Homeಮುಖಪುಟಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

- Advertisement -
- Advertisement -

ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಖಲಿಸ್ತಾನಿ ಪ್ರತಿಭಟನಾಕಾರರು ಭಾರತೀಯ ಧ್ವಜವನ್ನು ಕೆಳಗಿಳಿಸಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬ್ರಿಟಿಷ್ ಸರ್ಕಾರದ “ಉದಾಸೀನತೆ”ಯೇ ಕಾರಣ ಎಂದು ಆರೋಪಿಸಿದೆ. ಈ ಸಂಬಂಧ ಭಾನುವಾರ ರಾತ್ರಿ ಕೇಂದ್ರ ಸರ್ಕಾರ, ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಕರೆಸಿ ವಿಚಾರಣೆ ನಡೆಸಿದೆ.

ವಾರಿಸ್ ಪಂಜಾಬ್ ಡಿ (WPD) ಗುಂಪಿನ ಮೇಲೆ ಪಂಜಾಬ್‌ನಲ್ಲಿ ಭದ್ರತಾ ಪಡೆಗಳ ದಮನದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು, ಖಲಿಸ್ತಾನಿ ಘೋಷಣೆಗಳನ್ನು ಕೂಗಿದ್ದಲ್ಲದೇ ಹೈಕಮಿಷನ್ ಕಚೇರಿ ಪ್ರವೇಶಕ್ಕೂ ಪ್ರಯತ್ನಿಸಿದರು ಅದು ಸಫಲವಾಗಲಿಲ್ಲ. ಬಳಿಕ ಒಬ್ಬ ಸಿಖ್ ವ್ಯಕ್ತಿ ರಸ್ತೆಯಿಂದ ನೇರವಾಗಿ ಭಾರತೀಯ ಹೈಕಮಿಷನ್ ಕಚೇರಿಯ ಬಾಲ್ಕನಿಗೆ ಏರಿದರು. ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದಾನೆ.

ಈ ವಿಚಾರವಾಗಿ ಕೇಮದ್ರ ಸರ್ಕಾರವು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ. ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.

ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ. ಭಾರತೀಯ ರಾಜತಾಂತ್ರಿಕರ ಭದ್ರತೆಗೆ ಬ್ರಿಟಿಷ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ಭಾರತ ಅಸಮಧಾನ ಹೊರ ಹಾಕಿದೆ.

ಇದನ್ನೂ ಓದಿ: ಖಲಿಸ್ತಾನಿ ನಾಯಕನ ಬಂಧನ; ಪಂಜಾಬ್‌ನಲ್ಲಿ ಇಂಟರ್‌ನೆಟ್ ಬಂದ್

ಈ ಘಟನೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾನುವಾರ ರಾತ್ರಿ ಗಮನಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಲೇ ಕ್ರಮ ವಹಿಸಿದೆ. ಹೈಕಮಿಷನ್ ಆವರಣಕ್ಕೆ ಖಾಲಿಸ್ತಾನಿಗಳ ಪ್ರವೇಶಕ್ಕೆ ಅನುಮತಿಸಿದ ಬ್ರಿಟಿಷ್ ಭದ್ರತೆಯ ವಿಫಲತೆ ಬಗ್ಗೆ ವಿವರಣೆ ಕೇಳಲಾಗಿದೆ. ಈ ಕುರಿತ ಸಚಿವಾಲಯದ ಹೇಳಿಕೆಯೊಂದನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ.

ತ್ರಿವರ್ಣ ಧ್ವಜ ಕೆಳಗಿಳಿಸಿದ ಘಟನೆಯಲ್ಲಿ ಭಾಗಿಯಾದವರನ್ನು ಗುರುತಿಸಿ ಬಂಧಿಸಬೇಕು. ಅವರೆಲ್ಲರನ್ನು ವಿಚಾರಣೆಗೆ ಒಳಪಡಿಸಬೇಕು. ಮುಂದೆಂದೂ ಇಂತಹ ಪ್ರತಿಭಟನೆಗಳು/ಘಟನೆ ಮರುಕಳಿಸದಂತೆ ಅತ್ಯಗತ್ಯ ಮತ್ತು ಸೂಕ್ತ ಭದ್ರತಾ ಕ್ರಮಗಳನ್ನು ಯುಕೆ ಸರ್ಕಾರ ಕೈಗೊಳ್ಳಬೇಕೆಂದು ಭಾರತವು ನಿರೀಕ್ಷಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೈಕಮಿಷನ್ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯ ಸದಸ್ಯರ ಮೂಲಕ ತ್ರಿವರ್ಣ ಧ್ವಜವನ್ನು ಸೂಕ್ತವಾಗಿ ಕಚೇರಿ ಒಳಗೆ ಒಯ್ಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಕರಿತು ಲಂಡನ್‌ನಲ್ಲಿರುವ ವಿದೇಶಿ ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ (FCDO) ಕಚೇರಿಯು ಎಲ್ಲಿಸ್ ಅವರು ಟ್ವೀಟ್ ಮಾಡಿದ್ದಾರೆ.

”ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಇಂದು ನಡೆದ ದಾಳಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ಮಿಷನ್ ಮತ್ತು ಅದರ ಸಿಬ್ಬಂದಿಯ ಸಮಗ್ರತೆಯ ವಿರುದ್ಧ ಇದು ಸಹಿಸಿಕೊಳ್ಳುವಂತಥದ್ದಲ್ಲ. ಬ್ರಿಟಿಷ್ ಸರ್ಕಾರವು ಯಾವಾಗಲೂ ಭಾರತೀಯ ಹೈಕಮಿಷನ್ ಕಚೇರಿಗೆ ನೀಡುವ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಟ್ವೀಟ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಲಂಡನ್‌ನಲ್ಲಿ (UK) ಇರುವ ಭಾರತೀಯ ರಾಜತಾಂತ್ರಿಕ ಕಚೇರಿಗಳ ವಿಚಾರದಲ್ಲಿ ಅಲ್ಲಿನ ಬ್ರೀಟಿಷ್ ಸರ್ಕಾರ ಅಗತ್ಯ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ಸರಿಯಲ್ಲ ಎಂದು ಭಾರತ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಈ ಹಿಂದೆ 2019ರಲ್ಲಿ ಕಾಶ್ಮೀರಿ ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳ ರಾಯಭಾರಿ ಕಚೇರಿಯನ್ನು ಸುತ್ತುವರೆದು ಮೊಟ್ಟೆ ಸೇರಿದಂತೆ ಇನ್ನಿತರ ವಸ್ತು ಎಸೆದಿದ್ದರು. ಇವತ್ತಿನ ಘಟನೆ ಅದಕ್ಕಿಂತಲೂ ಕೆಟ್ಟದಾಗಿದೆ ಎಂದು ಹಳೆಯ ಘಟನೆಯೊಂದನ್ನು ಇಲ್ಲಿ ವಿವರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...