Homeಮುಖಪುಟಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಹೆಸರು ಕೈ ಬಿಟ್ಟ ಇಂಟರ್‌ಪೋಲ್‌; ಮೌನವಹಿಸಿದ ಸಿಬಿಐ

- Advertisement -
- Advertisement -

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿ ದೇಶದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಾಯಿ ಮುಚ್ಚಿಕೊಂಡಿದೆ. ಈ ಬಗ್ಗೆ ಸಿಬಿಐ ಮತ್ತು ಅವರ ಕಾನೂನು ತಂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ.

ಏನಿದು ಇಂಟರ್‌ಪೋಲ್‌?

ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಇದು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಇಂಟರ್‌ಪೋಲ್ ಮಾಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು. ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಸುಮಾರು 10 ತಿಂಗಳ ನಂತರ ಅವರು ಪೌರತ್ವವನ್ನು ಪಡೆದಿದ್ದರು.

ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

ಈ ವಿಷಯವು ಐದು ಸದಸ್ಯರ ಇಂಟರ್‌ಪೋಲ್ ಸಮಿತಿಯ ನ್ಯಾಯಾಲಯಕ್ಕೆ ಹೋಗಿದ್ದು, ಅವರ ವಾದಗಳನ್ನು ತಿರಸ್ಕರಿಸಿ ಮೋಸ್ಟ್ ವಾಂಟೆಡ್ ನೋಟಿಸ್‌ನ್ನು ತೆರವುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಹಗರಣದಲ್ಲಿ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ ಇಬ್ಬರನ್ನೂ ಸಿಬಿಐ ಪ್ರತ್ಯೇಕವಾಗಿ ಚಾರ್ಜ್ ಶೀಟ್ ಮಾಡಿದೆ.

ಸಿಬಿಐ ತನ್ನ ಚಾರ್ಜ್ ಶೀಟ್‌ಗಳಲ್ಲಿ, ಚೋಕ್ಸಿ 7,080.86 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಿತ್ತು, ಇದು 13,000 ಕೋಟಿ ರೂ.ಗೂ ಅಧಿಕ ವಂಚನೆಯಾಗಿದ್ದು, ದೇಶದ ಅತಿದೊಡ್ಡ ಬ್ಯಾಂಕಿಂಗ್ ಹಗರಣವಾಗಿದೆ. ನೀರವ್ ಮೋದಿ 6,000 ಕೋಟಿ ರೂ. ವಂಚಿಸಿದ್ದಾರೆ. ಚೋಕ್ಸಿಯ ಕಂಪನಿಗಳಿಗೆ 5,000 ಕೋಟಿ ರೂ.ಗೂ ಅಧಿಕ ಸಾಲದ ಸುಸ್ತಿದಾರರ ಪ್ರಕರಣವೂ ಸಿಬಿಐ ಅಡಿಯಲ್ಲಿ ತನಿಖೆಯ ಹಂತದಲ್ಲಿದೆ.

ಮೇ 2021ರಲ್ಲಿ ಬಾರ್ಬುಡಾ ನೆರೆಯ ಡೊಮಿನಿಕಾದಲ್ಲಿ ನಿಗೂಢವಾಗಿ ಕಾಣಿಸಿಕೊಂಡ ಚೋಕ್ಸಿಯನ್ನು ಅಲ್ಲಿ ಅಕ್ರಮ ಪ್ರವೇಶಕ್ಕಾಗಿ ಅವರನ್ನು ಬಂಧಿಸಲಾಯಿತು.

ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂಬ ಸುದ್ದಿ ಹೊರಬಿದ್ದ ನಂತರ, ಭಾರತವು ಸಿಬಿಐ ಡಿಐಜಿ ಶಾರದಾ ರಾವುತ್ ನೇತೃತ್ವದ ಅಧಿಕಾರಿಗಳ ತಂಡವನ್ನು ಅವರ ವಿರುದ್ಧ ಇಂಟರ್‌ಪೋಲ್ ರೆಡ್ ನೋಟಿಸ್ ಆಧಾರದ ಮೇಲೆ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಿತು.

ವಿಚಾರಣೆಗೆ ಅಂಗೀಕರಿಸಲ್ಪಟ್ಟ ಡೊಮಿನಿಕಾ ಹೈಕೋರ್ಟ್‌ಗೆ, ಚೋಕ್ಸಿ ಅವರ ವಕೀಲರು ಚಾಣಾಕ್ಷತನದಿಂದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿ ಭಾರತದ ಪ್ರಯತ್ನವನ್ನು ವಿಫಲಗೊಳಿಸಿದರು.

51 ದಿನಗಳ ಜೈಲುವಾಸದ ನಂತರ ಜುಲೈ 2021ರಂದು ಚೋಕ್ಸಿಗೆ ಡೊಮಿನಿಕಾ ಹೈಕೋರ್ಟ್ ಜಾಮೀನು ನೀಡಿತು. ನಂತರ, ಡೊಮಿನಿಕಾಗೆ ಅಕ್ರಮ ಪ್ರವೇಶದ ಚೋಕ್ಸಿ ವಿರುದ್ಧದ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...