Homeಅಂಕಣಗಳುಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

ಸರ್ವೋಚ್ಚ ನ್ಯಾಯಾಲಯ: ಬಹುತೇಕ ಒಂದೇ ಬಗೆಯ ಬಿಕ್ಕಟ್ಟು ಎದುರಿಸುತ್ತಿರುವ ಭಾರತ ಮತ್ತು ಇಸ್ರೇಲ್

- Advertisement -
- Advertisement -

ಇಸ್ರೇಲ್ ಈ ವರ್ಷದ ಆರಂಭದಿಂದ ಭಾರೀ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ಇಸ್ರೇಲಿನ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುವಲ್ಲಿ, ಸರ್ಕಾರದ ಪಾತ್ರವನ್ನು ಹೆಚ್ಚಿಸಿಕೊಳ್ಳುವ ಹಾಗೂ ಸರ್ಕಾರ ರಚಿಸುವ ಕಾಯ್ದೆ ಕಾನೂನುಗಳ ಮೇಲೆ ಸುಪ್ರೀಂ ಕೋರ್ಟ್‌ನ ಪರಾಮರ್ಶೆಯ ಅಧಿಕಾರವನ್ನು ಮೊಟಕುಗೊಳಿಸುವ ಇಸ್ರೇಲಿ ಸರ್ಕಾರದ ಕಾನೂನು ಅಲ್ಲಿನ ಜನತೆಯನ್ನು ಕೆರಳಿಸಿದೆ. ಉಂಟಾಗಿರುವ ಈ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಸುಮಾರು 11 ವಾರಗಳಿಂದ ಲಕ್ಷಾಂತರ ಜನ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಸುಪ್ರೀಂ ಕೋರ್ಟಿನ ಅಧಿಕಾರವನ್ನು ಕಡಿತಗೊಳಿಸಿ ನಿರಂಕುಶವಾಗಲು ಪ್ರಯತ್ನಿಸುತ್ತಿರುವ ಸರ್ಕಾರದ ನಡೆಯನ್ನು ಶತಾಯಗತಾಯ ಸೋಲಿಸಲು ವಿವಿಧ ವಲಯದ ಜನ ಒಗ್ಗೂಡಿದ್ದಾರೆ. ವಿಶ್ವದಾದ್ಯಂತ ಪ್ರಜಾಪ್ರಭುತ್ವಗಳು ಸರ್ವಾಧಿಕಾರದತ್ತ ವಾಲುತ್ತಿವೆ ಎಂದು ಹಲವು ಅಧ್ಯಯನಗಳು ಎಚ್ಚರಿಸುತ್ತಿರುವಾಗ ದೇಶವೊಂದರ ನ್ಯಾಯಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಜನರ ಕರ್ತವ್ಯವಾದೀತು!

ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದ, ಇತಿಹಾಸಕಾರ ಮತ್ತು ’ಸೇಪಿಯನ್ಸ್’ ಪುಸ್ತಕದ ಕರ್ತೃ ಯುವಲ್ ನೋವಾ ಹರಾರಿ ಅವರು ಜನರನ್ನು ಎಚ್ಚರಿಸುವ ಭಾಷಣ ಮಾಡಿದ್ದರು. “ಕಾನೂನುಬದ್ಧ ರೀತಿಯಿಂದಲೇ ಅಧಿಕಾರಕ್ಕೆ ಬಂದ ಜನರಿಂದಲೇ ಸ್ಥಾಪಿತವಾದ ಸರ್ವಾಧಿಕಾರಗಳಿಂದ ಇತಿಹಾಸವು ತುಂಬಿಹೋಗಿದೆ. ಅತ್ಯಂತ ಹಳೆಯ ತಂತ್ರವೆಂದರೆ: ಮೊದಲಿಗೆ ಅಧಿಕಾರ ಪಡೆಯಲು ಕಾನೂನನ್ನು ಬಳಸಿಕೊಳ್ಳುವುದು ಮತ್ತು ನಂತರ ಕಾನೂನನ್ನು ವಿರೂಪಗೊಳಿಸಲು ಆ ಅಧಿಕಾರವನ್ನು ಬಳಸಿಕೊಳ್ಳುವುದು. ಇವನ್ನು ಜೊತೆಯಾಗಿ ಪರಿಶೀಲಿಸಿದಾಗ, ಈ (ಇಸ್ರೇಲಿ) ಸರಕಾರವು ಪ್ರಸ್ತುತ ತರುತ್ತಿರುವ ಕಾನೂನಿಗೆ ಒಂದೇ ಸರಳ ಅರ್ಥವಿದೆ ಮತ್ತು ಅದನ್ನು ಅರ್ಥಮಾಡಿಕೊಳ್ಳಲು ನೀವು ಕಾನೂನಿನಲ್ಲಿ ಪಿಎಚ್.ಡಿ ಪಡೆದಿರಬೇಕಾದ ಅಗತ್ಯವಿಲ್ಲ. ಅದೆಂದರೆ: ಈ

ಬೆಂಜಮಿನ್ ನೆತನ್ಯಾಹು

ಕಾನೂನುಗಳು ಅಂಗೀಕಾರವಾದರೆ, ನಮ್ಮ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನಾಶ ಮಾಡಲು ಸರಕಾರಕ್ಕೆ ಸಂಪೂರ್ಣ ಅಧಿಕಾರ ಇರುತ್ತದೆ” ಎಂದಿದ್ದ ಅವರು, “ಪ್ರಜಾಪ್ರಭುತ್ವವು ಒಂದು ಒಪ್ಪಂದ. ಅದರ ಪ್ರಕಾರ ಸರಕಾರವು ಜನರ ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುತ್ತದೆ ಎಂಬ ಷರತ್ತಿನ ಮೇಲೆ ನಾಗರಿಕರು ಸರಕಾರದ ನಿರ್ಧಾರಗಳನ್ನು ಗೌರವಿಸಬೇಕು. ಒಂದು ಕಡೆಯವರು ಈ ಒಪ್ಪಂದವನ್ನು ಮುರಿದಾಗ ಇನ್ನೊಂದು ಕಡೆಯವರು ತಮ್ಮ ಪಾತ್ರವನ್ನು ಮುಂದುವರಿಸಿಕೊಂಡು ಹೋಗುವ ಅಗತ್ಯವಿಲ್ಲ. ಒಂದು ಸರಕಾರವು ಸರ್ವಾಧಿಕಾರವನ್ನು ಸ್ಥಾಪಿಸಲು ಹೊರಟಾಗ ಆದನ್ನು ಪ್ರತಿರೋಧಿಸಲು ನಾಗರಿಕರಿಗೆ ಹಕ್ಕಿದೆ” ಎಂದಿದ್ದರು. ಈ ಮೂಲಕ ದೇಶದ ಪ್ರತಿ ನಾಗರಿಕನೂ ಈ ಕಾನೂನು ತಿದ್ದುಪಡಿಗಳ ವಿರುದ್ಧ ಹೋರಾಡಬೇಕೆಂಬ ಕರೆಕೊಟ್ಟು “ನಾವಿಂದು ಧ್ವನಿ ಎತ್ತದಿದ್ದರೆ, ಜೀವನಪೂರ್ತಿ ಬಾಯಿಮುಚ್ಚಿ ಬಿದ್ದಿರಬೇಕು” ಎಂದಿದ್ದರು.

ಇಸ್ರೇಲಿನದ್ದು ಭಾರತದಂತೆಯೇ ತೀವ್ರ ಬಲಪಂಥೀಯ ಸರ್ಕಾರ. ಕಳೆದ ಚುನಾವಣೆಗಳಲ್ಲಿ ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ದೊರಕದ ಕಾರಣ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಹಲವು ಪಕ್ಷಗಳನ್ನು (ಇದರಲ್ಲಿ ಉಗ್ರ ಬಲಪಂಥೀಯ ಪಕ್ಷಗಳೂ ಒಳಗೊಂಡಿವೆ) ಒಳಗೊಂಡ ಸರ್ಕಾರವನ್ನು 2022ರ ಅಂತ್ಯದಲ್ಲಿ ರಚಿಸಲಾಗಿತ್ತು. ಇಂತಹ ಮೈತ್ರಿಕೂಟದಲ್ಲಿ ಇತಮಾರ್ ಬೆನ್-ಗ್ವಿರ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಸಚಿವರನ್ನಾಗಿ ನೇಮಿಸಲಾಗಿದೆ. ಪ್ಯಾಲೆಸ್ತೇನಿಯನ್ನರ ವಿರುದ್ಧ ಬಹಿರಂಗವಾಗಿ ದ್ವೇಷ ಕಾರುವ ಈ ವ್ಯಕ್ತಿ ಅಲ್ಲಿನ ಲಿಬರಲ್ ಮತ್ತು ಸೆಂಟ್ರಿಸ್ಟ್ ಮುಖಂಡರನ್ನೂ ಅವರ ಧೋರಣೆಗೆ ಲೇವಡಿ ಮಾಡುವವರು. ಉಗ್ರ ಬಲಪಂಥೀಯತೆಯ ಪ್ರತಿಪಾದಕರಾದ ಇವರು ’ಅರಬ್ಬರು ನಾಯಿಗಳಂತೆ, ಅವರು ಸುಮ್ಮನೆ ಬಾಯಿಮುಚ್ಚಿರಬೇಕು ಇಲ್ಲ ಹೊರನಡೆಯಬೇಕು’ ಎಂದು ಪ್ರತಿಪಾದಿಸುತ್ತಿದ್ದ ಇಸ್ರೇಲಿ ಧರ್ಮಗುರು ಮೀರ್ ಕಹಾನೆ ಅನ್ನುವರರ ಅನುಯಾಯಿ. ’ಜ್ಯೂಯಿಶ್ ಪ್ರಭುತ್ವ ಪ್ರಜಾಪ್ರಭುತ್ವವಾಗಿರುವುದೇ ಹುಚ್ಚಾಟ’ ಎಂದು ಪ್ರತಿಪಾದಿಸುತ್ತಿದ್ದ ವ್ಯಕ್ತಿಯೀತ. ಇಂತಹವರ ಬೆಂಬಲಿಗರು ಸರ್ಕಾರದಲ್ಲಿ ನುಸುಳಿದಾಗ ಏನಾಗಬಹುದು ಎಂದು ಊಹಿಸುವುದು ಕಷ್ಟವೇನಲ್ಲ. ಹಿಂದಿನ ಅವಧಿಯಲ್ಲಿ ಪ್ರಧಾನಿಯಾಗಿದ್ದಾಗ, ನೆತನ್ಯಾಹು ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ಬಲಪಂಥೀಯ ಆರ್ಥಿಕತೆಯನ್ನು ಪೋಷಿಸಿ ಆಡಳಿತ ನಡೆಸುತ್ತಿದ್ದರಾದರೂ, ಪ್ರಜಾಪ್ರಭುತ್ವದ ಸಂಸ್ಥೆಗಳ ಸ್ವಾತಂತ್ರ್ಯವನ್ನು ಹರಣ ಮಾಡುವ ನಿಟ್ಟಿನಲ್ಲಿ ಮುಂದುವರಿದಿರಲಿಲ್ಲ ಎನ್ನಲಾಗುತ್ತದೆ. ಈಗ ಆ ಕೆಲಸಕ್ಕೂ ಅಡಿಯಿಟ್ಟಿರುವುದು ಜಗತ್ತಿನಲ್ಲಿ ಪ್ರಜಾಪ್ರಭುತ್ವಗಳು ಸರ್ವಾಧಿಕಾರಕ್ಕೆ ತಿರುಗುತ್ತಿರುವುದರ ಪ್ರತೀಕವಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿರುವ ಪಕ್ಷಾಂತರ ಹಾವಳಿ

ಇಂತಹುದ್ದೇ ವಿದ್ಯಮಾನಗಳು ಭಾರತದಲ್ಲಿಯೂ ಬೇರೆಬೇರೆ ರೀತಿಯಲ್ಲಿ ಕಾಣಿಸುತ್ತಿವೆ. ಮೊದಲು ಸುಪ್ರೀಂ ಕೋರ್ಟ್ ಕೊಲಿಜಿಯಂ ವಿರುದ್ಧ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಆಕ್ಷೇಪವೆತ್ತಿದ್ದರು. ಸರ್ಕಾರ ಕೆಲವು ನ್ಯಾಯಾಧೀಶರನ್ನು ನೇಮಿಸುವಲ್ಲಿ ತೋರುತ್ತಿರುವ ದೃಷ್ಟಿಕೋನವನ್ನು ಸರ್ವೋಚ್ಚ ನ್ಯಾಯಾಲಯ ಆಕ್ಷೇಪಿಸಿದ್ದರಿಂದ ಕೊಲಿಜಿಯಂ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಮಾತುಗಳನ್ನು ರಿಜಿಜು ಅವರು ಆಡಿದ್ದರು. ಈಗಿನ ಸಂದರ್ಭದಲ್ಲಿ, ಕೊಲಿಜಿಯಂ ವ್ಯವಸ್ಥೆ ಪರಿಪೂರ್ಣವಲ್ಲದಿದ್ದರೂ ಇದ್ದುದರಲ್ಲಿ ಸುಧಾರಿತ ವ್ಯವಸ್ಥೆ. ಅದರಲ್ಲಿ ಸರ್ಕಾರದ ಪ್ರತಿನಿಧಿಗಳು ತೂರಿಕೊಂಡರೆ ಆಗುವ ಅಪಾಯವನ್ನು ಯಾರಾದರೂ ಮನಗಾಣಬಹುದು.

ಕಿರಣ್ ರಿಜಿಜು

ಹಾಗೆಯೇ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು (ಇಸಿ) ನೇಮಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಸದೊಂದು ಕಾನೂನು ರಚಿಸುವವರೆಗೂ, ಪ್ರಧಾನ ಮಂತ್ರಿ, ಸಂಸತ್ತಿನ ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳುಳ್ಳ ವಿರೋಧ ಪಕ್ಷವೊಂದರ ಮುಖಂಡ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಸಿಇಸಿ ಮತ್ತು ಇಸಿರನ್ನು ನೇಮಿಸಬೇಕು ಎಂದು ಇತ್ತೀಚಿಗೆ ಸುಪ್ರೀಂ ಕೋರ್ಟ್‌ನ ಪೀಠವೊಂದು ಒಮ್ಮತದ ತೀರ್ಮಾನ ನೀಡಿತ್ತು. ಇದರ ಬಗ್ಗೆ ಇತ್ತೀಚಿಗೆ ಒಂದು ಸಭೆಯಲ್ಲಿ ಆಕ್ಷೇಪವೆತ್ತಿದ್ದ ರಿಜಿಜು ಇದನ್ನು ಲಕ್ಷ್ಮಣರೇಖೆಯೆಂದು ಕರೆದು, ಕಾರ್ಯಾಂಗದ ವಿಷಯಕ್ಕೆ ನ್ಯಾಯಾಲಯ ಮೂಗು ತೂರಿಸುವುದಾದರೆ ನ್ಯಾಯಾಲಯದ ಕೆಲಸಗಳನ್ನು ಮಾಡುವವರು ಯಾರು ಎಂದಿದ್ದರು.

ಇವೆಲ್ಲವೂ ನ್ಯಾಯಾಲಯದ ಬಗೆಗಿನ ಸಾಮಾನ್ಯ ವಿಮರ್ಶೆಗಳಲ್ಲ. ಬದಲಿಗೆ, ದೇಶ ಸರ್ವಾಧಿಕಾರದತ್ತ ವಾಲುತ್ತಿದೆ ಎಂದು ಪ್ರತಿಪಕ್ಷಗಳಿಂದ ಹಿಡಿದು ಜನಸಾಮಾನ್ಯರವರೆಗೂ ದೂರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಟೀಕೆಗಳು ಬೇರೆಯೇ ಅರ್ಥವನ್ನು ಪಡೆದುಕೊಳ್ಳುತ್ತವೆ. ಸರ್ವೋಚ್ಚ ನ್ಯಾಯಾಲಯ ಇನ್ನೂ ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ಸಿಕ್ಕಿರದೆ ಹೋಗಿರುವುದರಿಂದ, ಅದನ್ನು ಸಾಧಿಸಿಕೊಳ್ಳಲು ಇವೆಲ್ಲವೂ ನಾಂದಿಯಂತೆ ಕಾಣದೆ ಇರದು. ಮುಂದೊಂದು ದಿನ ನ್ಯಾಯಾಂಗದ ವಿಷಯದಲ್ಲಿ ಈಗ ಇಸ್ರೇಲಿ ಸರ್ಕಾರ ಬಂದಿರುವ ಹಂತಕ್ಕೆ ಭಾರತ ಸರ್ಕಾರವೂ ಮುಂದುವರಿಯಬಾರದೆಂದಿದ್ದರೆ ನಾಗರಿಕ ಸಮಾಜ ಬಹಳ ಎಚ್ಚರಿಕೆಯಿಂದ ನಮ್ಮ ಪ್ರಜಾಪ್ರಭುತ್ವವನ್ನು ಮತ್ತದರ ಸಂಸ್ಥೆಗಳನ್ನು ಕಾಯ್ದುಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...