Homeಕರ್ನಾಟಕಮಾರ್ಚ್ 2023ರ ಗೌರಿ ಲಂಕೇಶ್ ಹತ್ಯಾ ಪ್ರಕರಣ ವಿಚಾರಣಾ ವರದಿ

ಮಾರ್ಚ್ 2023ರ ಗೌರಿ ಲಂಕೇಶ್ ಹತ್ಯಾ ಪ್ರಕರಣ ವಿಚಾರಣಾ ವರದಿ

- Advertisement -
- Advertisement -

ಗೌರಿ ಲಂಕೇಶ್ ಹತ್ಯಾ ಪ್ರಕರಣದ ಮಾರ್ಚ್ ತಿಂಗಳ ವಿಚಾರಣೆಯು ಮಾರ್ಚ್ 13 ರಿಂದ 17 ರವರೆಗೆ ನಡೆಯಿತು. ಮೂವರು ಸಾಕ್ಷಿಗಳ ಪ್ರಧಾನ ಹೇಳಿಕೆ ಮತ್ತದರ ಮೇಲೆ ಆರೋಪಿ ಪರ ವಕೀಲರ ಪಾಟಿ ಸವಾಲುಗಳು ನಡೆದವು, ಹಾಗೂ ಬಾಕಿ ಉಳಿದಿದ್ದ ಇನ್ನಿಬ್ಬರು ಸಾಕ್ಷಿಗಳ ಹೇಳಿಕೆ ಮತ್ತು ಪಾಟಿ ಸವಾಲುಗಳು ಮುಂದುವರೆದವು.

ಬಾಲರಾಜ್:  CI- SIT ಟೀಮಿನ ಸದಸ್ಯರು.

ಇವರು 2018 ರ ಮೇ 23 ರಂದು ಆರೋಪಿ ಸುಜಿತ್ ಕುಮಾರ್ ಉಡುಪಿಯಲ್ಲಿ ವಾಸವಿದ್ದ ಮನೆಯನ್ನು ಪಂಚರ ಎದುರಿಗೆ ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ತಪಾಸಣೆ ಮಾಡಿದ್ದರ ಬಗ್ಗೆ ಸಾಕ್ಷಿ ನುಡಿದರು. ಸುಜಿತ್ ಮನೆಯಲ್ಲಿ ಸುಜಿತ್ ಓಟರ್ ಕಾರ್ಡ್, ಕರ್ನಾಟಕ-ಮಹಾರಾಷ್ಟ್ರ ಭೂಪಟ, ಸನಾತನ ಸಂಸ್ಥೆಯ ಅಂಜಲಿ ಗಾಡ್ಗಿಲ್ ಎಂಬುವರು ಬರೆದ ಲೇಖನದ ಜೆರಾಕ್ಸ್ ಪ್ರತಿ, 18 ಮೊಬೈಲ್ ಸೆಟ್ಟುಗಳು ಮತ್ತು 15 ಮೊಬೈಲ್ ಪೌಚುಗಳು, ಹಾಗೂ ಮೂರು ಮೊಬೈಲ್ ಖರೀದಿಗೆ ಸಂಬಧಿಸಿದ ರಸೀದಿಗಳನ್ನು ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ನುಡಿದರು. ಆ ದಿನ ರಸೀದೆಯಲ್ಲಿ ಇದ್ದ ವಿಳಾಸದ ಮೇರೆಗೆ ಉಡುಪಿ ಬಸ್‌ ಸ್ಟ್ಯಾಂಡ್‌ನಲ್ಲಿದ ಐ ಮೊಬೈಲ್ ಅಂಗಡಿ ಮತ್ತು ಮಣಿಪಾಲದ ಸಿಟಿ ಪಾಯಿಂಟ್ ಮೊಬೈಲ್ ಅಂಗಡಿಯಲ್ಲಿ ಮೊಬೈಲ್ ಖರೀದಿಯ ಮೂಲ ರಸೀದಿಯನ್ನು ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ನುಡಿದರು.

ಹಾಗೆಯೇ 2018 ರ ಜುಲೈ 21 ರಂದು ಹುಬ್ಬಳ್ಳಿಗೆ ಹೋಗಿ ಬಾತ್ಮೀದಾರದ ಸಹಕಾರದೊಂದಿಗೆ ಆರೋಪಿಗಳಾದ ಅಮಿತ್ ಬಡ್ಡಿ ಮತ್ತು ಗಣೇಶ್ ಮಿಸ್ಕಿನ್ ಅವರುಗಳನ್ನು ಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿ, ಅಲ್ಲಿಂದ ಅವರನ್ನು ಬೆಂಗಳೂರಿಗೆ ಕರೆತಂದ ಬಗ್ಗೆಯೂ ಸಾಕ್ಷ್ಯ ನುಡಿದರು. ಹಾಗೂ ಸದರಿ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುತಿಸಿದರು.

ಪಾಟಿ ಸವಾಲು: ಆರೋಪಿ ಪರ ವಕೀಲ ಕೃಷ್ಣಮೂರ್ತಿಯವರು ಸಾಕ್ಷಿಯ ತಪಾಸಣೆ ಮಾಡುವಾಗ, ದಾಖಲು ಮಾಡುವಾಗ ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸದ ಬಗ್ಗೆ, ತಾವು ಸಹಿ ಮಾಡಿ ಪಡೆದುಕೊಂಡ ನೋಟೀಸಿನಲಿ ಕೈಬರಹದಿಂದ ಕೆಲವು ತಿದ್ದುಪಡಿ ಮಾಡಿರುವ ಬಗ್ಗೆ, ಹಾಗೂ ಸಾಕ್ಷಿಯ ಮೇಲೆ ಬೇರೆ ಪ್ರಕರಣದಲ್ಲಿ ಆರೋಪವಿರುವ ಬಗ್ಗೆ ಹಾಗೂ ಸಾಮಾನ್ಯವಾಗಿ ತಮ್ಮ ವ್ಯಾಪ್ತಿಯಲ್ಲಿ ಇಲ್ಲದ ಪ್ರಕರಣಗಳಲ್ಲಿ ತಲೆದೂರಿಸುತ್ತಾರೆ ಎಂಬ ಆರೋಪದ ಬಗ್ಗೆ ಪಾಟಿ ಸವಾಲು ಮಾಡಿದರು. ಹಾಗೂ ಅವರು ನುಡಿದ ಸಾಕ್ಷಿಗಳೆಲ್ಲವೂ ಸುಳ್ಳು ಎಂದು ಸವಾಲು ಹಾಕಿದರು. ಸಾಕ್ಷಿಯು ಅಲ್ಲಲ್ಲಿ ಕೈಬರಹದ ತಿದ್ದುಪಡಿ ಮಾಡಿರುವ ಬಗ್ಗೆ ಹಾಗೂ ಪಡೆದುಕೊಂಡ ನೋಟೀಸಿನಲ್ಲಿ ಕೆಲವು ನಿರ್ದಿಷ್ಟ ಸೂಚನೆಗಳು ಇಲ್ಲದಿರುವ ಬಗ್ಗೆ ಒಪ್ಪಿಕೊಂಡರೂ ಉಳಿದ ಎಲ್ಲಾ ಆರೋಪಗಳನ್ನು ನಿರಾಕರಿಸಿದರು.

ಮುಕುಂದ ವಿ: ಬಿಬಿಎಂಪಿ ಯಲ್ಲಿ ಎಸ್‌ಡಿಎ

ಇವರು 2018 ರ ಜೂನ್ 7 ರಂದು ಪೊಲೀಸರ ಕೋರಿಕೆ ಮೇರೆಗೆ ಮೇಲಧಿಕಾರಿಗಳು ಆದೇಶಿಸಿದ್ದರಿಂದ ತನಿಖೆಯಲ್ಲಿ ಪಂಚರಾಗಿ ಸಹಕರಿಸಿದ ಬಗ್ಗೆ ಸಾಕ್ಷಿ ನುಡಿದರು. ಜೂನ್ 7 ರಂದು ಸಿಐಡಿ ಕಚೇರಿಯಲ್ಲಿ ಆರೋಪಿ ಸುಜಿತ್ ಕುಮಾರ್ ಅವರ ಧ್ವನಿ ಮಾದರಿ ಮತ್ತು ಆರೋಪಿ ಸುಜಿತ್ ಕುಮಾರ್ ಮತ್ತು ಮತ್ತೊಬ್ಬ ಆರೋಪಿ ಮನೋಹರ್ ಅವರ ಕೈಬರಹದ ಮಾದರಿಗಳನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿ ಪೊಲೀಸರು ಪಡೆದುಕೊಂಡ ಬಗ್ಗೆ ಸಾಕ್ಷಿ ನುಡಿದರು. ಅದಕ್ಕೆ ಸಬಂಧಿಸಿದಂತೆ ತಾವು ಧೃಢಪಡಿಸಿ ನೀಡಿದ ಹೇಳಿಕೆ ಮತ್ತು ಸಹಿಗಳನ್ನು ಗುರುತಿಸಿದರು. ಮತ್ತು ವಿಡಿಯೋ ಕಾನ್ಫರೆನ್ಸಿನ ಮೂಲಕ ಆರೋಪಿ ಸುಜಿತ್ ಮತ್ತು ಮನೋಹರ್ ಅವರನ್ನು ಗುರುತಿಸಿದರು.

ಪಾಟಿ ಸವಾಲು: ಆರೋಪಿ ಪರ ವಕೀಲರು ಸಾಕ್ಷಿಯು ಪಂಚರಾಗಿ ಸಹಕರಿಸಲು ಅನುಸರಿಸಬೇಕಿದ್ದ ಪ್ರಕ್ರಿಯೆಗಳಲ್ಲಿ ಇರುವ ಲೋಪಗಳ ಬಗ್ಗೆ ಪ್ರಶ್ನಿಸಿದರು. ಹಾಗೂ ಸುಳ್ಳು ಸಾಕ್ಷ್ಯ ಹೇಳುತ್ತಿರುವುದಾಗಿ ಸವಾಲು ಮಾಡಿದರು. ಸಾಕ್ಷಿಯು ಅದನ್ನು ನಿರಾಕರಿಸಿದರು. ಧ್ವನಿ ಮುದ್ರಿಕೆಗಳ ಕಾಪಿಯನ್ನು ತಮಗೆ ಇನ್ನೂ ಒದಗಿಸದೇ ಇರುವುದರಿಂದ ಸಾಕ್ಷಿಯು ಅದನ್ನು ಧ್ರುಡೀಕರಿಸುವ ಬಗ್ಗೆ ಆರೋಪಿ ಪರ ವಕೀಲರು ತಕರಾರು ಮಾಡಿದರು. ಆದರೆ ಈಗಾಗಲೇ ಧ್ವನಿ ಮುದ್ರಿತ ಕಾಪಿಗಳನ್ನು ಡಿಫೆನ್ಸ್ ವಕೀಲರಿಗೆ ನೀಡದಿದ್ದಲ್ಲಿ ಅದರೊಳಗಿನ ಕಂಟೆಂಟ್ ಅನ್ನು ನ್ಯಾಯಾಲಯ ಮಾನ್ಯ ಮಾಡುವುದಿಲ್ಲ ಎಂದು ನೀಡಿರುವ ಆದೇಶವನ್ನು ನ್ಯಾಯಾಲಯದ ಗಮನಕ್ಕೆ ತರಲಾಯಿತು.

ಪ್ರವೀಣ್ ಕುಮಾರ್: ಕಡಬಗೆರೆ ಗ್ರಾಮ ಪಂಚಾಯತಿ ಸೆಕ್ರೆಟರಿ

ಇವರು ಪೊಲೀಸರ ಕೋರಿಕೆ ಮೇರೆಗೆ ಕಡಬಗರೆ ಗ್ರಾಮ ಪಂಚಾಯತಿಯ ಪಿಡಿಒ ಅವರಿಂದ ನಿರ್ದೇಶಿತನಾಗಿ ಪೊಲೀಸರ ತನಿಖೆಗೆ ಜೂನ್ 7 ರಂದು ಪಂಚರಾಗಿ ಸಹಕರಿಸಿದ ಬಗ್ಗೆ ಸಾಕ್ಷ್ಯ ನುಡಿದರು. ಪೊಲೀಸರೊಂದಿಗೆ ಸೀಗೆ ಹಳ್ಳಿ ಗೇಟ್ ಬಳಿ ಇರುವ ಸುರೇಶ್ ಎಂಬುವರ ಮನೆಯ ಮೊದಲ ಮಹಡಿಯಲ್ಲಿ ಆರೋಪಿ ತಾನು ವಾಸವಿದ್ದುದಾಗಿ ಪೊಲೀಸರು ಕರೆದುಕೊಂಡು ಬಂದಿದ್ದ ಆರೋಪಿ ಅಮೋಲ್ ಕಾಳೆ ಹೇಳಿದ್ದಾಗಿ ಸಾಕ್ಷಿ ನುಡಿದರು. ಆದರೆ ಮನೆಯ ತಪಾಸನೆಯ ಪಂಚನಾಮೆಗೆ ಸಹಿ ಹಾಕಲು ಆರೋಪಿ ನಿರಾಕರಿಸಿದ ಬಗೆಗೂ ಹೇಳಿಕೆ ನೀಡಿದರು. ಆ ನಂತರ ಸಾಯಿ ಲಕ್ಷ್ಮಿ ಲೇ ಔಟ್ ಬಳಿ ಇದ್ದ ಅಂಗಡಿ ಮಳಿಗೆಯಲ್ಲಿ ಒಂದೆರೆಡು ದಿನ ವಾಸವಿದ್ದ ಬಗ್ಗೆ ಆರೋಪಿ ಅಮೋಲ್ ಕಾಳೆ ಹೇಳಿದರೂ ನಂತರ ನಡೆದ ಅಂಗಡಿಯ ಪಂಚನಾಮೆಗೆ ಸಹಿ ಹಾಕಲು ಒಪ್ಪಲಿಲ್ಲ. ಆ ಪ್ರತಿಯೊಂದು ಕಡೆಯಲ್ಲೂ ಪೊಲಿಸರು ತಮ್ಮೆಲ್ಲರನ್ನು ಒಟ್ಟಾಗಿಸಿ ಫ಼ೋಟೊ ತೆಗೆದ ಬಗ್ಗೆ ಹೇಳಿದರು ಮತ್ತು ಅದನ್ನು ಗುರುತಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಅಮೋಲ್ ಕಾಳೆಯನ್ನು ಗುರುತಿಸಿದರು. ಖುದ್ದಾಗಿ ತೋರಿಸಿದರೆ ಸುರೇಶ್ ಅವರನ್ನು ಗುರುತಿಸುವುದಾಗಿ ಹೇಳಿದರು. ಪ್ರಾಸಿಕ್ಯುಷನ್ ವಕೀಲರು ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರು ಮಾಡುವಂತೆ ಆದೇಶಿಸಲು ಕೋರಿದರು. ಮರುದಿನ ಖುದ್ದು ಹಾಜರಾದ ಆರೋಪಿಗಳ ಹತ್ತಿರ ಹೋಗಿ ಸಾಕ್ಷಿಯು ಆರೋಪಿ ಸುರೇಶ್ ಅವರನ್ನು ಗುರುತಿಸಿದರು. ಸಂಬಂಧಪಟ್ಟ ಆರೋಪಿ ತಾನು ಸುರೇಶ್ ಎಂದು ಒಪ್ಪಿಕೊಂಡರು.

ಪಾಟಿ ಸವಾಲು : ಆರೋಪಿ ಪರ ವಕೀಲರು ಸರ್ಕಾರಿ ಸಿಬ್ಬಂದಿಯಾಗಿ ಪೊಲಿಸ್ ಪಂಚನಾಮೆಗೆ ಸಹಕರಿಸುವ ಮುನ್ನ ಪಾಲಿಸ ಬೇಕಾದ ಪ್ರಕ್ರಿಯೆಗಳಲ್ಲಿ ಇರುವ ಲೋಪಗಳ ಬಗ್ಗೆ, ಹಾಗೂ ಅದರಲ್ಲಿ ಇರುವ ಕೈಬರಹ ತಿದ್ದುಪಡಿಗಳ ಬಗ್ಗೆ ಪ್ರಶ್ನಿಸಿದರು. ಸುಳ್ಳು ಸಾಕ್ಷ್ಯ ನುಡಿಯುತ್ತಿದೀರಿ ಎಂದು ಆರೋಪಿಸಿದರು. ಅವೆಲ್ಲವನ್ನು ಸಾಕ್ಷಿಯು ನಿರಾಕರಿಸಿದರು.

ರವಿಕುಮಾರ್: ಡಿವಿಆರ್ ಪಂಚನಾಮೆಯ ಸಾಕ್ಷಿ

ಇವರು ಎಮ್‌ಎನ್‌ಸಿ ಗಳಿಗೆ ಫುಡ್ ಸಪ್ಲೈ ಮಾಡುವ ಬಿಸಿನೆಸ್ ನಲ್ಲಿದ್ದು 2017 ರ ಸೆಪ್ಟೆಬರ್ 5ರ ಮಧ್ಯರಾತ್ರಿ ಟೀ ಕುಡಿಯಲು ರಾಜರಾಜೇಶ್ವರಿ ನಗರದ ಬಳಿ ನಿಂತಿದ್ದಾಗ ಪೊಲೀಸರ ಕೋರಿಕೆ ಮೇರೆಗೆ ಅವರು ವಶಪಡಿಸಿಕೊಂಡಿದ್ದ ಸಿಸಿಟಿವಿಗಳ ಡಿವಿಆರ್ ಗಳ ಪಂಚನಾಮೆಗೆ ಸಾಕ್ಷಿಯಾದ ಬಗ್ಗೆ ಹೇಳಿದರು.

ಪಾಟಿ ಸವಾಲು: ಮುಂದುವರೆದ ಇವರ ಪಾಟಿ ಸವಾಲಿನಲ್ಲಿ ಆರೋಪಿ ಪರ ವಕೀಲರು ಮುಖ್ಯವಾಗಿ ಪ್ರದರ್ಶಿತವಾದ ಡಿವಿಆರ್ ರೆಕಾರ್ಡ್ ನಲ್ಲಿ ಸೆಪ್ಟೆಂಬರ್ 5 ರ ರಾತ್ರಿ 7-7.30 ರವರೆಗಿನ ರೆಕಾರ್ಡಿಂಗ್ ನೋಡಿದಾಗ ಸಮಯ 7.19ಕ್ಕೆ ಗೌರಿಯವರು ಗೇಟನ್ನು ತೆರೆಯುತ್ತಿರುವ ದೃಶ್ಯವಿದೆ. ಆಗ ಅವರ ಮೇಲೆ ದಾಳಿ ನಡೆದಿಲ್ಲ ಅಲ್ಲವೇ ಎಂದು ಕೇಳಿದಾಗ ಹೌದು ಎಂದು ನುಡಿದರು. ಹಾಗೆಯೇ ತಮ್ಮ ವ್ಯವಹಾರಕ್ಕೆ ಪೊಲೀಸರಿಂದ ಸಹಾಯ ಬೇಕಾಗುತ್ತದೆ ಎಂಬ ಕಾರಣಕ್ಕೆ ಸುಳ್ಳು ಸಾಕ್ಷಿ ನುಡಿಯುತ್ತಿದೀರ ಎಂಬ ಆರೋಪವನ್ನು ನಿರಾಕರಿಸಿದರು.

ಪ್ರಕಾಶ್: ಎಸಿಪಿ- 2017 ಸೆಪ್ಟೆಂಬರ್ 5-7 ರವರೆಗೆ ಪ್ರಕರಣದ ತನಿಖಾಧಿಕಾರಿಯಾಗಿದ್ದವರು

ಮುಂದುವರೆದ ಈ ಸಾಕ್ಷಿಯ ವಿಚಾರಣೆಯಲ್ಲಿ ಸಾಕ್ಷಿಯು ತಾವು ವಶಪಡಿಸಿಕೊಂಡ ಡಿವಿಆರ್ ಇಂದ ಪ್ರದರ್ಶಿಸಲಾದ ದೃಶ್ಯದಲ್ಲಿ ಗೌರಿ ಲಂಕೇಶ್ ಗೇಟನ್ನು ತೆರೆಯುತ್ತಿರುವುದು, ಆಗ ಕಾರಿನ ಒಂದು ಸಿಂಗಲ್ ಲೈಟ್ ಆನ್ ಆಗಿರುವುದು ಮತ್ತು ಅಪರಿಚಿತನೊಬ್ಬ ಬಂದು ಗೌರಿ ಲಂಕೇಶ್ ಗೆ ಶೂಟ್ ಮಾಡಿ ಹೋಗುತ್ತಿರುವುದು ಕಂಡುಬರುತ್ತದೆಂದು ಗುರುತಿಸಿದರು. ಮತ್ತು ಈ ಪುರಾವೆಯನ್ನು ದಾಖಲಿಸಲಾಯಿತು….

ಪಾಟಿ ಸವಾಲು: ಆರೋಪಿ ಪರ ವಕೀಲರು ಪ್ರಧಾನವಾಗಿ

ಗೌರಿ ಲಂಕೇಶರ ಸಾವನ್ನು ಖಚಿತ ಪಡಿಸಿಕೊಳ್ಳದೆ ದೇಹವನ್ನು ಶವಾಗಾರಕ್ಕೆ ಕಳಿಸಿದ ಬಗ್ಗೆ,

ಪೊಲೀಸರ ವರದಿಯಲ್ಲಿ ನಮೂದಾಗಿದ್ದ ಸಮಯದಂತೆ ಸಿಸಿಟಿವಿ ಡಿವಿಆರ್ ನಲ್ಲಿ ಇಲ್ಲದಿರುವ ಬಗ್ಗೆ,

ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸದ ಬಗ್ಗೆ ಪ್ರಶ್ನಿಸಿದರು.

ಸಾಕ್ಷಿಯು ತಾನು2017 ರ ಸೆಪ್ಟೆಂಬರ್ 5 ರ ರಾತ್ರಿಯಿಂದ 7 ರ ಬೆಳಿಗ್ಗೆಯವರೆಗೆ ಕೇವಲ ತಾತ್ಕಾಲಿಕ ತನಿಖಾಧಿಕಾರಿಯಾಗಿದ್ದರಿಂದ ನಂತರದ ವಿವರಗಳನ್ನು ಗಮನಿಸದ ಬಗ್ಗೆ ಮತ್ತು ಪೊಲೀಸ್ ನಿಯಮಾವಳಿಗಳ ಪ್ರಕಾರ ನಡೆದುಕೊಂಡಿರುವ ಬಗ್ಗೆ ಸಾಕ್ಷಿ ನುಡಿದರು. ಸಾಮಾನ್ಯವಾಗಿ ಡಿವಿಅರ್ ನಲ್ಲಿ ನಮೂದಾಗಿರುವ ಸಮಯಕ್ಕೂ ನೈಜ ಸಮಯಕ್ಕೂ ವ್ಯತ್ಯಾಸವಿರುವ ಬಗ್ಗೆಯೂ ಹೇಳಿದರು.

ಮತ್ತು ಗೌರಿಯವರ ಸಾವನ್ನು ಖಚಿತಪಡಿಸಿಕೊಳ್ಳದೆ ಶವಾಗಾರಕ್ಕೆ ಕಳಿಸಲಾಯಿತೆಂಬ ಮತ್ತು ಸುಳ್ಳು ಸಾಕ್ಷಿ ನುಡಿಯುತ್ತಿದ್ದೇನೆ ಎಂಬ ಆರೋಪವನ್ನು ನಿರಾಕರಿಸಿದರು.

ಈ ಸಾಕ್ಷಿಯ ಪಾಟಿ ಸವಾಲು ಮುಂದುವರೆಯಲಿದೆ.
ಮುಂದಿನ ವಿಚಾರಣೆ 2023ರ ಮೇ 8 ಕ್ಕೆ ನಿಗದಿಯಾಗಿದೆ.

ಈ ಮಧ್ಯೆ ಗೌರಿಯವರು ಶೂಟ್ ಆದ ದೃಷ್ಯಾವಳಿಯನ್ನು ಕಾರಾಗೃಹದಲ್ಲಿರುವ ಆರೋಪಿಗಳಿಗೆ ತೋರಿಸಿ ಅವರೊಂದಿಗೆ ಸಮಾಲೋಚನೆ ಮಾಡಲು ಆರೋಪಿ ಪರ ವಕೀಲರು ಅವಕಾಶ ಕೋರಿದರು. ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಅವರಿಗೆ ಅವಕಾಶ ನೀಡಿತು.

ಈಗಾಗಲೇ ತಿಳಿಸಿದಂತೆ ಪೊಲೀಸ್ ಅಧಿಕಾರಿಗಳ ವಿಶೇಷ ಕೋರಿಕೆಯ ಮೇರೆಗೆ ಕಳೆದ ತಿಂಗಳಿಂದ ಗೌರಿ ಲಂಕೇಶ್ ಹತ್ಯಾ ವಿಚಾರಣೆಯು ಇನ್- ಕ್ಯಾಮೆರಾ – ಗೋಪ್ಯವಾಗಿ ನಡೆಯುತ್ತಿದೆ. ಅಂದರೆ ವಿಚಾರಣೆ ನಡೆಯುವಾಗ ಸಾರ್ವಜನಿಕರಿಗೆ ಮತ್ತು ಪತ್ರಕರ್ತರಿಗೆ ಪ್ರವೇಶವಿರುವುದಿಲ್ಲ.

ಈ ವರದಿಯನ್ನು, ಕೋರ್ಟ್ ವೆಬ್ ಸೈಟಿನಲ್ಲಿರುವ ಸಾಕ್ಷಿಗಳ deposition ಗಳನ್ನೂ ಮತ್ತು ಆರೋಪಿ ಪರ ವಕೀಲರಾದ ಕೃಷ್ಣಮೂರ್ತಿ ಪಿ. ಮತ್ತು ಸರ್ಕಾರಿ ವಕೀಲರಾದ ಬಾಲನ್ ಅವರು ಕೊಟ್ಟ ಮಾಹಿತಿಗಳನ್ನು ಆಧರಿಸಿ ಸಿದ್ಧಪಡಿಸಲಾಗಿದೆ.

  • ಶಿವಸುಂದರ್

ಇದನ್ನೂ ಓದಿ: ‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...