Homeಮುಖಪುಟಲೋಕಸಭೆಯಲ್ಲಿ ರಾಹುಲ್‌ಗೆ ಮಾನಹಾನಿ ಮಾಡಿದ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ ವಿಶೇಷ ಹಕ್ಕು ಉಲ್ಲಂಘನೆ ನೋಟಿಸ್

ಲೋಕಸಭೆಯಲ್ಲಿ ರಾಹುಲ್‌ಗೆ ಮಾನಹಾನಿ ಮಾಡಿದ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ ವಿಶೇಷ ಹಕ್ಕು ಉಲ್ಲಂಘನೆ ನೋಟಿಸ್

- Advertisement -
- Advertisement -

ರಾಹುಲ್ ಗಾಂಧಿ ಅವರ ‘ಪ್ರಜಾಪ್ರಭುತ್ವ’ ಹೇಳಿಕೆಗಳ ಕುರಿತು ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವಿನ ಕಾಳಗ ಮುಂದುವರಿದಿದ್ದು, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ವಿಶೇಷ ಹಕ್ಕು ಉಲ್ಲಂಘನೆಗೆ ನೋಟಿಸ್ ದಾಖಲಿಸಿದೆ.

ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು, ಲೋಕಸಭೆಯ ಕಾರ್ಯವೈಖರಿ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ 222ರ ಅಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ಪತ್ರದಲ್ಲಿ, ”ಮಾರ್ಚ್ 13ರಂದು ಲೋಕಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ ನಿಯಮ 352 (vii) ಮತ್ತು ನಿಯಮ 353ನ್ನು ಉಲ್ಲಂಘಿಸಿದ್ದಕ್ಕಾಗಿ ರಾಜನಾಥ್ ಸಿಂಗ್ ವಿರುದ್ಧ ಅವರು ನೋಟಿಸ್ ನೀಡುತ್ತಿರುವುದಾಗಿ ಹೇಳಿದ್ದಾರೆ.

”ಮಾರ್ಚ್ 13, 2023 ರಂದು (ಬೆಳಿಗ್ಗೆ 11 ಗಂಟೆಗೆ), ಸಂಸತ್ತಿನ ಅಧಿವೇಶನಕ್ಕೆ ಸೇರಿದಾಗ ರಾಜನಾಥ್ ಸಿಂಗ್ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಮುಂಗಡ ಸೂಚನೆ ನೀಡದೆಯೇ ಸಂಸತ್ ಸದಸ್ಯ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವರ ಈ ಅವಹೇಳನಕಾರಿ ಹೇಳಿಕೆಗಳನ್ನು ಆಡಳಿತ ಪಕ್ಷದ ಸದಸ್ಯರು ಆಧಾರರಹಿತ ಆರೋಪಗಳಿಂದ ಬೆಂಬಲಿಸಿದರು. ಸಂಸತ್ತಿನ ಹಲವು ಸದಸ್ಯರು ಅದನ್ನು ಮುಂದುವರೆಸಿದ್ದಾರೆ ಎಂದು ಅವರು ಗಮನಸೆಳೆದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

ಅಷ್ಟೇ ಅಲ್ಲದೇ, ಮತ್ತೊಂದು ಗಾಬರಿ ಹುಟ್ಟಿಸುವ ಸಂಗತಿಯೆಂದರೆ, ಸಂಸತ್ತಿನಲ್ಲಿ ಸದಸ್ಯರೊಬ್ಬರ ಮೇಲೆ ಈ ರೀತಿ ಚಾರಿತ್ರ್ಯ ಹರಣಕ್ಕೆ ಅವಕಾಶ ನೀಡಲಾಗುತ್ತಿರುವುದು ಮಾತ್ರವಲ್ಲ, ಅದನ್ನು ಪ್ರೋತ್ಸಾಹಿಸಲಾಗುತ್ತಿದೆ. ರಾಹುಲ್ ಗಾಂಧಿ ವಿರುದ್ಧ ಮಾಡಲಾಗುತ್ತಿರುವ ಆರೋಪಗಳ ವಿಚಾರವಾಗಿ ತಮ್ಮನ್ನು ಸಮರ್ಥಿಸಿಕೊಳ್ಳಲು ಅಥವಾ ಅವರ ವಿರುದ್ಧ ಎತ್ತಿರುವ ಆರೋಪಗಳನ್ನು ನಿರಾಕರಿಸಲು ರಾಹುಲ್‌ ಗಾಂಧಿ ಅವರಿಗೆ ಯಾವುದೇ ಅವಕಾಶವನ್ನು ನೀಡಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ರಾಜನಾಥ್ ಸಿಂಗ್ ಮಾಡಿದ ಭಾಷಣದ ಸಂಬಂಧಿತ ಭಾಗವನ್ನು ಕಾಂಗ್ರೆಸ್ ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಲೋಕಸಭೆಯಲ್ಲಿ ರಕ್ಷಣಾ ಸಚಿವರು, ”ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರು ಲಂಡನ್‌ಗೆ ಹೋಗಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ದೇಶದ ಘನತೆಗೆ ಧಕ್ಕೆ ತಂದಿದ್ದಾರೆ. ವಿದೇಶಿ ಶಕ್ತಿಗಳು ಭಾರತದ ಪ್ರಜಾಪ್ರಭುತ್ವವನ್ನು ಉಳಿಸಬೇಕು. ರಾಹುಲ್ ಭಾರತದ ಗೌರವ ಮತ್ತು ಪ್ರತಿಷ್ಠೆಗೆ ಧಕ್ಕೆ ತರಲು ಯತ್ನಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

”ರಾಜನಾಥ್ ಸಿಂಗ್ ಅವರ ಈ ಹೇಳಿಕೆಗಳು ಮಾನಹಾನಿಕರಕವಾಗಿವೆ. ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವಾಗ ಅವರು ಸಾಕ್ಷಿಗಳನ್ನು ಒದಗಿಸಿಲ್ಲ ಅಥವಾ ಅವರು ರಾಹುಲ್ ಗಾಂಧಿ ವಿರುದ್ಧದ ಹಕ್ಕುಗಳನ್ನು ಬೆಂಬಲಿಸಲು ಯಾವುದೇ ವಿಡಿಯೋ ಅಥವಾ ದಾಖಲೆಗಳನ್ನು ಒದಗಿಸಿಲ್ಲ. ಆದ್ದರಿಂದ, ರಾಜನಾಥ್ ಸಿಂಗ್ ಅವರು ಲೋಕಸಭಾ ನಿಯಮಗಳ ನಿಯಮ 352 (ii) ಮತ್ತು ನಿಯಮ 353 ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಮತ್ತು ಈ ವಿಷಯವನ್ನು ಆದ್ಯತೆಯ ಮೇರೆಗೆ ಸದರಿ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಟ್ಯಾಗೋರ್ ಆಗ್ರಹಿಸಿದ್ದಾರೆ.

ಕಳೆದ ವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ  ಉಚ್ಚಾಟನೆಯನ್ನು ಪರಿಗಣಿಸಲು ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಶೇಷ ಹಕ್ಕು ಮಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Idiot bjp , if they done right others done wrong what the hell bjp concept and agenda iff rss comes to india india will go back 30 yrs and we will not survive in the country again we wil go raja jithadallu system

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...