Homeಮುಖಪುಟ'ಮೋದಿ ಉಪನಾಮ' ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

- Advertisement -
- Advertisement -

‘ಮೋದಿ ಉಪನಾಮ’ದ ಟೀಕೆಗಾಗಿ ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಗುರುವಾರ ತೀರ್ಪು ನೀಡಿದ ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ತಪ್ಪಿತಸ್ಥ ಎಂದು ಹೇಳಿದೆ. ಈ ಸಂಬಂಧ 2 ವರ್ಷ ಜೈಲು ಅಥವಾ ದಂಡ ಪಾವತಿಯ ಶಿಕ್ಷೆಯನ್ನು ವಿಧಿಸಿದೆ.

ಗುಜರಾತ್ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ. ಆದರೆ ಪ್ರತಿಪಕ್ಷಗಳು ಇದನ್ನು ಪಿತೂರಿ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ತ್ವರಿತವಾಗಿ ಟ್ವೀಟ್ ಮಾಡಿದ ರಾಹುಲ್‌ ಗಾಂಧಿ ಅವರು, ಮಹಾತ್ಮ ಗಾಂಧಿಯವರ ಸಾಲುಗಳನ್ನು ಬರೆದಿದ್ದಾರೆ. ”ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅದನ್ನು ಪಡೆಯುವ ಸಾಧನ ಅಹಿಂಸೆ” ಎಂದು ರಾಹುಲ್‌ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ತಮ್ಮ ಸಹೋದರ ರಾಹುಲ್ ಗಾಂಧಿ ಭಯಪಡುವುದಿಲ್ಲ ಮತ್ತು “ಸತ್ಯವನ್ನು ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

”ಇಡೀ ಆಡಳಿತ ಯಂತ್ರ ಎಲ್ಲಾ ವಿಧಾನಗಳಿಂದ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ, ನನ್ನ ಸಹೋದರ ಎಂದಿಗೂ ಹೆದರುವುದಿಲ್ಲ, ಅವನು ಎಂದಿಗೂ ಹೆದರುವುದಿಲ್ಲ. ಸತ್ಯದಿಂದ ಬದುಕಿದ್ದಾನೆ ಮತ್ತು ಸತ್ಯವನ್ನು ಹೇಳುವುದನ್ನು ಮುಂದುವರಿಸುತ್ತಾನೆ. ದೇಶದ ಜನರ ಧ್ವನಿಯಾಗಿ ಅವನು ಮಾತನಾಡುತ್ತಲೇ ಇರುತ್ತಾನೆ. ಕೋಟ್ಯಂತರ ದೇಶವಾಸಿಗಳ ಪ್ರೀತಿ ಅವನೊಂದಿಗಿದೆ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

“ರಾಹುಲ್ ಗಾಂಧಿಯನ್ನು ಪದೇ ಪದೇ ಕರೆಸುತ್ತಿರುವುದನ್ನು ನೋಡಿದಾಗ ನಮಗೆ ಸುಳಿವು ಸಿಕ್ಕಿದೆ. ಬಿಜೆಪಿ ಇತರರತ್ತ ಬೆರಳು ತೋರಿಸಿದರೆ, ಉಳಿದ ನಾಲ್ಕು ಬೆರಳುಗಳು ತನ್ನತ್ತ ತೋರಿಸುತ್ತವೆ” ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

”ಹೇಡಿ, ಸರ್ವಾಧಿಕಾರಿ ಬಿಜೆಪಿ ಸರಕಾರದ ಕರಾಳ ಕೃತ್ಯಗಳನ್ನು ನಾವು ಬಯಲು ಮಾಡುತ್ತಿದ್ದೇವೆ ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದೆ. ನಿಮಗೆ ಪ್ರತಿಪಕ್ಷಗಳಿಂದ ಧಿಕ್ಕಾರ, ಮೋದಿ ಸರಕಾರ ರಾಜಕೀಯ ದಿವಾಳಿತನಕ್ಕೆ ಬಲಿಯಾಗಿದೆ. ಪೊಲೀಸರನ್ನು ಕಳುಹಿಸಿ, ರಾಜಕೀಯ ಭಾಷಣಗಳ ಮೇಲೆ ಕೇಸುಗಳನ್ನು ಹಾಕುತ್ತಾರೆ. ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಮೋದಿ” ಈ ಉಪನಾಮವನ್ನು ಯಾರಾದರೂ ಪುನರುಚ್ಚರಿಸಿದರೂ ಅದು ಮಾನನಷ್ಟ ಸಮಸ್ಯೆಯಾಗುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಹೇಳಿದ್ದಾರೆ.

ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಇದು ಪ್ರತಿಪಕ್ಷಗಳನ್ನು ಮುಗಿಸಲು ”ಪಿತೂರಿ”ಯಾಗಿದೆ ಎಂದು ಆರೋಪಿಸಿದ್ದಾರೆ.

”ಬಿಜೆಪಿಯೇತರ ನಾಯಕರು ಹಾಗೂ ಪಕ್ಷಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಷಡ್ಯಂತ್ರ ನಡೆಯುತ್ತಿದೆ. ನಮಗೆ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯವಿದೆ, ಆದರೆ ಈ ರೀತಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಲುಕಿಸುವುದು ಸರಿಯಲ್ಲ. ಪ್ರಶ್ನೆ ಕೇಳುವುದು ಸಾರ್ವಜನಿಕರು ಮತ್ತು ಪ್ರತಿಪಕ್ಷಗಳ ಕೆಲಸ. ನಾವು ನ್ಯಾಯಾಲಯವನ್ನು ಗೌರವಿಸುತ್ತೇವೆ ಆದರೆ ನಿರ್ಧಾರವನ್ನು ಒಪ್ಪುವುದಿಲ್ಲ”ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇದು 2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಹೊಸ ಸಮೀಕರಣವನ್ನು ಸೂಚಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...