Homeಕರ್ನಾಟಕಒಪಿಎಸ್ ಜಾರಿ ಪ್ರತಿಭಟನೆಯಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ: ಕೇಂದ್ರದ ಎಚ್ಚರಿಕೆ

ಒಪಿಎಸ್ ಜಾರಿ ಪ್ರತಿಭಟನೆಯಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ: ಕೇಂದ್ರದ ಎಚ್ಚರಿಕೆ

- Advertisement -
- Advertisement -

ಒಪಿಎಸ್ (ಹಳೆ ಪಿಂಚಣಿ ವ್ಯವಸ್ಥೆ) ಜಾರಿಗಾಗಿನ ಪ್ರತಿಭಟನೆಯಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ಕುರಿತು ಎಲ್ಲಾ ಸಚಿವಾಲಯಗಳಿಗೆ ಆದೇಶ ಹೊರಡಿಸಿದೆ. “ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆಗಾಗಿ ಜಂಟಿ ವೇದಿಕೆ’ ಎಂಬ ಬ್ಯಾನರ್‌ನ ಅಡಿಯಲ್ಲಿ ರಾಷ್ಟ್ರೀಯ ಜಂಟಿ ಕ್ರಿಯಾ ಮಂಡಳಿಯು ಮಾರ್ಚ್ 21 ರಂದು ದೇಶಾದ್ಯಂತ ಜಿಲ್ಲೆಗಳಲ್ಲಿ ಒಪಿಎಸ್ ಜಾರಿಗಾಗಿ ರ್ಯಾಲಿಗಳನ್ನು ಆಯೋಜಿಸಿದೆ. ಈ ಪ್ರತಿಭಟನೆಗೆ ಕರೆ ನೀಡಿದ ಹೇಳಿಕೆಯಲ್ಲಿ ಸಹಿ ಮಾಡಿದ ವ್ಯಕ್ತಿಗಳು ಮತ್ತು ಭಾಗವಹಿಸುವ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಹೊರಡಿಸಿದ ಸೂಚನೆಗಳಲ್ಲಿ “ಸಾಮೂಹಿಕ ಕ್ಯಾಶುಯಲ್ ರಜೆ ಹಾಕುವುದು, ಪ್ರತಿಭಟನೆಯಲ್ಲಿ ಭಾಗವಹಿಸುವುದು ಸೇರಿದಂತೆ ಯಾವುದೇ ರೀತಿಯ ಮುಷ್ಕರದಲ್ಲಿ ಭಾಗವಹಿಸುವುದು ಅಥವಾ ಯಾವುದೇ ರೀತಿಯ ಮುಷ್ಕರಕ್ಕೆ ಉತ್ತೇಜನ ನೀಡುವುದು ನಿಯಮ 7 CCS (ನಡತೆ) ನಿಯಮಗಳ ಉಲ್ಲಂಘನೆಯಾಗಿದೆ. ಯಾವುದೇ ಅನುಮತಿಯಿಲ್ಲದೆ ಕರ್ತವ್ಯದಿಂದ ಗೈರುಹಾಜರಾದ ನೌಕರನಿಗೆ 1964 ಮತ್ತು ಮೂಲಭೂತ ನಿಯಮಗಳ ನಿಯಮ 17 (1) ರ ನಿಬಂಧನೆಗೆ ಅನುಸಾರವಾಗಿ ವೇತನ ಮತ್ತು ಭತ್ಯೆಗಳನ್ನು ನೀಡುವುದಿಲ್ಲ” ಎಂದು ತಿಳಿಸಿದೆ.

ನಿಮ್ಮ ಸಚಿವಾಲಯ/ಇಲಾಖೆಗಳ ಅಡಿಯಲ್ಲಿನ ಕೇಂದ್ರ ಸರ್ಕಾರಿ ನೌಕರರಿಗೆ ಈ ಇಲಾಖೆಯಿಂದ ಹೊರಡಿಸಲಾದ ನಡವಳಿಕೆ ನಿಯಮಗಳು ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದ ಇತರ ನಿಯಮಗಳ ಅಡಿಯಲ್ಲಿ ಮೇಲಿನ ಸೂಚನೆಗಳನ್ನು ಸೂಕ್ತವಾಗಿ ತಿಳಿಸಬಹುದು. ಆ ಮೂಲಕ ಅವರು ಯಾವುದೇ ರೂಪದ ಪ್ರತಿಭಟನೆಗಳಲ್ಲಿ ಭಾಗವಹಿಸದಂತೆ ತಡೆಯಬಹುದು ಎಂದು ತಿಳಿಸಲಾಗಿದೆ.

“ಉದ್ದೇಶಿತ ಪ್ರತಿಭಟನೆ/ಮುಷ್ಕರದ ಅವಧಿಯಲ್ಲಿ ನೌಕರರು ಸಾಂದರ್ಭಿಕ ರಜೆ ಅಥವಾ ಇತರ ರೀತಿಯ ರಜೆಯನ್ನು ಕೋರಿದರೆ ಅದನ್ನು ಮಂಜೂರು ಮಾಡದಂತೆ ಸೂಚನೆಗಳನ್ನು ನೀಡಬಹುದು. ಒಂದು ವೇಳೆ ನೌಕರರು ಪ್ರತಿಭಟನೆ/ಮುಷ್ಕರ ನಡೆಸಿದರೆ, ಉದ್ದೇಶಿತ ಧರಣಿ/ಪ್ರತಿಭಟನೆ ಮುಷ್ಕರದಲ್ಲಿ ಭಾಗವಹಿಸಿದ ನೌಕರರ ಸಂಖ್ಯೆಯನ್ನು ಸೂಚಿಸುವ ವರದಿಯನ್ನು ದಿನದ ಸಂಜೆ ಈ ಇಲಾಖೆಗೆ ತಿಳಿಸಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದೇಶದ ಮೇರೆಗೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ತನ್ನ ನೌಕರರು ಒಪಿಎಸ್ ಬೇಡಿಕೆಯ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದೆ. ಯಾವುದೇ ಅಧಿಕಾರಿಗಳು ಮುಷ್ಕರ/ಪ್ರತಿಭಟನೆಯಲ್ಲಿ ಭಾಗವಹಿಸಿದ್ದಲ್ಲಿ ಸೂಕ್ತ ಶಿಸ್ತು/ಶಿಕ್ಷಾ ಕ್ರಮಕ್ಕಾಗಿ ಸಕ್ಷಮ ಪ್ರಾಧಿಕಾರದ ಗಮನಕ್ಕೆ ತರಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...