Homeಕರ್ನಾಟಕನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಟಿಪ್ಪುವನ್ನು ಕೊಂದಿದ್ದು ಉರಿಗೌಡ, ದೊಡ್ಡನಂಜೇಗೌಡ ಎಂಬ ನಕಲಿ ಇತಿಹಾಸವನ್ನು ಈ ನಾಟಕದಲ್ಲಿ ಸೇರಿಸಲಾಗಿದೆ

- Advertisement -
- Advertisement -

“ಉರಿಗೌಡ, ದೊಡ್ಡ ನಂಜೇಗೌಡ ಎಂಬ ಮಂಡ್ಯ ಒಕ್ಕಲಿಗರು ಟಿಪ್ಪು ಸುಲ್ತಾನರನ್ನು ಕೊಂದರು” ಎಂದು ನಕಲಿ ಇತಿಹಾಸವನ್ನು ಪ್ರತಿಪಾದಿಸುತ್ತಿರುವ ‘ಟಿಪ್ಪು ನಿಜ ಕನಸುಗಳು’ ನಾಟಕದ ಪ್ರದರ್ಶನವನ್ನು ಮೈಸೂರು ರಂಗಾಯಣ ಮುಂದುವರಿಸಿದೆ.

“ಕಲ್ಪಿತ ಪಾತ್ರಗಳನ್ನು ಇತಿಹಾಸ ಎನ್ನಲಾಗದು, ಈ ಕುರಿತು ಆಧಾರ ರಹಿತವಾಗಿ ಮಾತನಾಡುವುದು ಸಮುದಾಯಕ್ಕೆ ಮಾಡುವ ಅಪಚಾರ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಹೇಳಿಕೆ ನೀಡಿದ ಬಳಿಕವೂ ನಕಲಿ ಇತಿಹಾಸದ ಪ್ರದರ್ಶನವನ್ನು ರಂಗಾಯಣ ನಿಲ್ಲಿಸಿಲ್ಲ!

“ಸ್ವಾಮೀಜಿಯವರು ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸುತ್ತಿರುವ ಬಿಜೆಪಿ ನಾಯಕರು ಉರಿಗೌಡ, ನಂಜೇಗೌಡ ಕುರಿತು ಮಾತನಾಡುವುದನ್ನು ಹಾಗೂ ಸಿನಿಮಾ ಮಾಡುವುದನ್ನು ನಿಲ್ಲಿಸುತ್ತೇವೆ” ಎಂದು ಹೇಳುತ್ತಿದ್ದಾರೆ. ಆದರೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಬರೆದು ನಿರ್ದೇಶಿಸಿರುವ ‘ಟಿಪ್ಪು ನಿಜಕನಸುಗಳು’ ನಾಟಕ ಮಾತ್ರ ಸುಳ್ಳು ಇತಿಹಾಸವನ್ನೇ ಪ್ರತಿಪಾದಿಸುತ್ತಾ ಮುಂದುವರಿದಿದೆ. ಮಂಗಳವಾರ (ಮಾರ್ಚ್ 21) ಸಂಜೆ 6.30ಕ್ಕೆ ಮೈಸೂರು ರಂಗಾಯಣದ ಭೂಮಿಗೀತದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

‘ನಾನುಗೌರಿ.ಕಾಂ’ ತಂಡವು ಮೈಸೂರು ರಂಗಾಯಣಕ್ಕೆ ಕರೆ ಮಾಡಿದಾಗ, “ಇಂದು ನಾಟಕ ಪ್ರದರ್ಶನವಿದೆ. ಟಿಕೆಟ್‌ ಸೋಲ್ಡ್‌ ಔಟ್‌ ಆಗಿ ಒಂದು ವಾರವೇ ಆಯ್ತು” ಎಂದು ರಂಗಾಯಣ ಸಿಬ್ಬಂದಿಯೊಬ್ಬರು ಖಚಿತಪಡಿಸಿದ್ದಾರೆ.

ನಾಟಕ ಪ್ರದರ್ಶನಗಳು ಮುಂದೆಯೂ ನಡೆಯುತ್ತದೆಯೇ ಎಂದು ಕೇಳಲು ಅಡ್ಡಂಡ ಕಾರ್ಯಪ್ಪ ಅವರಿಗೆ ಕರೆ ಮಾಡಲಾಗಿತ್ತು. ಆದರೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಮಾರ್ಚ್ 19ರಂದು 50ನೇ ಪ್ರದರ್ಶನವನ್ನೂ ನಾಟಕ ಕಂಡಿದೆ. ರಂಗವಿನ್ಯಾಸವನ್ನು ಶಶಿಧರ ಅಡಪ, ವಸ್ತ್ರಪರಿಕರ ವಿನ್ಯಾಸವನ್ನು ಪ್ರಮೋದ್ ಶಿಗ್ಗಾಂವ್, ಸಂಗೀತ ನಿರ್ದೇಶನವನ್ನು ಧನಂಜಯ ಆರ್‌.ಸಿ., ಸುಬ್ರಮಣ್ಯ ಮೈಸೂರು, ಬೆಳಕು ನಿರ್ವಹಣೆಯನ್ನು ಮಹೇಶ್ ಕಲ್ಲತ್ತಿ ಮಾಡಿದ್ದಾರೆ.

“ಮುನಿರತ್ನ ಅವರು ಉರಿಗೌಡ, ನಂಜೇಗೌಡ ಹೆಸರಲ್ಲಿ ಸಿನಿಮಾ ಮಾಡಲು ಹೊರಟಿದ್ದನ್ನು ಶ್ರೀಗಳು ತಡೆದಿದ್ದಾರೆ. ಆದರೆ ಉರಿಗೌಡ, ನಂಜೇಗೌಡರೇ ಟಿಪ್ಪುವನ್ನು ಕೊಂದಿದ್ದು ಎಂದು ಪ್ರತಿಪಾದಿಸುತ್ತಿರುವ ನಾಟಕ ಪ್ರದರ್ಶನವೂ ನಿಲ್ಲಬೇಕು” ಎಂಬ ಒತ್ತಾಯಗಳು ಕೇಳಿಬಂದಿವೆ.

ನಾಟಕ ನಿರ್ಬಂಧಕ್ಕೆ ಆಗ್ರಹ

ಆಧಾರ ರಹಿತವಾಗಿ ರಚಿತವಾಗಿರುವ ನಾಟಕ ಪ್ರದರ್ಶನವನ್ನು ನಿಲ್ಲಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಅನೇಕರು ಪೋಸ್ಟ್‌ಗಳನ್ನು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು, “ಉರಿ, ನಂಜು ಕುರಿತ ಅಡ್ಡಾದಿಡ್ಡಿಯ ನಾಟಕವೂ ರದ್ದಾಗಲಿ. ಆದಿ ಚುಂಚನಗಿರಿ ಶ್ರೀಗಳ ನಿಲುವು ಸರಕಾರಕ್ಕೂ ಮಾದರಿಯಾಗಲಿ. ಸರ್ಕಾರ ಮಾಡುವ ಕೆಲಸವನ್ನು ಅವರು ಮಾಡಿದ್ದಾರೆ. ಸಿ.ಎಂ.ಬೊಮ್ಮಾಯಿಯವರೇ ದಯವಿಟ್ಟು ರಂಗಾಯಣದ ದುರ್ಬಳಕೆ ಯನ್ನು ನಿರ್ಬಂಧಿಸಿ” ಎಂದು ಒತ್ತಾಯಿಸಿದ್ದಾರೆ.

ಲೇಖಕ ನಾಗೇಗೌಡ ಕೀಲಾರ ಅವರು ಪೋಸ್ಟ್ ಮಾಡಿದ್ದು, “ಒಕ್ಕಲಿಗ ಸಂಘದ ಅಧ್ಯಕ್ಷರು ಅಡ್ಡಂಡ ಕಾರ್ಯಪ್ಪ ಅವರನ್ನು ತಮ್ಮ ಆಫೀಸ್‌ಗೆ ಕರೆಸಿ ಒಂದು ಒಳ್ಳೆಯ ಪಂದಿಕರಿ ಊಟ ಹಾಕಿಸಿ ಟಿಪ್ಪುವಿನ ನಿಜ ಕನಸುಗಳು ನಾಟಕ ಆಡಿಸೋದು ನಿಲ್ಲಿಸಪ್ಪ ಅಂತ ಪ್ರೀತಿಯಿಂದ ಬುದ್ಧಿವಾದ ಹೇಳಬೇಕು. ಹಂಗೂ ನಾಟಕ ಆಡಬೇಕು ಅಂತ ಇದ್ದರೆ ಉರಿಗೌಡ ಮತ್ತು ನಂಜೇಗೌಡ ಅನ್ನುವ ಕಪೋಲಕಲ್ಪಿತ ಪಾತ್ರಗಳನ್ನು ಡ್ರಾಪ್ ಮಾಡಿ ನಾಟಕ ಆಡಿಸಿ ಅಂತ ಸ್ಟ್ರಾಂಗ್ ಆಗಿ ಹೇಳಬೇಕು” ಎಂದಿದ್ದಾರೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡರು ಪ್ರತಿಕ್ರಿಯಿಸಿ, “ಉರೀಗೌಡ – ನಂಜೇಗೌಡ ಸಿನಿಮಾ ರದ್ದಾಗುವುದಾದರೆ, ಉರಿ – ನಂಜು ಪಾತ್ರವಿರುವ ಅಡ್ಡಂಡ ಕಾರ್ಯಪ್ಪನವರ ಟಿಪ್ಪುವಿನ ಕುರಿತ ವಿಕೃತ ನಾಟಕವೂ ರದ್ದಾಗಬೇಕಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಉರಿಗೌಡ, ನಂಜೇಗೌಡ ವಿವಾದದ ಕುರಿತು ಶ್ರಿಗಳು ಹೇಳಿದ್ದೇನು?

“ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.”

“ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.”

“ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.”

“ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.”

“ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.”

“ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.”

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Swamiji has time. Let him read the freedom movement of history & facts. Let him teach the people of Karnataka too. We welcome such initiatives.
    Thank u sir.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...