Homeಅಂಕಣಗಳುಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

ಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

- Advertisement -
- Advertisement -

ಮಂಡ್ಯ ಜಿಲ್ಲೆ ಜನತೆಗೆ ಸುಮಲತಾ ನಡೆ ಈ ಶತಮಾನದ ಎರಡನೇ ದ್ರೋಹವಾಗಿ ಕಾಣತೊಡಗಿದೆಯಂತಲ್ಲಾ. ಮೊದಲ ದ್ರೋಹ ಎಸ್.ಎಂ ಕೃಷ್ಣರದ್ದು. ಯಾರನ್ನು ಕೇಳಿದರೂ ತಾವು ಮೋಸ ಹೋದ ಮಾತು ಅವರಿಂದ ಹೊರಬರುತ್ತಿದೆ. ಇದಕ್ಕೆ ಅವರು ಕೊಡುವ ಕಾರಣ: ಸುಮಲತಾ ಚುನಾವಣೆ ಮುಗಿಯುವ ಹಂತದಲ್ಲಿ ಸೆರಗೊಡ್ಡಿ ಸ್ವಾಭಿಮಾನದ ಭಿಕ್ಷೆ ಬೇಡಿದರು; ಇದರಿಂದ ಕರಗಿಹೋದ ಮಂಡ್ಯದ ಜನ ತಮ್ಮ ಮನೆಯ ಮಗಳಾಗಿ ಸ್ವೀಕರಿಸಿದರು; ಅಂದು ಮುಖ್ಯಮಂತ್ರಿ ಮಗನೇ ಮೈತ್ರಿ ಸರ್ಕಾರದ ಅಭ್ಯರ್ಥಿಯಾದರೂ ಕಾಂಗ್ರೆಸ್ಸಿಗರು ಒಳಗೊಳಗೇ ಕೆಲಸ ಮಾಡಿದರು. ಭಾಷಾಭಿಮಾನಿಗಳು, ರೈತಸಂಘದವರು, ದಲಿತ ಸಂಘದ ಲೀಡರುಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಸುಮಲತಾ ಒಂದೂಕಾಲು ಲಕ್ಷದ ಲೀಡು ಪಡೆದು ಗೆದ್ದರು. ಆದರೇನು ಗೆದ್ದ ಕ್ಷಣದಿಂದಲೇ ಅವರ ಒಡನಾಟ ಮನೆಹಾಳು ಬಿಜೆಪಿಗಳ ಜೊತೆ ಆರಂಭವಾಯ್ತು. ಈಗ ಅವರು ಹೆಚ್ಚುಕಮ್ಮಿ ಬಿಜೆಪಿ ಸೇರಿದಂತೆಯೇ ಅಂಬಂತೆ ಬಿಜೆಪಿಗೆ ಬಂಬಲ ಘೋಷಿಸಿರುವುದು ಕೂಡ ಸಕಾರಣವಾಗಿರದೆ ಇನ್ನ ವರ್ಷವಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಸೇರಿ ಮತದಾರರಿಗೆ ಆಘಾತ ನೀಡಿದ್ದಾರೆ. ಈಕೆಯನ್ನು ಬೆಂಬಲಿಸಿದ ಸಿನಿಮಾ ನಟರೂ ಕೂಡ ಮೋಸ ಹೋಗಿದ್ದಾರೆ. ಆದರೇನು ಇಂತಹ ಯಾವ ನೋವೂ ಅವರನ್ನು ಭಾಧಿಸಿದಂತಿಲ್ಲ. ಇವರ ಬಗ್ಗೆ ಅಪ್ರಭುದ್ಧವಾಗಿ ಮಾತನಾಡಿದ್ದ ರೇವಣ್ಣ, ಶಿವರಾಮೇಗೌಡರ ಮಾತುಗಳೇ ನಿಜವಾಗಿರುವ ಈ ಸಮಯದಲ್ಲಿ, ಶಿವರಾಮೇಗೌಡ ಸುಮಲತಾ ಒಂದೇ ವೇದಿಕೆಗೆ ಬಂದರಲ್ಲಾ ಥೂತ್ತೇರಿ.

*****

ಇದ್ದಕ್ಕಿದ್ದಂತೆ ಮಂಡ್ಯ ಜಿಲ್ಲೆಯ ಉರಿಗೌಡ, ನಂಜೇಗೌಡರ ಬಗ್ಗೆ ವಕಾಲತ್ತು ವಹಿಸಿರುವ ಶೋಭಾ ಕರಂದ್ಲಾಜೆ ಎಂಬ ಸಂಶೋಧಕಿ ಎಡೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಬಲಗೈನಂತಿದ್ದವರು. ನೂರು ವರ್ಷದ ಇತಿಹಾಸವಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (ವಿಐಎಸ್‌ಎಲ್) ಕೇಂದ್ರ ಸರಕಾರ ಮುಚ್ಚಿ ಒಂದು ಸಾವಿರ ಕುಟುಂಬಗಳು ಬೀದಿಗೆ ಬಿದ್ದಾಗ ಇವರು ಮಾತನಾಡಲಿಲ್ಲ. ವಿಐಎಸ್‌ಎಲ್ ಮುಚ್ಚಲು ಸಹಕರಿಸಿದ ಶಿವಮೊಗ್ಗದ ರಾಜಕಾರಣಿಗಳ ಮನಸ್ಸಿನ ಹಿಂದೆ ಇದ್ದ ಕುತ್ಸಿತ ಭಾವನೆಗಳು ಹಲವು: ಭದ್ರಾವತಿ ಹಿಂದಿನಿಂದ ಕಾಂಗ್ರೆಸ್ಸನ್ನು ಬೆಂಬಲಿಸಿಕೊಂಡು ಬಂದ ಕ್ಷೇತ್ರ; ಅಲ್ಲಿಗೆ ಶಿವಮೊಗ್ಗದ ಯಾವ ಮತೀಯ ಕಾಯಿಲೆಗಳೂ ತಲುಪಲಿಲ್ಲ. ಅಲ್ಲಿನ ಎಂಪಿಎಂ (ಮೈಸೂರು ಪೇಪರ್ ಮಿಲ್ಸ್) ಮತ್ತು ವಿಐಎಸ್‌ಎಲ್‌ನಲ್ಲಿನ ಬಹುತೇಕ ಕಾರ್ಮಿಕರೆಲ್ಲಾ ಒಕ್ಕಲಿಗರು. ಇವರ ಬಗ್ಗೆ ಮೊದಲಿನಿಂದಲೂ ಎಡೂರಪ್ಪನವರ ಟೀಮಿಗೆ ತಾತ್ಸಾರ. ಅದೇನೇ ಇರಲಿ ಮಂಡ್ಯಕ್ಕೆ ಬಂದು ಉರಿಗೌಡ ನಂಜೇಗೌಡರ ಬಗ್ಗೆ ಸಂಶೋಧನೆಗೆ ತೊಡಗಿರುವ ಈ ಶೋಭಾ ಕರಂದ್ಲಾಜೆ ನೂರುವರ್ಷದ ಇತಿಹಾಸವಿರುವ ವಿಐಎಸ್‌ಎಲ್ ಬಗ್ಗೆ ಈವರೆಗೂ ಚಕಾರವೆತ್ತದಿರುವುದು ಭದ್ರಾವತಿ ಜನರಿಗೆ ಬಗೆದಿರುವ ದ್ರೋಹವೆಂದು ಅರಿವು ಮಾಡಿಕೊಡಬೇಕಿದೆಯಲ್ಲಾ, ಥೂತ್ತೇರಿ.

ಇದನ್ನೂ ಓದಿ: ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಇತಿಹಾಸದ ಸಮಾಧಿ ಅಗೆದು ಅಲ್ಲಿನ ಸತ್ಯಸಂಗತಿಗಳನ್ನು ಮರೆಮಾಡಿ ತಮಗೆ ಬೇಕಿರುವುದನ್ನು ಸೃಷ್ಟಿಸಿ ಸುಳ್ಳು ಹೇಳುತ್ತ ಹೋಗುವುದು ಬಿಜೆಪಿಗಳ ಹಳೆಯ ಚಾಳಿ. ಅದರಂತೆ ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನ ಬದಿಗೊತ್ತಿ ಉರಿ ಹಿಡಿದು ನಂಜುಕಾರುತ್ತ ಹೊರಟಿವೆ. ಸಂಶೋಧಕ ಹ.ಕ.ರಾಜೇಗೌಡರು ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಆಡಳಿತದ ವಿರುದ್ಧ ದಂಗೆ ಎದ್ದರು ಎಂಬ ಸಾಲನ್ನು ಹಿಡಿದುಹೊರಟಿರುವ ಬಿಜೆಪಿಯ ಮಂದಮತಿಗಳು ಒಂದಿಷ್ಟು ಧ್ಯಾನಿಸಿ ಸತ್ಯಸಂಗತಿಯನ್ನು ಗ್ರಹಿಸಿದ್ದಾರೆ. ಟಿಪ್ಪು ಸಂಪುಟದಲ್ಲಿದ್ದ ಎಂಟು ಜನ ಮಂತ್ರಿಗಳಲ್ಲಿ ಐವರು ಬ್ರಾಹ್ಮಣರಿದ್ದರು. ಅದರಲ್ಲಿ ದಿವಾನ್ ಪೂರ್ಣಯ್ಯನೂ ಬ್ರಾಹ್ಮಣ; ಇವರ ಆಣತಿಯಂತೇ ಆಡಳಿತ ನಡೆದಿದೆ. ಆ ಸಮಯದಲ್ಲಿ ಇವರುಗಳ ವರ್ಗವೆಲ್ಲಾ ಸವಲತ್ತಿನಿಂದ ಸಂತೃಪ್ತವಾಗಿದೆ. ಆದಕಾರಣ ವಿರೋಧ ವ್ಯಕ್ತವಾಗಿದೆ; ಟಿಪ್ಪು ಆಡಳಿತದ ಚುಕ್ಕಾಣಿ ಹಿಡಿದಿದ್ದ ಬ್ರಾಹ್ಮಣರು ಏನು ಮಾಡಿದರು, ಎಷ್ಟು ಜಹಗೀರಿಗಳನ್ನು ಪಡೆದು ಆ ಭೂಮಿಯಲ್ಲಿ ಒಕ್ಕಲಿಗರಿಗೆ ಬೇಸಾಯ ಮಾಡಲು ಬಿಟ್ಟು ಗರ್ಭಗುಡಿಯಲ್ಲಿ ತಾವು ಆರಾಮವಾಗಿದ್ದು ಅವಸಾನ ಹೊಂದಿದರು ಎಂಬ ಸಂಗತಿ ಉರಿಗೌಡ ನಂಜೇಗೌಡರ ಸಂಗತಿಯೊಂದಿಗೆ ಈಚೆಬರಬೇಕಾಗಿದೆಯೆಲ್ಲಾ, ಥೂತ್ತೇರಿ.

****

ಈ ಜಗತ್ತಿಗೆ ಶ್ರೇಷ್ಠ ರಾಜಕೀಯ ವ್ಯವಸ್ಥೆ ಎಂದರೆ ಅದು ಪ್ರಜಾತಂತ್ರ. ಇಂತಹ ವ್ಯವಸ್ಥೆಯನ್ನು ದುರುಳವಾಗಿ ಬಳಸಿಕೊಂಡ ಬಿಜೆಪಿಗಳು ಏನೆಲ್ಲಾ ಅನಾಹುತ ಸಾಧ್ಯವೊ ಅದನ್ನೆಲ್ಲಾ ಮಾಡಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲೇ ಚುನಾವಣೆಗೆ ಸ್ಪರ್ಧಿಸಿ ಗೆದ್ದುಬಂದು ತಮ್ಮ ಅಜೆಂಡಾಗಳನ್ನು ಕೈಗೆತ್ತಿಕೊಂಡರು. ಆರಂಭವೇ ರಥಯಾತ್ರೆ, ಇದು ಮುಗಿದನಂತರ ರಾಮಜ್ಯೋತಿ ಪಾದುಕೆ ಮತ್ತು ಇಟ್ಟಿಗೆ ಯಾತ್ರೆ ನಂತರ ಬಾಬರಿ ಮಸೀದಿಯನ್ನು ಕೆಡವಲಾಯ್ತು. ಅಲ್ಲಿಗೆ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನೇ ಕೆಡವಿ ಕೋಮುಘರ್ಷಣೆಯನ್ನು ದೊಡ್ಡಮಟ್ಟದಲ್ಲಿ ಉದ್ಘಾಟಿಸಲಾಯ್ತು. ಅಂದಿನಿಂದ ನಿರಂತರವಾಗಿ ಮತೀಯ ಘರ್ಷಣೆ ನಡೆಸುತ್ತ, ಪ್ರಜಾತಂತ್ರ ಬಳಸಿಕೊಂಡು ಗೆದ್ದು ಬಂದು, ನಾವು ಸಂವಿಧಾನವನ್ನು ಬದಲಿಸಲು ಬಂದಿದ್ದೇವೆ ಎಂದು ಹೇಳಿದ ಸಂಸದನ ವಿರುದ್ಧ ಮೋದಿ ಮಾತನಾಡಲಿಲ್ಲ. ಇಲ್ಲಿನ ಶಿಕ್ಷಣ ಸಂಸ್ಥೆಗಳನ್ನು ಹಾಳುಮಾಡಿ ನ್ಯಾಯಾಂಗ ವ್ಯವಸ್ಥೆಯನ್ನು ಶಿಥಿಲಗೊಳಿಸಿ ದೇಶಕ್ಕೆ ಗಂಡಾಂತರ ತಂದಿರುವಾಗ ಆ ಬಗ್ಗೆ ಮಾತನಾಡಿದ ರಾಹುಲಗಾಂಧಿಗೇ ಪ್ರಜಾತಂತ್ರದಿಂದ ತೊಂದರೆಯಾಗಿದೆ ಎನ್ನುವ ಮೋದಿಯವರು ಪ್ರಜಾತಂತ್ರದ ಬುಡಕ್ಕೆ ಕೊಡಲಿ ಏಟು ಕೊಡುತ್ತ ಬಂದಿರುವುದು ಅರಿವಿಗೇ ಬಂದಿಲ್ಲವಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...