Homeಕರ್ನಾಟಕಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

- Advertisement -
- Advertisement -

“ಐತಿಹಾಸಿಕ ಪುರಾವೆಗಳಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ ಉಂಟಾಗುತ್ತದೆ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಉರಿಗೌಡ- ನಂಜೇಗೌಡ’ ಸಿನಿಮಾ ನಿರ್ಮಾಣ ಮಾಡುವುದಾಗಿ ಸಚಿವ ಮುನಿರತ್ನ ಮುಂದಾದ ಬೆನ್ನಲ್ಲೇ ಸ್ವಾಮೀಜಿಯವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿ ಮಾತನಾಡಿದ್ದು, ಗೊಂದಲಗಳನ್ನು ಸೃಷ್ಟಿಸದಂತೆ ಮನವರಿಕೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಡಾ.ದೇ.ಜವರೇಗೌಡರು ಸಂಪಾದಿಸಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ಹ.ಕ.ರಾಜೇಗೌಡರು ಬರೆದಿರುವ ಲೇಖನದಲ್ಲಿ ಉರಿಗೌಡ, ನಂಜೇಗೌಡರ ಪ್ರಸ್ತಾವಿದೆ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಕೊಂದಿರುವುದಕ್ಕೆ ಯಾವುದೇ ಸಾಕ್ಷಿಗಳು ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಮಾತನಾಡಿದ್ದು ಸಮುದಾಯದ ಭಾವನೆಗೆ ಧಕ್ಕೆಯಾಗದಿರಲಿ ಎಂದು ಆಶಿಸಿದ್ದಾರೆ.

ಸ್ವಾಮೀಜಿಯವರು ಹೇಳಿರುವುದೇನು?

ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.

ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.

ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.

ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.

ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.

ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.

ಇದನ್ನೂ ಓದಿರಿ: ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...