Homeಕರ್ನಾಟಕಒಪಿಎಸ್ ಜಾರಿ ಪ್ರತಿಭಟನೆಯಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ: ಕೇಂದ್ರದ ಎಚ್ಚರಿಕೆ

ಒಪಿಎಸ್ ಜಾರಿ ಪ್ರತಿಭಟನೆಯಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ: ಕೇಂದ್ರದ ಎಚ್ಚರಿಕೆ

- Advertisement -
- Advertisement -

ಒಪಿಎಸ್ (ಹಳೆ ಪಿಂಚಣಿ ವ್ಯವಸ್ಥೆ) ಜಾರಿಗಾಗಿನ ಪ್ರತಿಭಟನೆಯಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ಕುರಿತು ಎಲ್ಲಾ ಸಚಿವಾಲಯಗಳಿಗೆ ಆದೇಶ ಹೊರಡಿಸಿದೆ. “ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆಗಾಗಿ ಜಂಟಿ ವೇದಿಕೆ’ ಎಂಬ ಬ್ಯಾನರ್‌ನ ಅಡಿಯಲ್ಲಿ ರಾಷ್ಟ್ರೀಯ ಜಂಟಿ ಕ್ರಿಯಾ ಮಂಡಳಿಯು ಮಾರ್ಚ್ 21 ರಂದು ದೇಶಾದ್ಯಂತ ಜಿಲ್ಲೆಗಳಲ್ಲಿ ಒಪಿಎಸ್ ಜಾರಿಗಾಗಿ ರ್ಯಾಲಿಗಳನ್ನು ಆಯೋಜಿಸಿದೆ. ಈ ಪ್ರತಿಭಟನೆಗೆ ಕರೆ ನೀಡಿದ ಹೇಳಿಕೆಯಲ್ಲಿ ಸಹಿ ಮಾಡಿದ ವ್ಯಕ್ತಿಗಳು ಮತ್ತು ಭಾಗವಹಿಸುವ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಹೊರಡಿಸಿದ ಸೂಚನೆಗಳಲ್ಲಿ “ಸಾಮೂಹಿಕ ಕ್ಯಾಶುಯಲ್ ರಜೆ ಹಾಕುವುದು, ಪ್ರತಿಭಟನೆಯಲ್ಲಿ ಭಾಗವಹಿಸುವುದು ಸೇರಿದಂತೆ ಯಾವುದೇ ರೀತಿಯ ಮುಷ್ಕರದಲ್ಲಿ ಭಾಗವಹಿಸುವುದು ಅಥವಾ ಯಾವುದೇ ರೀತಿಯ ಮುಷ್ಕರಕ್ಕೆ ಉತ್ತೇಜನ ನೀಡುವುದು ನಿಯಮ 7 CCS (ನಡತೆ) ನಿಯಮಗಳ ಉಲ್ಲಂಘನೆಯಾಗಿದೆ. ಯಾವುದೇ ಅನುಮತಿಯಿಲ್ಲದೆ ಕರ್ತವ್ಯದಿಂದ ಗೈರುಹಾಜರಾದ ನೌಕರನಿಗೆ 1964 ಮತ್ತು ಮೂಲಭೂತ ನಿಯಮಗಳ ನಿಯಮ 17 (1) ರ ನಿಬಂಧನೆಗೆ ಅನುಸಾರವಾಗಿ ವೇತನ ಮತ್ತು ಭತ್ಯೆಗಳನ್ನು ನೀಡುವುದಿಲ್ಲ” ಎಂದು ತಿಳಿಸಿದೆ.

ನಿಮ್ಮ ಸಚಿವಾಲಯ/ಇಲಾಖೆಗಳ ಅಡಿಯಲ್ಲಿನ ಕೇಂದ್ರ ಸರ್ಕಾರಿ ನೌಕರರಿಗೆ ಈ ಇಲಾಖೆಯಿಂದ ಹೊರಡಿಸಲಾದ ನಡವಳಿಕೆ ನಿಯಮಗಳು ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದ ಇತರ ನಿಯಮಗಳ ಅಡಿಯಲ್ಲಿ ಮೇಲಿನ ಸೂಚನೆಗಳನ್ನು ಸೂಕ್ತವಾಗಿ ತಿಳಿಸಬಹುದು. ಆ ಮೂಲಕ ಅವರು ಯಾವುದೇ ರೂಪದ ಪ್ರತಿಭಟನೆಗಳಲ್ಲಿ ಭಾಗವಹಿಸದಂತೆ ತಡೆಯಬಹುದು ಎಂದು ತಿಳಿಸಲಾಗಿದೆ.

“ಉದ್ದೇಶಿತ ಪ್ರತಿಭಟನೆ/ಮುಷ್ಕರದ ಅವಧಿಯಲ್ಲಿ ನೌಕರರು ಸಾಂದರ್ಭಿಕ ರಜೆ ಅಥವಾ ಇತರ ರೀತಿಯ ರಜೆಯನ್ನು ಕೋರಿದರೆ ಅದನ್ನು ಮಂಜೂರು ಮಾಡದಂತೆ ಸೂಚನೆಗಳನ್ನು ನೀಡಬಹುದು. ಒಂದು ವೇಳೆ ನೌಕರರು ಪ್ರತಿಭಟನೆ/ಮುಷ್ಕರ ನಡೆಸಿದರೆ, ಉದ್ದೇಶಿತ ಧರಣಿ/ಪ್ರತಿಭಟನೆ ಮುಷ್ಕರದಲ್ಲಿ ಭಾಗವಹಿಸಿದ ನೌಕರರ ಸಂಖ್ಯೆಯನ್ನು ಸೂಚಿಸುವ ವರದಿಯನ್ನು ದಿನದ ಸಂಜೆ ಈ ಇಲಾಖೆಗೆ ತಿಳಿಸಬಹುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆದೇಶದ ಮೇರೆಗೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ತನ್ನ ನೌಕರರು ಒಪಿಎಸ್ ಬೇಡಿಕೆಯ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದೆ. ಯಾವುದೇ ಅಧಿಕಾರಿಗಳು ಮುಷ್ಕರ/ಪ್ರತಿಭಟನೆಯಲ್ಲಿ ಭಾಗವಹಿಸಿದ್ದಲ್ಲಿ ಸೂಕ್ತ ಶಿಸ್ತು/ಶಿಕ್ಷಾ ಕ್ರಮಕ್ಕಾಗಿ ಸಕ್ಷಮ ಪ್ರಾಧಿಕಾರದ ಗಮನಕ್ಕೆ ತರಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...