Homeಮುಖಪುಟಮೂರನೇ ದಿನಕ್ಕೆ ಕಾಲಿಟ್ಟ ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆ: ಮಾ.21ರ ಮಧ್ಯಾಹ್ನದವರೆಗೂ ಇಂಟರ್ನೆಟ್ ಬಂದ್

ಮೂರನೇ ದಿನಕ್ಕೆ ಕಾಲಿಟ್ಟ ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆ: ಮಾ.21ರ ಮಧ್ಯಾಹ್ನದವರೆಗೂ ಇಂಟರ್ನೆಟ್ ಬಂದ್

- Advertisement -
- Advertisement -

ಪಂಜಾಬ್ ಸರ್ಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳ ನಿಷೇಧವನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಸ್ತರಿಸಿದೆ. ಖಲಿಸ್ತಾನಿ ನಾಯಕ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಚಿಕ್ಕಪ್ಪ ಮತ್ತು ಚಾಲಕ ಜಲಂಧರ್ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಲಿಸ್ತಾನಿ ನಾಯಕನ ಬೇಟೆ ಕಾರ್ಯಾಚರಣೆಯು ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಪೊಲೀಸರು ಅಮೃತಪಾಲ್ ಸಿಂಗ್‌ನನ್ನು ಶೀಘ್ರವಾಗಿ ಬಂಧಿಸಲು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಅಮೃತಪಾಲ್ ಅವರ ಚಿಕ್ಕಪ್ಪ ಹರ್ಜಿತ್ ಸಿಂಗ್ ಮತ್ತು ಚಾಲಕ ಹರ್‌ಪ್ರೀತ್ ಸಿಂಗ್ ಅವರು ಭಾನುವಾರ ತಡರಾತ್ರಿ ಜಲಂಧರ್‌ನ ಮೆಹತ್‌ಪುರ ಪ್ರದೇಶದ ಗುರುದ್ವಾರದ ಬಳಿ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅಮೃತಪಾಲ್‌ಗಾಗಿ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಜಲಂಧರ್ ಎಸ್‌ಎಸ್‌ಪಿ (ಗ್ರಾಮೀಣ) ಸ್ವರನ್‌ದೀಪ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಸರ್ಕಾರವು ಮೊಬೈಲ್ ಇಂಟರ್ನೆಟ್ ಮತ್ತು SMS ಸೇವೆಗಳ ಅಮಾನತುವನ್ನು ಮಂಗಳವಾರ ಮಧ್ಯಾಹ್ನದವರೆಗೆ ವಿಸ್ತರಿಸಿದೆ.

ಇದನ್ನೂ ಓದಿ: ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

”ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು (2G/3G/45/5G/CDMA/GPRS), ಎಲ್ಲಾ SMS ಸೇವೆಗಳು (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳು, ಧ್ವನಿ ಕರೆಗಳನ್ನು ಹೊರತುಪಡಿಸಿ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧನಗಳನ್ನು ತಡೆಗಟ್ಟಲು ಮತ್ತು ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನು ತಡೆಗಟ್ಟಲು ಪಂಜಾಬ್‌ನ ಪ್ರಾದೇಶಿಕ ಇಂಟರ್ನೆಟ್ ಸೇವೆಗಳನ್ನು ಮಾರ್ಚ್ 20 (12.00 ಗಂಟೆಗಳು) ರಿಂದ ಮಾರ್ಚ್ 21 (12.00 ಗಂಟೆಗಳು) ವರೆಗೆ ನಿಷೇಧಿಸಲಾಗಿದೆ ಎಂದು ಗೃಹ ವ್ಯವಹಾರಗಳ ಇಲಾಖೆ ಮತ್ತು ನ್ಯಾಯಾಂಗದ ಆದೇಶವನ್ನು ಸೋಮವಾರ ಹೊರಡಿಸಲಾಗಿದೆ.

ಬ್ಯಾಂಕಿಂಗ್ ಸೌಲಭ್ಯಗಳು, ಆಸ್ಪತ್ರೆ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ಅಡ್ಡಿಯಾಗದಂತೆ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ತೀಳಿಸಿದ್ದಾರೆ.

ರಾಜ್ಯ ಅಧಿಕಾರಿಗಳು ಶನಿವಾರದಂದು ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಭಾನುವಾರ ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಿದ್ದರು. ನಂತರ ಸೋಮವಾರ ಮಧ್ಯಾಹ್ನದವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಯಿತು.

ಏತನ್ಮಧ್ಯೆ, ಅಮೃತಪಾಲ್ ಅವರ ಮರ್ಸಿಡಿಸ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಅವರ ಬೆಂಗಾವಲು ಪಡೆಯ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಭಾನುವಾರ ಪೊಲೀಸರು ಪಂಜಾಬ್‌ನಾದ್ಯಂತ ಧ್ವಜ ಮೆರವಣಿಗೆ ಮತ್ತು ಶೋಧ ಕಾರ್ಯವನ್ನು ಮುಂದುವರೆಸಿದರು. ಈ ಮಧ್ಯೆ 34 ಬೆಂಬಲಿಗರನ್ನು ಬಂಧಿಸಿದ್ದಾರೆ ಮತ್ತು ಬಂಧನದಲ್ಲಿದ್ದ ನಾಲ್ವರನ್ನು ದೂರದ ಅಸ್ಸಾಂನ ಜೈಲಿಗೆ ಸ್ಥಳಾಂತರಿಸಿದ್ದಾರೆ.

ಅಮೃತಪಾಲ್ ನೇತೃತ್ವದ ‘ವಾರಿಸ್ ಪಂಜಾಬ್ ದೇ’ ಅಂಶಗಳು ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಕದಡಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ದಮನ ಕಾರ್ಯಾಚರಣೆಗಳ ನಡೆಸುತ್ತಿರುವ ಪೊಲೀಸರು ಇದುವರೆಗೆ 112 ಜನರನ್ನು ಬಂಧಿಸಿದ್ದಾರೆ.

ಅಮೃತ್‌ಪಾಲ್ ಮತ್ತು ಅವರ ಬೆಂಬಲಿಗರು ಅಮೃತಸರ ಬಳಿಯ ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿ ಬಂಧನಕ್ಕೊಳಗಾದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ ವಾರಗಳ ನಂತರ ಪೊಲೀಸರು ದಮನಕಾರಿ ನಡೆ ಅನುಸರಿಸಿದ್ದಾರೆ.

ರಾಜ್ಯವು ಹೈ ಅಲರ್ಟ್‌ನಲ್ಲಿದ್ದು, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ಪಂಜಾಬ್‌ನ ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪೊಲೀಸ್ ಚೆಕ್‌ಪಾಯಿಂಟ್ ಭೇದಿಸಿದ ಅಮೃತಪಾಲ್ ಮತ್ತು ಅವರ ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಜಲಂಧರ್ ಗ್ರಾಮದಲ್ಲಿ ಪತ್ತೆಯಾದ ವಾಹನದಲ್ಲಿದ್ದ ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ

ಆ ಜಿಲ್ಲೆಯಲ್ಲಿ ಅಮೃತಪಾಲ್‌ನ ಏಳು ಸಹಚರರನ್ನು ಬಂಧಿಸಿದ ನಂತರ ಅಮೃತಸರ ಗ್ರಾಮಾಂತರ ಪೊಲೀಸರು ಶನಿವಾರ ರಾತ್ರಿ ಶಸ್ತ್ರಾಸ್ತ್ರ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ವಿವಿಧ ದೇಶಗಳು, ರಾಜ್ಯಗಳು ಮತ್ತು ನಗರಗಳಿಂದ ನಕಲಿ ಸುದ್ದಿಗಳನ್ನು ಹರಡುವವರ ಮತ್ತು ದ್ವೇಷ ಭಾಷಣಗಳನ್ನು ಮಾಡುವವರ ಮೇಲೆ ನಿಗಾ ಇಡಲಾಗಿದೆ. ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...