Homeಕರ್ನಾಟಕ'ಯುವ ನಿಧಿ' ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

‘ಯುವ ನಿಧಿ’ ಯೋಜನೆ- ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ.: ರಾಹುಲ್‌ ಗಾಂಧಿ ಘೋ‍ಷಣೆ

- Advertisement -
- Advertisement -

ಬೆಳಗಾವಿಯಲ್ಲಿ ಇಂದು(ಮಾ. 20) ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗವಹಿಸಿದ್ದರು. ಈ ವೇಳೆ ಆಡಳಿತಾರೂಢ ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿರುವ 40 ಪರ್ಸೆಂಟ್ ಕಮೀಷನ್ ಸರ್ಕಾರ ರಾಜ್ಯದ ಉದ್ಯೋಗ ನೀಡದೆ ಯುವಜನರ ಬದುಕನ್ನೇ ಹಾಳುಮಾಡಿದೆ ಎಂದು ಕಿಡಿಕಾರಿದ್ದಾರೆ.

ಯುವ ಕ್ರಾಂತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ನಾನು ಭಾರತ್ ಜೋಡೋ ಯಾತ್ರೆ ಮಾಡುವ ಸಂದರ್ಭದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಾಗ ಒಂದು ವಿಚಾರವನ್ನು ಅರಿತುಕೊಂಡೆ. ಇಲ್ಲಿ ನಿರುದ್ಯೋಗ ಸಮಸ್ಯೆಯು ಯುವಕರನ್ನು ಕಾಡುತ್ತಿದೆ. ಭ್ರಷ್ಟ ಬಿಜೆಪಿ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಸೃಷ್ಟಿಸಿದೆ. ಇದನ್ನು ಅರ್ಥಮಾಡಿಕೊಳ್ಳಲು ನಾನು ಸಾವಿರಾರು ಯುವಕರೊಂದಿಗೆ ಮಾತನಾಡಿದ್ದೆನೆ” ಎಂದು ಹೇಳಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ 10 ಲಕ್ಷ ಉದ್ಯೋಗಗಳನ್ನು ನೀಡುತ್ತೇವೆ. ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” ಎಂದು ಯುವಕರಿಗೆ ರಾಹುಲ್‌ ಭರವಸೆ ನೀಡಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಚುನಾವಣೆಯಲ್ಲಿ ಗೆದ್ದ ನಂತರ ಯುವ ನಿಧಿ ಯೋಜನೆಯನ್ನು ತಕ್ಷಣವೇ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ. ಇದು ಎರಡು ವರ್ಷಗಳ ವರೆಗೆ ಮುಂದುವರಿಯುತ್ತದೆ” ಎಂದು ರಾಹುಲ್‌ ಗಾಂಧಿ ಘೋಷಿಸಿದರು.

”ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇರುವುದನ್ನು ನಾನು ಈಗಾಗಲೇ ಗಮನಿಸಿದ್ದೇನೆ. ರಾಜ್ಯ ಘಟಕ ಬಯಸಿದರೆ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಪ್ರವಾಸ ಮಾಡಲು ಸಿದ್ಧನಿದ್ದೇನೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದ್ದೇವೆ” ಎಂದು ಅವರು ಹೇಳಿದರು.

‘ದೇಶದ ಅತ್ಯಂತ ಭ್ರಷ್ಟ ಸರ್ಕಾರ ‘ಕರ್ನಾಟಕದಲ್ಲಿನ ಬಿಜೆಪಿ ಸರ್ಕಾರ ಎಂದು ಎಲ್ಲ ವರ್ಗದ ಜನ ಹೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿಗಳಿಗೆ ಪತ್ರ ಬರೆದು ರಾಜ್ಯದಲ್ಲಿ 40 ಪರ್ಸೆಂಟ್‌ ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರಿದ್ದಾರೆ. ಆದರೂ ಪ್ರಧಾನಿಗಳು ಈ 40 ಪರ್ಸೆಂಟ್‌ ಕಮಿಷನ್ ಸರ್ಕಾರದ ಬಗ್ಗೆ ಮಾತನಾಡುತ್ತಿಲ್ಲ” ಎಂದರು.

ರಾಜ್ಯದ ಮಹಿಳೆಯರ ಕಷ್ಟಕ್ಕೆ ಪರಿಹಾರ ನೀಡಲು ‘ಗೃಹಲಕ್ಷ್ಮಿ’ ಯೋಜನೆ ಮೂಲಕ ಮನೆಯೊಡತಿಗೆ 2000ರೂ. ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ, ‘ಗೃಹಜ್ಯೋತಿ’ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಅಷ್ಟೇ ಅಲ್ಲದೆ, ನಿರುದ್ಯೋಗಿ ಯುವಕರಿಗಾಗಿ ‘ಯುವ ನಿಧಿ’ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಪದವಿ ಪಡೆದಿರುವ ನಿರುದ್ಯೋಗಿಗಳಿಗೆ 3000 ರೂ. ನೀಡಲಾಗುತ್ತದೆ. ಡಿಪ್ಲೋಮಾ ಹೊಂದಿರುವ ನಿರುದ್ಯೋಗಿಗಳಿಗೆ 1500 ರೂ. ಗಳನ್ನು ನೀಡಲಾಗುತ್ತದೆ ಎಂದು ರಾಹುಲ್ ಹೇಳಿದರು.

”ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಕರ್ನಾಟಕದ ಮೂಲಕ ಸಾಗಿದಾಗ ಅಭೂತಪೂರ್ವ ಬೆಂಬಲ ನೀಡಿ ಯಾತ್ರೆ ಯಶಸ್ಸುಗೊಳಿಸಿದ್ದಿರಿ. ಅದಕ್ಕಾಗಿ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ದೇಶ ಯಾರೋ ಒಬ್ಬರ ಸ್ವತ್ತಲ್ಲ, ಅಧಾನಿ ಸ್ವತ್ತೂ ಅಲ್ಲ. ಈ ದೇಶ ರೈತರು, ಯುವಕರು, ಬಡವರು ಸೇರಿದಂತೆ ಎಲ್ಲರಿಗೂ ಸೇರಿದ್ದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...