Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ.

- Advertisement -
- Advertisement -

ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳ ಹೆಸರಿನಲ್ಲಿದ್ದ ಹಲವು ಹೋಬಳಿಗಳನ್ನು ಒಳಗೊಂಡ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಸೃಷ್ಟಿಸಲಾಯಿತು. ತುಮಕೂರು ನಗರದ ಸುತ್ತಲೂ ಹಬ್ಬಿಕೊಂಡಿರುವ ಸಾಮಾನ್ಯ ವಿಧಾನಸಭಾ ಕ್ಷೇತ್ರ ಇದಾಗಿದೆ.

ರಾಜಕೀಯ ಇತಿಹಾಸ

2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಸುರೇಶ್‌ ಗೌಡರವರು ಸ್ಪರ್ಧಿಸಿದರು. ಜೆಡಿಎಸ್ ಪಕ್ಷದಿಂದ ಎಚ್.ನಿಂಗಪ್ಪ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಅರೆಕೆರೆ ರುದ್ರೇಶ್ ಅಭ್ಯರ್ಥಿಯಾಗಿದ್ದರು. ಆಗ ಬಿ.ಸುರೇಶ್‌ಗೌಡರವರು 60,904 ಮತಗಳನ್ನು ಪಡೆದು ಸಮೀಪದ ಅಭ್ಯರ್ಥಿ ಜೆಡಿಎಸ್‌ನ ನಿಂಗಪ್ಪರವರ ಎದುರು 28,392 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ನಿಂಗಪ್ಪನವರು 32,512 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರೆಕೆರೆ ರುದ್ರೇಶ್‌ರವರು 21,642 ಮತಗಳಿಗೆ ಸೀಮಿತಗೊಂಡರು.

ಕೊರಟಗೆರೆಯಿಂದ ಮೂರು ಬಾರಿ ಆರಿಸಿ ಬಂದಿದ್ದ ಚೆನ್ನಿಗಪ್ಪನವರ ಪುತ್ರ ಡಿ.ಸಿ ಗೌರಿಶಂಕರ್‌ರವರು 2008ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆನಂತರ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮತ್ತೆ 2013ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾದರು. ಆಗ ಹಾಲಿ ಶಾಸಕ ಬಿ. ಸುರೇಶ್‌ ಗೌಡರವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಕಣಕ್ಕಿಳಿದರು. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತು; 1,572 ಮತಗಳ ಅಂತರದಲ್ಲಿ ಬಿಜೆಪಿಯ ಸುರೇಶ್‌ ಗೌಡರವರು ಮರು ಆಯ್ಕೆಯಾದರು. ಅವರು 55,029 ಮತಗಳನ್ನು ಪಡೆದರೆ ಗೌರಿಶಂಕರ್‌ರವರು 53,457 ಮತಗಳನ್ನು ಪಡೆದರು. ಆ ಚುನಾವಣೆಯಲ್ಲಿ ಕೆಜೆಪಿ ಸೇರಿದ್ದ ಎಚ್.ನಿಂಗಪ್ಪನವರು 22,709 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಡಿಟರ್ ನಾಗರಾಜುರವರು ಕೇವಲ 8,599 ಮತಗಳಿಗೆ ಕುಸಿದರು.

2018ರಲ್ಲಿ ಮತ್ತೆ ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವೆ ಜಿದ್ದಾಜಿದ್ದಿ ನಡೆಯಿತು. ಬಿಜೆಪಿಯ ಸುರೇಶ್‌ಗೌಡರವರ ಹ್ಯಾಟ್ರಿಕ್ ಗೆಲುವಿಗೆ ತಡೆಯೊಡ್ಡಿದ ಜೆಡಿಎಸ್‌ನ ಗೌರಿಶಂಕರ್‌ರವರು 5,640 ಮತಗಳ ಅಂತರದಲ್ಲಿ ಗೆದ್ದುಬಂದರು. ಗೌರಿಶಂಕರ್ 82,740 ಮತಗಳನ್ನು ಪಡೆದರೆ, ಸುರೇಶ್‌ಗೌಡರು 77,100 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಕೇವಲ 7,633 ಮತಗಳಿಗೆ ಕುಸಿದರು. ಈ ಚುನಾವಣೆಯಲ್ಲಿ ಅಕ್ರಮ ನಡೆಸಿ, ಬಾಂಡ್ ವಿತರಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ ಎಂದು ಸುರೇಶ್‌ಗೌಡರು ಆರೋಪಿಸಿದ್ದರು. ಅಲ್ಲದೆ ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಳಿಸಬೇಕೆಂದು ದೂರು ನೀಡಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

‘ಆರ್‌ಎಸ್‌ಎಸ್‌ನಂಥ ಭ್ರಷ್ಟರು ಮತ್ಯಾರು ಇಲ್ಲ. ಸುಮ್ಮನೇ ದೇಶಪ್ರೇಮ ಅನ್ನುತ್ತಾರೆ. ಆದರೆ ಅವರು ಭಾರೀ ಭ್ರಷ್ಟರು. ನಮ್ಮ ಕರ್ನಾಟಕದ ಆರ್‌ಎಸ್‌ಎಸ್‌ ಮುಖಂಡರನ್ನು ನೋಡಿ ಎಷ್ಟು ಹಣ ಮಾಡಿದ್ದಾರೆ’ ಎಂದಿದ್ದ ಸುರೇಶ್‌ಗೌಡರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಯಡಿಯೂರಪ್ಪನವರನ್ನು ಹೊಗಳಿದ್ದ ಅವರು 2018ರಲ್ಲಿ ಸೋತ ನಂತರ ಕ್ಷೇತ್ರದಲ್ಲಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸಿದ್ದಾರೆ.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,10,000; ಒಕ್ಕಲಿಗರು: 60,000; ಲಿಂಗಾಯಿತ: 40,000; ಪ.ಜಾ: 37,000; ಮುಸ್ಲಿಂ: 21,000; ಪ.ಪಂ: 15,000; ಕುರುಬ: 10,000; ಇತರೆ: 27,000

ಹಾಲಿ ಪರಿಸ್ಥಿತಿ

ಎರಡನೇ ಬಾರಿಗೆ ಶಾಸಕರಾಗಿರುವ ಗೌರಿಶಂಕರ್‌ರವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಸುರೇಶ್‌ಗೌಡರೊಂದಿಗಿನ ಜಗಳದಲ್ಲಿಯೇ ಹೆಚ್ಚು ಚರ್ಚೆಯಲ್ಲಿದ್ದಾರೆ.

ತುಮಕೂರಿನ ರಾಜಕೀಯ ರೌಡಿಸಂ ಇದ್ದ ಹಾಗೆ ಇರುತ್ತದೆ. ಇಲ್ಲಿ ಬಿ.ಸುರೇಶ್ ಗೌಡ ಮತ್ತು ಗೌರಿಶಂಕರ್‌ ಒಬ್ಬರಿಗೊಬ್ಬರು ಕುಸ್ತಿ ಆಡುವ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ತನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಸುರೇಶ್‌ಗೌಡರು ಆರೋಪಿಸಿ ಪೊಲೀಸ್ ದೂರು ನೀಡಿದ್ದು ಹಾಲಿ ಶಾಸಕರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೌರಿಶಂಕರ್ ಸುರೇಶ್‌ಗೌಡರಿಂದ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಪ್ರತಿ ದೂರು ನೀಡಿದ್ದಾರೆ. ಇವರಿಬ್ಬರ ಜಗಳ ಈ ರೀತಿ ಇದ್ದರೆ ಅವರ ಕಾರ್ಯಕರ್ತರೂ ಕಡಿಮೆಯೇನಿಲ್ಲ. ಪ್ರತಿ ಊರಿನಲ್ಲಿ ಗೌರಿಶಂಕರ್ ಮತ್ತು ಸುರೇಶ್‌ಗೌಡರ ಬಣಗಳಿದ್ದು ಪರಸ್ಪರ ಹೊಡೆದಾಡಿರುವ ಘಟನೆಗಳು ವರಿದಿಯಾಗಿವೆ. ಇದು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಬೇರೆ ಯಾವುದೇ ಅಭ್ಯರ್ಥಿಗಳು ಇಲ್ಲಿ ಬೆಳೆಯಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ.

ಬಿಜೆಪಿಯಿಂದ ಮಾಜಿ ಶಾಸಕ ಬಿ.ಸುರೇಶ್‌ಗೌಡರವರಿಗೆ ಟಿಕೆಟ್ ಖಚಿತವಾಗಿದೆ. ಅವರು ತನ್ನ ಆಡಳಿತಾವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಮತ ಕೊಡಿ ಎನ್ನುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಾಜಿ ಶಾಸಕರಾದ ಎಚ್.ನಿಂಗಪ್ಪರವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಜೆಡಿಎಸ್‌ನಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂದು ತಿಳಿಯುತ್ತಲೇ ಅವರು ಕಾಂಗ್ರೆಸ್ ಸೇರಿದ್ದಾರೆ. ಹಲವು ಸೋಲುಗಳನ್ನು ಕಂಡಿರುವ ಅವರು ಮತ್ತೊಂದು ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದ್‌ರಾಜ್ ಮತ್ತು ಶ್ರೀನಿವಾಸ್‌ರವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಎಚ್.ನಿಂಗಪ್ಪ

ಜೆಡಿಎಸ್‌ನಿಂದ ಗೌರಿಶಂಕರ್‌ರವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಅವರ ಮೇಲಿರುವ ಚುನಾವಣಾ ಅಕ್ರಮ ಪ್ರಕರಣದ ತೀರ್ಪು ಯಾವಾಗ ಹೊರಬೀಳಲಿದೆ ಎಂಬುದು ಗೊತ್ತಿಲ್ಲ. ಅವರ ಪರವಾಗಿ ತೀರ್ಪು ಬಂದಲ್ಲಿ ನಿರಾಂತರವಾಗಿ ಚುನಾವಣೆ ಎದುರಿಸಬಹುದು. ಒಂದು ಪಕ್ಷ ತೀರ್ಪು ವಿರುದ್ಧವಾಗಿ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಾದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಆಗ ಅವರು ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಬೇಕಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಎನಿಸಿದರೂ ಈಗಲೂ ನೇರಾ ನೇರ ಪೈಪೋಟಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಯಾರೇ ಗೆದ್ದರೂ ಅಂತರ ಬಹಳ ಕಡಿಮೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...