Homeಕರ್ನಾಟಕ‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಉರಿಗೌಡ, ನಂಜೇಗೌಡ ಕಾಲ್ಪನಿಕ ಎಂದವರು ಕ್ಷಮೆಯಾಚಿಸಲಿ’: ಚುಂಚನಶ್ರೀ ಹೇಳಿಕೆ ಬಳಿಕ ಸಿ.ಟಿ.ರವಿ ಪ್ರತಿಕ್ರಿಯೆ

‘ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ, ಸಮುದಾಯದ ಭಾವನೆಗೆ ಧಕ್ಕೆ ತರಬಾರದು’ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು

- Advertisement -
- Advertisement -

“ಟಿಪ್ಪುವನ್ನು ಕೊಂದದ್ದು ಉರಿಗೌಡ, ನಂಜೇಗೌಡ ಎಂಬುದು ಕಾಲ್ಪನಿಕ ಎನ್ನುವವರು ಕ್ಷಮೆಯಾಚಿಸಬೇಕು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಉರಿಗೌಡ, ನಂಜೇಗೌಡ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ ಪ್ರತಿಕ್ರಿಯಿಸಿ, “ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರಿಗೆ ತಿಳಿಹೇಳಲಾಗಿದೆ. ಸಿ.ಟಿ.ರವಿ ಇರಬಹುದು, ಅಶ್ವತ್ಥ ನಾರಾಯಣ ಇರಬಹುದು, ಗೋಪಾಲಯ್ಯ ಇರಬಹುದು. ಇವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಸರಿಯಾಗಿ ಮನದಟ್ಟು ಮಾಡಿಕೊಟ್ಟಿದ್ದರಿಂದ ಸುಮ್ಮನಾಗುತ್ತಾರೆಂದು ಭಾವಿಸುತ್ತೇನೆ” ಎಂದಿದ್ದರು.

ಮುಂದುವರಿದು ಶ್ರೀಗಳು, “ಕಲ್ಪನೆ ಮಾಡಿಕೊಂಡು ಬರೆಯುವಂತಹದ್ದು ಕಾದಂಬರಿಯಾಗುತ್ತದೆ. ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯಲ್ಲಿ ಬರೆದಿರುವಂತಹದ್ದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂಥಹದ್ದು ಯಾವುದು ಕೂಡ ಇಲ್ಲಿಯವರೆಗೂ ಕಂಡುಬಂದಿಲ್ಲ. ಹೀಗಾಗಿ ಇಂತಹ ಹೇಳಿಕೆಗಳ ಮೂಲಕ ಯುವಕರಲ್ಲಿ, ಸಮಕಾಲೀನ ಜಗತ್ತಿನಲ್ಲಿ ಗೊಂದಲ ಸೃಷ್ಟಿ ಮಾಡಿ ಶಕ್ತಿಯನ್ನು ಹಾಳು ಮಾಡಬಾರದು, ಸಮುದಾಯಕ್ಕೆ ಧಕ್ಕೆಯನ್ನು ಉಂಟುಮಾಡಬಾರದು” ಎಂದು ತಿಳಿಸಿದ್ದರು.

ಈ ಬೆಳವಣಿಗೆಗಳ ಬೆನ್ನಲ್ಲೇ ಸಿ.ಟಿ.ರವಿ ಹೇಳಿಕೆಯನ್ನು ನೀಡಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಂಗಳವಾರ ಮಾತನಾಡಿದ ಅವರು, “ಟಿಪ್ಪು ಕೊಂದಿದ್ದ ಉರಿಗೌಡ ನಂಜೇಗೌಡರ ದಾಖಲೆ ಸಂಗ್ರಹ ಮಾಡ್ತಿದ್ದೇವೆ. ಶೀಘ್ರದಲ್ಲೇ ಆದಿಚುಂಚನಗಿರಿ ಶ್ರೀಗಳ ಮುಂದೆ ದಾಖಲೆ ಇಟ್ಟು ಅವರಿಗೆ ಸತ್ಯ ಮನವರಿಕೆ ಮಾಡುತ್ತೇವೆ” ಎಂದಿದ್ದಾರೆ.

“ಉರಿಗೌಡ ಮತ್ತು ನಂಜೇಗೌಡ ಅವರು ಕಾಲ್ಪನಿಕ ಪಾತ್ರಗಳಲ್ಲ, ಸತ್ಯದ ಪಾತ್ರಗಳು ಎಂದು ದೇ. ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ದಾಖಲಸಿದ್ದಾರೆ. ಸುಳ್ಳು ಅಂತ ಹೇಳಿದೋರು, ಕಾಲ್ಪನಿಕ ಅನ್ನೋರು ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟಿಪ್ಪು ಕೊಂದಿದ್ದಕ್ಕೆ ದಾಖಲೆ ಏನಿದೆ ಅಂತ ಹೊಸ ವರಸೆ ತೆಗೆದಿದ್ದಾರೆ. ಇದು ಸಂಶೋಧನೆ ಆಗಬೇಕಾಗಿರುವ ವಿಷಯ. ಟಿಪ್ಪು ಕೊಂದವರು ಯಾರು. ಟಿಪ್ಪು ಕೊಂದವರು ಅಪರಿಚಿತರು ಅಂತಾರೆ. ನಾವು ಅಪರಿಚಿತರಲ್ಲ ಅಂತ ಹೇಳಿದಿವಿ‌. ಉರಿಗೌಡ, ನಂಜೇಗೌಡರನ್ನ ಇವತ್ತಿನವರೆಗೂ ಇವರೆ ಸೃಷ್ಟಿ ಮಾಡಿದ್ದಾರೆ ಅಂತ ಹೇಳ್ಕೊಂಡು ಬಂದಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ನನ್ನ ಜೊತೆ ಮಾತಾಡಿದ್ದಾರೆ. ಸ್ವಾಮೀಜಿಗಳ ಮಾತಿಗೆ ನಾವು ಗೌರವ ಕೊಡುತ್ತೇವೆ. ಸ್ವಾಮೀಜಿ ಅವರಿಗೆ ವಾಸ್ತವಿಕ ಸತ್ಯವನ್ನ ಮನವರಿಕೆ ಮಾಡಿಕೊಡುತ್ತೇವೆ. ಖಂಡಿತ ದಾಖಲೆ ತಗೊಂಡು ಹೋಗುತ್ತೇವೆ. ಸದ್ಯ ದಾಖಲೆ ಸಂಗ್ರಹಿಸೊ ಕೆಲಸ ಮಾಡ್ತಿದ್ದೇವೆ. ಆ ದಾಖಲೆ ಮುಂದಿಟ್ಟುಕೊಂಡು ಸ್ವಾಮೀಜಿ ಬಳಿ ಚರ್ಚೆ ಮಾಡುತ್ತೇವೆ. ಸ್ವಾಮೀಜಿ ಅವರ ಬಗ್ಗೆ ಶ್ರದ್ದೆ ಗೌರವ ನಮಗೆ ಇದೆ” ಎಂದಿದ್ದಾರೆ.

ಇದನ್ನೂ ಓದಿರಿ: ನಿಲ್ಲದ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನ; ಸ್ವಾಮೀಜಿ ಮಾತಿಗೆ ಕವಡೆ ಕಿಮ್ಮತ್ತೂ ನೀಡದ ರಂಗಾಯಣ

“ಟಿಪ್ಪು ಮತ್ತು ಉರಿಗೌಡ ನಂಜೇಗೌಡರ ಚರ್ಚೆ ಮುಂದುವರೆಸುತ್ತೇವೆ. ನನನ್ನು ಯಾರಿಗೆ ಬೇಕಾದರೂ ಹೋಲಿಕೆ ಮಾಡಿ, ಐಲೆಟ್ ಮಾಡಿ, ನನಗೆ ಹೆಮ್ಮೆ ಇದೆ. ಉರಿಗೌಡ ನಂಜೇಗೌಡ ಅವರು ಮೈಸೂರು ಸಂಸ್ಥಾನಕ್ಕೆ ನಿಷ್ಠಾವಂತರಾಗಿದ್ದರು. ಅನ್ನೋದಕ್ಕೆ ಹೆಮ್ಮೆ ಇದೆ. ಚುನಾವಣೆ ಇರುವುದರಿಂದ ಉರಿಗೌಡ, ನಂಜೇಗೌಡ ವಿಚಾರ ಬೇರೆ ಬೇರೆ ತಿರುವು ಪಡೆಯುತ್ತಿದೆ. ಆ ರೀತಿ ಆಗಬಾರದು ಅನ್ನೋ ದೃಷ್ಟಿಯಿಂದ ಸ್ವಾಮೀಜಿಗಳು ತಿಳಿ ಹೇಳಿದ್ದಾರೆ” ಎಂದಿದ್ದಾರೆ.

“ಆದಿಚುಂಚನಗಿರಿ ಸ್ವಾಮೀಜಿಯವರಲ್ಲಿ ಎಚ್‌ಡಿ ಕುಮಾರಸ್ವಾಮಿ ಕ್ಷಮೆಯಾಚಿಸಬೇಕು. ಕುಮಾರಸ್ವಾಮಿಯವರು ಸ್ವಾಮೀಜಿ ಅಪಮಾನ ಮಾಡಿದ್ದಾರೆ, ಅಗೌರವ ತೋರಿದ್ದಾರೆ. ವಾಸ್ತವವಾಗಿ ಟಿಪ್ಪು ಸುಲ್ತಾನ್ ಸ್ವಾತಂತ್ರ ಹೋರಾಟಗಾರ ಅಲ್ಲ. ಮೈಸೂರು ಸಂಸ್ಥಾನಕ್ಕೆ ಮೋಸ ಮಾಡಿದವನು ಅಂತ ಬಿಂಬಿಸಬೇಕಿತ್ತು. ವ್ಯಾಪಾರದ ನೆಪದಲ್ಲಿ ಬಂದಿದ್ದು ಅಂತ ಬ್ರಿಟಿಷರನ್ನ ಚಿತ್ರೀಕರಿಸಿದ್ವಿ. ಹಾಗೆ ಕೂಲಿ ಹಾಗೆ ಬಂದವನು ಮೋಸದಿಂದ ಮೈಸೂರು ಸಂಸ್ಥಾನವನ್ನೆ ಕಬಳಿಸಿದ ಅಂತ ನಾವು ಎಲ್ಲಿ ಹೇಳಿದಿವಿ” ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...