Homeಮುಖಪುಟಸಂಸತ್ತಿನ ಮೊದಲ ಮಹಡಿಯಲ್ಲಿ 'ಮೋದಾನಿ' ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

- Advertisement -
- Advertisement -

ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ, ಆ ಬಗ್ಗೆ ಮಾತೇ ಆಡುತ್ತಿಲ್ಲ. ಹಾಗಾಗಿ ಕೇಂದ್ರಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ವಿನೂತನವಾಗಿ ಪ್ರತಿಭಟಿಸಿವೆ.

ಮಂಗಳವಾರದ ಸಂಸತ್ತ ಕಲಾಪ ಆರಂಭವಾಗುವುದಕ್ಕೂ ಮುನ್ನ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ‘ವಿನೂತನ’ ಪ್ರತಿಭಟನೆಗೆ ನಿಧಾರ ತಗೆದುಕೊಳ್ಳಲಾಯಿತು.

ಸಂಸತ್ತಿನ ಉಭಯ ಸದನಗಳ ಕಲಾಪವು ಮಂಗಳವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾದ ಬಳಿಕ, 17 ಪ್ರತಿಪಕ್ಷಗಳ ಸಂಸದರು ಸಂಸತ್ ಭವನದ ಮೊದಲ ಮಹಡಿಯಲ್ಲಿರುವ ಎಸ್‌ಬಿಐ ಕಚೇರಿ ಎದುರು ಸೇರಿದರು. ಅದಾನಿ ಸಮೂಹಕ್ಕೆ ಸಾಲ ನೀಡಿರುವ ಎಸ್‌ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳವಾರ ಸಂಸತ್ತಿನ ಮೊದಲ ಮಹಡಿಯಲ್ಲಿ ಪ್ರತಿಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅದಾನಿ ಅವರ ಭಾವಚಿತ್ರಗಳಿರುವ ಬೃಹತ್ ಗಾತ್ರದ ಬ್ಯಾನರ್‌ನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದವು. ಸಂಸತ್ ಭವನದಲ್ಲಿ ಈ ರೀತಿಯ ದೊಡ್ಡ ಬ್ಯಾನರ್ ನೇತುಹಾಕಿ ಪ್ರತಿಭಟಿಸಿದ್ದು ಇದೇ ಮೊದಲು ಎನ್ನಬಹುದು.

ಆ ಬ್ಯಾನರ್‌ನಲ್ಲಿ ‘ಮೋದಾನಿ’, ‘ನಮಗೆ ಜೆಪಿಸಿ ಬೇಕು’ ಎಂದು ಬರೆಯಲಾಗಿದೆ. ಈ ವೇಳೆ ”ಮೋದಿ ಮತ್ತು ಅದಾನಿ ಅಣ್ಣತಮ್ಮಂದಿರು. ಇಬ್ಬರೂ ಸೇರಿ ದೇಶವನ್ನು ಮಾರುತ್ತಾರೆ” ಎನ್ನುವ ಘೋಷಣೆಗಳನ್ನು ಕೂಗಿ ಪ್ರತಿಪಕ್ಷಗಲು ತಮ್ಮ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್, ಎಎಪಿ, ಬಿಆರ್‌ಎಸ್, ಡಿಎಂಕೆ, ಸಿಪಿಎಂ, ಸಿಪಿಐ, ಆರ್‌ಜೆಡಿ, ಎನ್‌ಸಿಪಿ ಹಾಗೂ ಎಸ್‌ಪಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

ಈ ಪ್ರತಿಪಕ್ಷಗಳ ಪ್ರತಿಭಟನೆಯಿಂದ ತೃಣಮೂಲ ಕಾಂಗ್ರೆಸ್ ಮತ್ತೆ ಅಂತರ ಕಾಯ್ದುಕೊಂಡಿದೆ. ಪ್ರತಿಪಕ್ಷಗಳ ಗುಂಪಿನಲ್ಲಿದ್ದರೂ, ಪ್ರತ್ಯೇಕ ಮಾರ್ಗ ಅನುಸರಿಸುತ್ತಿರುವ ಟಿಎಂಸಿ, ಅದಾನಿ ವಿಚಾರವಾಗಿ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದಾನಿಯನ್ನು ಬಂಧಿಸಿ ಎಂಬ ಬರಹವುಳ್ಳ ಹಾಗೂ ಎಲ್ಲ ಟಿಎಂಸಿ ಸಂಸದರ ಸಹಿ ಇರುವ ಟೋಪಿಯನ್ನು ಧರಿಸಿ ಸಂಸದರು ಸಂಸತ್ ಭವನದ ಪಕ್ಷದ ಕಚೇರಿಯಿಂದ ವಿಜಯ್ ಚೌಕದವರೆಗೆ ಮೆರವಣಿಗೆ ನಡೆಸಿದರು.

”ಹಣಕಾಸು ಸಚಿವರು, ಸೆಬಿ, ಎಲ್‌ಐಸಿ, ಎಸ್‌ಬಿಐ ಮುಖ್ಯಸ್ಥರಿಗೆ ಟೋಪಿಯನ್ನು ನೀಡಲಾಗುವುದು” ಎಂದು ರಾಜ್ಯಸಭೆಯಲ್ಲಿ ಟಿಎಂಸಿ ಪಕ್ಷದ ನಾಯಕರಾಗಿರುವ ಡೆರೆಕ್ ಒಬ್ರಿಯನ್ ತಿಳಿಸಿದರು.

ಅದಾನಿ ಪ್ರಕರಣದಲ್ಲಿ ಪಕ್ಷವು ಮೆದುವಾಗಿ ನಡೆದುಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಟಿಎಂಸಿ, ಅದಾನಿಯನ್ನು ಬಂಧಿಸಿ ಎಂದು ಆಗ್ರಹಿಸಿರುವ ಏಕೈಕ ಪಕ್ಷ ತಮ್ಮದು ಎಂದು ಹೇಳಿಕೊಂಡಿದೆ.

ಸಂಸತ್ ಕಲಾಪದ ಬಿಕ್ಕಟ್ಟನ್ನು ಪರಿಹರಿಸುವ ಕುರಿತು ಮಂಗಳವಾರ ರಾಜ್ಯಸಭೆಯ ಸಭಾಪತಿ ಜಗದೀಪ್‌ ಧನಕರ್ ಅವರು, ಕರೆದಿದ್ದ ಎರಡು ಸಭೆಗಳಿಗೆ ಪ್ರತಿಪಕ್ಷದ ಸದಸ್ಯರು ಹಾಜರಾಗಲಿಲ್ಲ. ”ಸರ್ಕಾರ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆಗೆ ಸಿದ್ಧವಿಲ್ಲ ಎಂಬುದು ಈ ನಡೆಯಿಂದ ಗೊತ್ತಾಗುತ್ತದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸರ್ಕಾರದ ಜೊತೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ” ಎಂದು ಪ್ರತಿಪಕ್ಷಗಳು ಹೇಳಿವೆ.

ಸಭೆಯಲ್ಲಿ ಬಿಜೆಪಿ, ವೈಎಸ್‌ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ಭಾಗಿಯಾಗಿದ್ದವು. ಇನ್ನುಳಿದ ಪ್ರತಿಪಕ್ಷಗಳು ಸಭೆಗೆ ಹಾಜರಾಗದಿರುವುದು ಸರಿಯಯಾದ ವರ್ತನೆಯಲ್ಲ. ಸಭೆಗೂ ಮುನ್ನ ತಮ್ಮನ್ನು ಭೇಟಿಯಾಗಿದ್ದ ಕಾಂಗ್ರೆಸ್ ಮುಖ್ಯ ಸಚೇತಕ ಮತ್ತು ಡಿಎಂಕೆ ಸದನ ನಾಯಕರು ಸಭೆಗೆ ಹಾಜರಾಗುತ್ತಿಲ್ಲ ಎಂಬುದನ್ನು ತಿಳಿಸಿದ್ದರು ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

ಧನಕರ್ ಅವರು ಮಧ್ಯಾಹ್ನ 2.30ಕ್ಕೆ ಮತ್ತೊಂದು ಸಭೆ ಕರೆದಿದ್ದರು. ಈ ಸಭೆಯಲ್ಲಿ ಪ್ರತಿಪಕ್ಷಗಳಾದ ಎನ್‌ಸಿಪಿ, ಡಿಎಂಕೆ ಹಾಗೂ ಟಿಎಂಸಿಯ ಕೆಲವು ಪ್ರತಿನಿಧಿಗಳು ಕಾಣಿಸಿಕೊಂಡರು. ಸಭಾಪತಿಗೆ ಪದೇಪದೇ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಕೆಲವರನ್ನು ಸಭೆಗೆ ಕಳುಹಿಸಲು ಪ್ರತಿಪಕ್ಷಗಳು ತೀರ್ಮಾನಿಸಿದ್ದವು ಎಂದು ಮೂಲಗಳು ಹೇಳಿವೆ.

ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ತಮ್ಮ ವಿಷಯಗಳನ್ನು ಪಕ್ಕಕ್ಕಿಡಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಲೋಕಸಭೆ ಸ್ಪೀಕರ್ ಓ ಬಿರ್ಲಾ ಅವರು ಸಲಹೆ ನೀಡಿದ್ದಾರೆ. ಆಡಳಿತರೂಢ ಬಿಜೆಪಿ ಇದಕ್ಕೆ ಒಪ್ಪಿಕೊಂಡಿತು. ಆದರೆ, ಅದಾನಿ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದರು. ಇದೇ ವೇಳೆ ಅವರು, ರಾಹುಲ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...