Homeಕರ್ನಾಟಕನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

ಟಿಪ್ಪುವನ್ನು ಕೊಂದಿದ್ದು ಉರಿಗೌಡ, ದೊಡ್ಡನಂಜೇಗೌಡ ಎಂಬ ನಕಲಿ ಇತಿಹಾಸವನ್ನು ಈ ನಾಟಕದಲ್ಲಿ ಸೇರಿಸಲಾಗಿದೆ

- Advertisement -
- Advertisement -

“ಉರಿಗೌಡ, ದೊಡ್ಡ ನಂಜೇಗೌಡ ಎಂಬ ಮಂಡ್ಯ ಒಕ್ಕಲಿಗರು ಟಿಪ್ಪು ಸುಲ್ತಾನರನ್ನು ಕೊಂದರು” ಎಂದು ನಕಲಿ ಇತಿಹಾಸವನ್ನು ಪ್ರತಿಪಾದಿಸುತ್ತಿರುವ ‘ಟಿಪ್ಪು ನಿಜ ಕನಸುಗಳು’ ನಾಟಕದ ಪ್ರದರ್ಶನವನ್ನು ಮೈಸೂರು ರಂಗಾಯಣ ಮುಂದುವರಿಸಿದೆ.

“ಕಲ್ಪಿತ ಪಾತ್ರಗಳನ್ನು ಇತಿಹಾಸ ಎನ್ನಲಾಗದು, ಈ ಕುರಿತು ಆಧಾರ ರಹಿತವಾಗಿ ಮಾತನಾಡುವುದು ಸಮುದಾಯಕ್ಕೆ ಮಾಡುವ ಅಪಚಾರ” ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಹೇಳಿಕೆ ನೀಡಿದ ಬಳಿಕವೂ ನಕಲಿ ಇತಿಹಾಸದ ಪ್ರದರ್ಶನವನ್ನು ರಂಗಾಯಣ ನಿಲ್ಲಿಸಿಲ್ಲ!

“ಸ್ವಾಮೀಜಿಯವರು ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸುತ್ತಿರುವ ಬಿಜೆಪಿ ನಾಯಕರು ಉರಿಗೌಡ, ನಂಜೇಗೌಡ ಕುರಿತು ಮಾತನಾಡುವುದನ್ನು ಹಾಗೂ ಸಿನಿಮಾ ಮಾಡುವುದನ್ನು ನಿಲ್ಲಿಸುತ್ತೇವೆ” ಎಂದು ಹೇಳುತ್ತಿದ್ದಾರೆ. ಆದರೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಬರೆದು ನಿರ್ದೇಶಿಸಿರುವ ‘ಟಿಪ್ಪು ನಿಜಕನಸುಗಳು’ ನಾಟಕ ಮಾತ್ರ ಸುಳ್ಳು ಇತಿಹಾಸವನ್ನೇ ಪ್ರತಿಪಾದಿಸುತ್ತಾ ಮುಂದುವರಿದಿದೆ. ಮಂಗಳವಾರ (ಮಾರ್ಚ್ 21) ಸಂಜೆ 6.30ಕ್ಕೆ ಮೈಸೂರು ರಂಗಾಯಣದ ಭೂಮಿಗೀತದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

‘ನಾನುಗೌರಿ.ಕಾಂ’ ತಂಡವು ಮೈಸೂರು ರಂಗಾಯಣಕ್ಕೆ ಕರೆ ಮಾಡಿದಾಗ, “ಇಂದು ನಾಟಕ ಪ್ರದರ್ಶನವಿದೆ. ಟಿಕೆಟ್‌ ಸೋಲ್ಡ್‌ ಔಟ್‌ ಆಗಿ ಒಂದು ವಾರವೇ ಆಯ್ತು” ಎಂದು ರಂಗಾಯಣ ಸಿಬ್ಬಂದಿಯೊಬ್ಬರು ಖಚಿತಪಡಿಸಿದ್ದಾರೆ.

ನಾಟಕ ಪ್ರದರ್ಶನಗಳು ಮುಂದೆಯೂ ನಡೆಯುತ್ತದೆಯೇ ಎಂದು ಕೇಳಲು ಅಡ್ಡಂಡ ಕಾರ್ಯಪ್ಪ ಅವರಿಗೆ ಕರೆ ಮಾಡಲಾಗಿತ್ತು. ಆದರೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಮಾರ್ಚ್ 19ರಂದು 50ನೇ ಪ್ರದರ್ಶನವನ್ನೂ ನಾಟಕ ಕಂಡಿದೆ. ರಂಗವಿನ್ಯಾಸವನ್ನು ಶಶಿಧರ ಅಡಪ, ವಸ್ತ್ರಪರಿಕರ ವಿನ್ಯಾಸವನ್ನು ಪ್ರಮೋದ್ ಶಿಗ್ಗಾಂವ್, ಸಂಗೀತ ನಿರ್ದೇಶನವನ್ನು ಧನಂಜಯ ಆರ್‌.ಸಿ., ಸುಬ್ರಮಣ್ಯ ಮೈಸೂರು, ಬೆಳಕು ನಿರ್ವಹಣೆಯನ್ನು ಮಹೇಶ್ ಕಲ್ಲತ್ತಿ ಮಾಡಿದ್ದಾರೆ.

“ಮುನಿರತ್ನ ಅವರು ಉರಿಗೌಡ, ನಂಜೇಗೌಡ ಹೆಸರಲ್ಲಿ ಸಿನಿಮಾ ಮಾಡಲು ಹೊರಟಿದ್ದನ್ನು ಶ್ರೀಗಳು ತಡೆದಿದ್ದಾರೆ. ಆದರೆ ಉರಿಗೌಡ, ನಂಜೇಗೌಡರೇ ಟಿಪ್ಪುವನ್ನು ಕೊಂದಿದ್ದು ಎಂದು ಪ್ರತಿಪಾದಿಸುತ್ತಿರುವ ನಾಟಕ ಪ್ರದರ್ಶನವೂ ನಿಲ್ಲಬೇಕು” ಎಂಬ ಒತ್ತಾಯಗಳು ಕೇಳಿಬಂದಿವೆ.

ನಾಟಕ ನಿರ್ಬಂಧಕ್ಕೆ ಆಗ್ರಹ

ಆಧಾರ ರಹಿತವಾಗಿ ರಚಿತವಾಗಿರುವ ನಾಟಕ ಪ್ರದರ್ಶನವನ್ನು ನಿಲ್ಲಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಅನೇಕರು ಪೋಸ್ಟ್‌ಗಳನ್ನು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ಸನತ್‌ ಕುಮಾರ್‌ ಬೆಳಗಲಿಯವರು, “ಉರಿ, ನಂಜು ಕುರಿತ ಅಡ್ಡಾದಿಡ್ಡಿಯ ನಾಟಕವೂ ರದ್ದಾಗಲಿ. ಆದಿ ಚುಂಚನಗಿರಿ ಶ್ರೀಗಳ ನಿಲುವು ಸರಕಾರಕ್ಕೂ ಮಾದರಿಯಾಗಲಿ. ಸರ್ಕಾರ ಮಾಡುವ ಕೆಲಸವನ್ನು ಅವರು ಮಾಡಿದ್ದಾರೆ. ಸಿ.ಎಂ.ಬೊಮ್ಮಾಯಿಯವರೇ ದಯವಿಟ್ಟು ರಂಗಾಯಣದ ದುರ್ಬಳಕೆ ಯನ್ನು ನಿರ್ಬಂಧಿಸಿ” ಎಂದು ಒತ್ತಾಯಿಸಿದ್ದಾರೆ.

ಲೇಖಕ ನಾಗೇಗೌಡ ಕೀಲಾರ ಅವರು ಪೋಸ್ಟ್ ಮಾಡಿದ್ದು, “ಒಕ್ಕಲಿಗ ಸಂಘದ ಅಧ್ಯಕ್ಷರು ಅಡ್ಡಂಡ ಕಾರ್ಯಪ್ಪ ಅವರನ್ನು ತಮ್ಮ ಆಫೀಸ್‌ಗೆ ಕರೆಸಿ ಒಂದು ಒಳ್ಳೆಯ ಪಂದಿಕರಿ ಊಟ ಹಾಕಿಸಿ ಟಿಪ್ಪುವಿನ ನಿಜ ಕನಸುಗಳು ನಾಟಕ ಆಡಿಸೋದು ನಿಲ್ಲಿಸಪ್ಪ ಅಂತ ಪ್ರೀತಿಯಿಂದ ಬುದ್ಧಿವಾದ ಹೇಳಬೇಕು. ಹಂಗೂ ನಾಟಕ ಆಡಬೇಕು ಅಂತ ಇದ್ದರೆ ಉರಿಗೌಡ ಮತ್ತು ನಂಜೇಗೌಡ ಅನ್ನುವ ಕಪೋಲಕಲ್ಪಿತ ಪಾತ್ರಗಳನ್ನು ಡ್ರಾಪ್ ಮಾಡಿ ನಾಟಕ ಆಡಿಸಿ ಅಂತ ಸ್ಟ್ರಾಂಗ್ ಆಗಿ ಹೇಳಬೇಕು” ಎಂದಿದ್ದಾರೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡರು ಪ್ರತಿಕ್ರಿಯಿಸಿ, “ಉರೀಗೌಡ – ನಂಜೇಗೌಡ ಸಿನಿಮಾ ರದ್ದಾಗುವುದಾದರೆ, ಉರಿ – ನಂಜು ಪಾತ್ರವಿರುವ ಅಡ್ಡಂಡ ಕಾರ್ಯಪ್ಪನವರ ಟಿಪ್ಪುವಿನ ಕುರಿತ ವಿಕೃತ ನಾಟಕವೂ ರದ್ದಾಗಬೇಕಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಉರಿಗೌಡ, ನಂಜೇಗೌಡ ವಿವಾದದ ಕುರಿತು ಶ್ರಿಗಳು ಹೇಳಿದ್ದೇನು?

“ದೇಜಗೌ ಅವರು ಸಂಪಾದನೆ ಮಾಡಿರುವ ‘ಸುವರ್ಣ ಮಂಡ್ಯ’ ಕೃತಿಯಲ್ಲಿನ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಹ.ಕ.ರಾಜೇಗೌಡರು ಬರೆದಿದ್ದಾರೆ. ಒಂದೊಂದು ವಿಚಾರಗಳು ಒಂದೊಂದು ಕೃತಿಯಲ್ಲಿ ಸಾಮಾನ್ಯವಾಗಿ ಬಂದಿರುತ್ತವೆ. ಹ.ಕ.ರಾಜೇಗೌಡರು ಬರೆದಿರುವುದರಲ್ಲಿ ನೇರವಾಗಿ ಟಿಪ್ಪು ಮತ್ತು ಉರಿಗೌಡ, ನಂಜೇಗೌಡರ ವಿಚಾರ ಪ್ರಸ್ತಾಪವಾಗಿಲ್ಲ.”

“ಇದುವರೆಗೆ ಗೊಂದಲಗಳು ಉಂಟಾಗಿವೆ. ಯುವಕರ ಅಮೂಲ್ಯವಾದ ಸಮಯವನ್ನು ವಿನಾಕಾರಣವಾದ ಚರ್ಚೆಯ ಮೂಲಕ ಹಾಳು ಮಾಡಬಾರದು. ಆಧುನಿಕ ಜಗತ್ತಿಗೆ ಸರಿಯಾದ ಮಾಹಿತಿಯನ್ನು ಕೊಡದೆ ದಾರಿ ತಪ್ಪಿಸುವ ಕೆಲಸ ಆಗಬಾರದು.”

“ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ.”

“ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು.”

“ಮುನಿರತ್ನ ಅವರು ನಮ್ಮಲ್ಲಿ ಮಾತನಾಡಿದ್ದಾರೆ. ‘ಯಾರಿಗೂ ಕೂಡ ನೋವುಂಟು ಮಾಡುವ ಉದ್ದೇಶ ನಮಗೆ ಇಲ್ಲ, ಅಂತಹ ಕೆಲಸ ಮಾಡುವುದಿಲ್ಲ’ ಎಂಬ ಮಾತು ಕೊಟ್ಟು ಹೋಗಿದ್ದಾರೆ. ಐತಿಹಾಸಿಕ ಹಿನ್ನೆಲೆಯ ಸ್ಪಷ್ಟತೆ ಇರುವ ಕಾಲಘಟ್ಟದಲ್ಲಿ, ಸಮುದಾಯವನ್ನು ಪ್ರತಿನಿಧಿಸುವಂತಹ ಇಬ್ಬರು ವ್ಯಕ್ತಿಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸೂಚ್ಯವಲ್ಲ, ಸೂಕ್ತವೂ ಅಲ್ಲ ಅಂತ ಅವರಿಗೆ ಹೇಳಿದ್ದೇವೆ.”

“ಸಾಕಷ್ಟು ದಿನಗಳಿಂದ ಗೊಂದಲಗಳು ಸೃಷ್ಟಿಯಾಗಿವೆ. ಇದಕ್ಕೆ ಸಂಬಂಧಪಟ್ಟಂತೆ ಮೊನ್ನೆ ಒಂದು ಪೋಸ್ಟರ್‌ ಕೂಡ ನೋಡಿದೆ. ರಾಜಕಾರಣಿ, ಮಂತ್ರಿ ಹಾಗೂ ನಿರ್ಮಾಪಕರೂ ಆಗಿರುವಂತಹ ಮುನಿರತ್ನ ಅವರು ಉರಿಗೌಡ, ನಂಜೇಗೌಡರ ಸಿನಿಮಾ ಮಾಡುತ್ತೇನೆ ಎಂದಿದ್ದರು. ಸರಿಯಾಗಿ ಸಂಶೋಧನೆಯಾಗದೆ ಎಲ್ಲಿ ಬೇಕಾದರೂ ಅಲ್ಲಿ ಮಾತನಾಡುವುದು ಸೂಕ್ತವಲ್ಲ.”

ಇತಿಹಾಸವನ್ನು ಅರಿತವರು ಇತಿಹಾಸ ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿಯುವುದು ಎಂದರೆ- ಆಯಾ ಕಾಲದಲ್ಲಿದ್ದ ವ್ಯಕ್ತಿಗಳಿಗೆ ಪೂರಕವಾಗಿ ಬೇಕಾದ ಶಿಲಾಶಾಸನಗಳು, ತಾಳೆಗರಿಗಳು ಇರಬಹುದು ಅಥವಾ ಅಂದಿನ ಸಮಕಾಲೀನರು ಬರೆದ ಚರಿತ್ರೆಗಳು ಇರಬಹುದು. ಇಷ್ಟು ಸಿಗದೆ ಬರೆದದ್ದು ಗೊಂದಲ ಮತ್ತು ಅನುಮಾನಕ್ಕೆ ಕಾರಣವಾಗುತ್ತದೆ.

ಉರಿಗೌಡ, ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ಶಾಸನಗಳು ಸಿಕ್ಕದ್ದೇಯಾದರೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಒದಗಿಸಬಹುದು. ಅವುಗಳನ್ನು ನಂತರದಲ್ಲಿ ಕ್ರೂಢೀಕರಿಸಿ ಸಂಶೋಧನೆ ಮಾಡಲಾಗುವುದು. ಶಾಸನ ತಜ್ಞರು, ಸಂಶೋಧಕರು ನಮ್ಮಲ್ಲಿ ಇದ್ದಾರೆ. ತಂತ್ರಜ್ಞಾನವೂ ಇದೆ. ಸಂಶೋಧಕರೂ ಇದ್ದಾರೆ. ತಂದುಕೊಟ್ಟ ಮಾಹಿತಿಯನ್ನು ಇವರೆಲ್ಲರ ಮೂಲಕ ಓರೆಗೆ ಹಚ್ಚಲಾಗುತ್ತದೆ. ಆದರೆ ಪ್ರಸ್ತುತ ನಡೆಯುತ್ತಿರುವಂತಹದ್ದು ಗೊಂದಲಕ್ಕೆ ಮತ್ತು ಒಂದು ಸಮುದಾಯದ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ.

-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರು
(ಮಾಧ್ಯಮಗಳು ಮಾಡಿರುವ ವಿಡಿಯೊ ವರದಿಯ ಸಂಕ್ಷಿಪ್ತ ಸಾರಾಂಶ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Swamiji has time. Let him read the freedom movement of history & facts. Let him teach the people of Karnataka too. We welcome such initiatives.
    Thank u sir.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...