್ ಗೌಡ ಮಾತನಾಡಿ, ”ಇಲ್ಲಿ ನಿರ್ಮಿಸಿರುವ ಶೆಡ್‌ಗೆ ಯಾವುದೇ ಟ್ರಸ್ಟ್‌ನ ನಾಮಫಲಕ ಅಳವಡಿಸಿಲ್ಲ. ಅಲ್ಲದೇ 42 ಜನರ ಪಟ್ಟಿ ದೊರೆತಿದೆ. ಇದು ಹಿಂದೂಗಳನ್ನು ಮತಾಂತರ ಮಾಡಲು ಸಿದ್ಧಪಡಿಸಿದ್ದ ಪಟ್ಟಿ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಪ್ರಾರ್ಥನಾ ಮಂದಿರ, ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ದಾಳಿ ವೇಳೆ ಬಜರಂಗದಳದ ಜಿಲ್ಲಾ ಸಂಚಾಲಕ ಅಂಕುಶ್, ನಗರ ಕಾರ್ಯದರ್ಶಿ ಸಚಿನ್, ಜಿತೇಂದ್ರಗೌಡ ತುಂಗಾ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಪಿಎಸ್ಐ ರಾಜು ರೆಡ್ಡಿ ಇದ್ದರು.

ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ದಾಳಿ

ಶುಕ್ರವಾರ ರಾತ್ರಿ ಶಿವಮೊಗ್ಗದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನೇ ನಿಲ್ಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ ನಂತರ, ಎಲ್ಲಾ ಮಹಿಳೆಯರು ಮತ್ತು ಅವರ ಜೊತೆಗಿದ್ದ ಪುರುಷರು ಹೋಟೆಲ್‌ನಿಂದ ಹೊರಬಂದಿದ್ದಾರೆ.

ಕ್ಲಿಫ್ ಎಂಬಸಿ ಹೋಟೆಲ್‌ನ ಹೈವ್‌ ಸೈಬಾರ್‌ನಲ್ಲಿ ಲೇಡಿಸ್ ನೈಟ್ ಪಾರ್ಟಿ ಆಯೋಜಿಸಲಾಗಿತ್ತು. ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು, ಹೋಟೆಲ್ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಯನ್ನು ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಬಜರಂಗದಳದ ಜಿಲ್ಲಾ ಸಂಚಾಲಕ ರಾಜೇಶ್ ಗೌಡ ಅವರು ಮಾತನಾಡಿದ್ದು, ”ಇದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಗೆ ಶಿವಮೊಗ್ಗದಲ್ಲಿ ಅವಕಾಶ ಕೊಡಲ್ಲ. ಮಲೆನಾಡಿನ ಜನರು ಸುಸಂಸ್ಕೃತರು, ಇಂತಹ ಕಾರ್ಯಕ್ರಮ ಆಯೋಜಿಸಿದರೆ ಸುಮ್ಮನಿರುವುದಿಲ್ಲ. ಲೇಟ್ ನೈಟ್ ಲೇಡಿಸ್ ಪಾರ್ಟಿ ಬಗ್ಗೆ ಈ ಮೊದಲೇ ಪೊಲೀಸರ ಗಮನಕ್ಕೆ ತಂದಿದ್ದೆವು. ಆದ್ದರಿಂದ ಪೊಲೀಸರ ಜತೆ ಬಂದು ಕಾರ್ಯಕ್ರಮ ನಿಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

”ಶಿವಮೊಗ್ಗದಲ್ಲಿ ಇಂತಹ ಕಾರ್ಯಕ್ರಮಗಳಿಗೆ ನಾವು ಅವಕಾಶ ನೀಡುವುದಿಲ್ಲ ಏಕೆಂದರೆ ನಮ್ಮ ನಗರವು ಮತ್ತೊಂದು ಮಣಿಪಾಲವಾಗುವುದು ನಮಗೆ ಇಷ್ಟವಿಲ್ಲ. ಇಂತಹ ಘಟನೆಗಳನ್ನು ಭಜರಂಗದಳ ಸಹಿಸುವುದಿಲ್ಲ” ಎಂದು ಹೇಳಿದ ಅವರು, ಪಾರ್ಟಿಯಲ್ಲಿ ಮಹಿಳೆಯರ ಉಡುಗೆಯನ್ನೂ ಆಕ್ಷೇಪಿಸಿದ್ದಾರೆ.

”ನಮ್ಮ ಸಂಘಟನೆಯು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲಿಲ್ಲ. ಬದಲಿಗೆ ಪೊಲೀಸರಿಗೆ ಮಾಹಿತಿ ನೀಡಿದರು, ಅವರು ಪಾರ್ಟಿಯನ್ನು ನಿಲ್ಲಿಸಿದ್ದಾರೆ ಎಂದು ರಾಜೇಶ್ ಗೌಡ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಮಿಥುನ್ ಕುಮಾರ್, ”ನಮ್ಮ ಪೊಲೀಸರು ಪಾರ್ಟಿಯನ್ನು ನಿಲ್ಲಿಸಲಿಲ್ಲ ಎಂದು ಹೇಳಿದ್ದಾರೆ.

”ಕೆಲವು ವ್ಯಕ್ತಿಗಳು ಪಾರ್ಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಬಳಿಕ ನಮ್ಮ ಅಧಿಕಾರಿಗಳು ಹೋಟೆಲ್‌ಗೆ ತೆರಳಿದರು” ಎಂದು ಅವರು ತಿಳಿಸಿದ್ದಾರೆ.

”ನಮ್ಮ ಪೊಲೀಸರು ಯಾವುದೇ ಕಾರಣಕ್ಕೂ ಆ ಪಾರ್ಟಿಯನ್ನು ನಿಲ್ಲಿಸಲು ಅಲ್ಲಿಗೆ ಹೋಗಿರಲಿಲ್ಲ. ಅಲ್ಲಿ ಗಲಾಟೆ ನಡೆಯಬಾರದು ಎನ್ನುವ ಉದ್ದೇಶದಿಂದ ಹೋಗಿದ್ದರು. ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ” ಎಂದು ಕುಮಾರ್ ಹೇಳಿದರು.

”ಪಾರ್ಟಿಯಲ್ಲಿ ಆಕ್ಷೇಪಾರ್ಹವಾಗುವಂತಹ ವಿಚಾರ ಏನೂ ಇರಲಿಲ್ಲ. ಆದರೆ ಪೊಲೀಸರು ಮತ್ತು ಕಾರ್ಯಕರ್ತರು ಪಾರ್ಟಿಯನ್ನು ಏಕೆ ತಡೆದರು ಎಂಬುದು ನಮಗೆ ತಿಳಿದಿಲ್ಲ” ಎಂದು ಹೋಟೆಲ್ ಜನರಲ್ ಮ್ಯಾನೇಜರ್ ಶಂಕರ್ ಕೆ. ಹೇಳಿದ್ದಾರೆ.

”ನಮ್ಮ ಹೋಟೆಲ್ ಅತ್ಯುತ್ತಮ ಹೆಸರು ಗಳಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಕಚೇರಿಯ ಜನರು ಸೇರಿದಂತೆ ವಿಐಪಿಗಳಿಗೆ ಇಲ್ಲಿ ನಾವು ಆತಿಥ್ಯ ನೀಡಿದ್ದೇವೆ. ಈ ಬಗ್ಗೆ ಜಿಲ್ಲಾಡಳಿತದ ಎಲ್ಲ ಹಿರಿಯ ಅಧಿಕಾರಿಗಳಿಗೆ ತಿಳಿದಿದೆ. ನಾವೇನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಲು ಸಿದ್ಧ. ಆದರೆ ನಾವು ಆ ರೀತಿಯ ಯಾವ ತಪ್ಪನ್ನೂ ಮಾಡಿಲ್ಲ. ಆದರೂ ಏಕೆ ಅವರು ನಮ್ಮ ವ್ಯವಹಾರಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ನಮಗೆ ತಿಳಿದಿಲ್ಲ” ಎಂದು ಶಂಕರ್ ಅಸಮಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...