Homeಅಂಕಣಗಳುಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

ಸುಮಲತಾರದ್ದು ಈ ಶತಮಾನದ ಎರಡನೇ ದ್ರೋಹ

- Advertisement -
- Advertisement -

ಮಂಡ್ಯ ಜಿಲ್ಲೆ ಜನತೆಗೆ ಸುಮಲತಾ ನಡೆ ಈ ಶತಮಾನದ ಎರಡನೇ ದ್ರೋಹವಾಗಿ ಕಾಣತೊಡಗಿದೆಯಂತಲ್ಲಾ. ಮೊದಲ ದ್ರೋಹ ಎಸ್.ಎಂ ಕೃಷ್ಣರದ್ದು. ಯಾರನ್ನು ಕೇಳಿದರೂ ತಾವು ಮೋಸ ಹೋದ ಮಾತು ಅವರಿಂದ ಹೊರಬರುತ್ತಿದೆ. ಇದಕ್ಕೆ ಅವರು ಕೊಡುವ ಕಾರಣ: ಸುಮಲತಾ ಚುನಾವಣೆ ಮುಗಿಯುವ ಹಂತದಲ್ಲಿ ಸೆರಗೊಡ್ಡಿ ಸ್ವಾಭಿಮಾನದ ಭಿಕ್ಷೆ ಬೇಡಿದರು; ಇದರಿಂದ ಕರಗಿಹೋದ ಮಂಡ್ಯದ ಜನ ತಮ್ಮ ಮನೆಯ ಮಗಳಾಗಿ ಸ್ವೀಕರಿಸಿದರು; ಅಂದು ಮುಖ್ಯಮಂತ್ರಿ ಮಗನೇ ಮೈತ್ರಿ ಸರ್ಕಾರದ ಅಭ್ಯರ್ಥಿಯಾದರೂ ಕಾಂಗ್ರೆಸ್ಸಿಗರು ಒಳಗೊಳಗೇ ಕೆಲಸ ಮಾಡಿದರು. ಭಾಷಾಭಿಮಾನಿಗಳು, ರೈತಸಂಘದವರು, ದಲಿತ ಸಂಘದ ಲೀಡರುಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಸುಮಲತಾ ಒಂದೂಕಾಲು ಲಕ್ಷದ ಲೀಡು ಪಡೆದು ಗೆದ್ದರು. ಆದರೇನು ಗೆದ್ದ ಕ್ಷಣದಿಂದಲೇ ಅವರ ಒಡನಾಟ ಮನೆಹಾಳು ಬಿಜೆಪಿಗಳ ಜೊತೆ ಆರಂಭವಾಯ್ತು. ಈಗ ಅವರು ಹೆಚ್ಚುಕಮ್ಮಿ ಬಿಜೆಪಿ ಸೇರಿದಂತೆಯೇ ಅಂಬಂತೆ ಬಿಜೆಪಿಗೆ ಬಂಬಲ ಘೋಷಿಸಿರುವುದು ಕೂಡ ಸಕಾರಣವಾಗಿರದೆ ಇನ್ನ ವರ್ಷವಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಸೇರಿ ಮತದಾರರಿಗೆ ಆಘಾತ ನೀಡಿದ್ದಾರೆ. ಈಕೆಯನ್ನು ಬೆಂಬಲಿಸಿದ ಸಿನಿಮಾ ನಟರೂ ಕೂಡ ಮೋಸ ಹೋಗಿದ್ದಾರೆ. ಆದರೇನು ಇಂತಹ ಯಾವ ನೋವೂ ಅವರನ್ನು ಭಾಧಿಸಿದಂತಿಲ್ಲ. ಇವರ ಬಗ್ಗೆ ಅಪ್ರಭುದ್ಧವಾಗಿ ಮಾತನಾಡಿದ್ದ ರೇವಣ್ಣ, ಶಿವರಾಮೇಗೌಡರ ಮಾತುಗಳೇ ನಿಜವಾಗಿರುವ ಈ ಸಮಯದಲ್ಲಿ, ಶಿವರಾಮೇಗೌಡ ಸುಮಲತಾ ಒಂದೇ ವೇದಿಕೆಗೆ ಬಂದರಲ್ಲಾ ಥೂತ್ತೇರಿ.

*****

ಇದ್ದಕ್ಕಿದ್ದಂತೆ ಮಂಡ್ಯ ಜಿಲ್ಲೆಯ ಉರಿಗೌಡ, ನಂಜೇಗೌಡರ ಬಗ್ಗೆ ವಕಾಲತ್ತು ವಹಿಸಿರುವ ಶೋಭಾ ಕರಂದ್ಲಾಜೆ ಎಂಬ ಸಂಶೋಧಕಿ ಎಡೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಬಲಗೈನಂತಿದ್ದವರು. ನೂರು ವರ್ಷದ ಇತಿಹಾಸವಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (ವಿಐಎಸ್‌ಎಲ್) ಕೇಂದ್ರ ಸರಕಾರ ಮುಚ್ಚಿ ಒಂದು ಸಾವಿರ ಕುಟುಂಬಗಳು ಬೀದಿಗೆ ಬಿದ್ದಾಗ ಇವರು ಮಾತನಾಡಲಿಲ್ಲ. ವಿಐಎಸ್‌ಎಲ್ ಮುಚ್ಚಲು ಸಹಕರಿಸಿದ ಶಿವಮೊಗ್ಗದ ರಾಜಕಾರಣಿಗಳ ಮನಸ್ಸಿನ ಹಿಂದೆ ಇದ್ದ ಕುತ್ಸಿತ ಭಾವನೆಗಳು ಹಲವು: ಭದ್ರಾವತಿ ಹಿಂದಿನಿಂದ ಕಾಂಗ್ರೆಸ್ಸನ್ನು ಬೆಂಬಲಿಸಿಕೊಂಡು ಬಂದ ಕ್ಷೇತ್ರ; ಅಲ್ಲಿಗೆ ಶಿವಮೊಗ್ಗದ ಯಾವ ಮತೀಯ ಕಾಯಿಲೆಗಳೂ ತಲುಪಲಿಲ್ಲ. ಅಲ್ಲಿನ ಎಂಪಿಎಂ (ಮೈಸೂರು ಪೇಪರ್ ಮಿಲ್ಸ್) ಮತ್ತು ವಿಐಎಸ್‌ಎಲ್‌ನಲ್ಲಿನ ಬಹುತೇಕ ಕಾರ್ಮಿಕರೆಲ್ಲಾ ಒಕ್ಕಲಿಗರು. ಇವರ ಬಗ್ಗೆ ಮೊದಲಿನಿಂದಲೂ ಎಡೂರಪ್ಪನವರ ಟೀಮಿಗೆ ತಾತ್ಸಾರ. ಅದೇನೇ ಇರಲಿ ಮಂಡ್ಯಕ್ಕೆ ಬಂದು ಉರಿಗೌಡ ನಂಜೇಗೌಡರ ಬಗ್ಗೆ ಸಂಶೋಧನೆಗೆ ತೊಡಗಿರುವ ಈ ಶೋಭಾ ಕರಂದ್ಲಾಜೆ ನೂರುವರ್ಷದ ಇತಿಹಾಸವಿರುವ ವಿಐಎಸ್‌ಎಲ್ ಬಗ್ಗೆ ಈವರೆಗೂ ಚಕಾರವೆತ್ತದಿರುವುದು ಭದ್ರಾವತಿ ಜನರಿಗೆ ಬಗೆದಿರುವ ದ್ರೋಹವೆಂದು ಅರಿವು ಮಾಡಿಕೊಡಬೇಕಿದೆಯಲ್ಲಾ, ಥೂತ್ತೇರಿ.

ಇದನ್ನೂ ಓದಿ: ಮಾಜಿ ರೌಡಿ ಶೀಟರ್‌ಗೆ ನಮಸ್ಕರಿಸುವುದೂ ಸಂಸ್ಕಾರವಂತಲ್ಲಾ!

ಇತಿಹಾಸದ ಸಮಾಧಿ ಅಗೆದು ಅಲ್ಲಿನ ಸತ್ಯಸಂಗತಿಗಳನ್ನು ಮರೆಮಾಡಿ ತಮಗೆ ಬೇಕಿರುವುದನ್ನು ಸೃಷ್ಟಿಸಿ ಸುಳ್ಳು ಹೇಳುತ್ತ ಹೋಗುವುದು ಬಿಜೆಪಿಗಳ ಹಳೆಯ ಚಾಳಿ. ಅದರಂತೆ ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನ ಬದಿಗೊತ್ತಿ ಉರಿ ಹಿಡಿದು ನಂಜುಕಾರುತ್ತ ಹೊರಟಿವೆ. ಸಂಶೋಧಕ ಹ.ಕ.ರಾಜೇಗೌಡರು ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಆಡಳಿತದ ವಿರುದ್ಧ ದಂಗೆ ಎದ್ದರು ಎಂಬ ಸಾಲನ್ನು ಹಿಡಿದುಹೊರಟಿರುವ ಬಿಜೆಪಿಯ ಮಂದಮತಿಗಳು ಒಂದಿಷ್ಟು ಧ್ಯಾನಿಸಿ ಸತ್ಯಸಂಗತಿಯನ್ನು ಗ್ರಹಿಸಿದ್ದಾರೆ. ಟಿಪ್ಪು ಸಂಪುಟದಲ್ಲಿದ್ದ ಎಂಟು ಜನ ಮಂತ್ರಿಗಳಲ್ಲಿ ಐವರು ಬ್ರಾಹ್ಮಣರಿದ್ದರು. ಅದರಲ್ಲಿ ದಿವಾನ್ ಪೂರ್ಣಯ್ಯನೂ ಬ್ರಾಹ್ಮಣ; ಇವರ ಆಣತಿಯಂತೇ ಆಡಳಿತ ನಡೆದಿದೆ. ಆ ಸಮಯದಲ್ಲಿ ಇವರುಗಳ ವರ್ಗವೆಲ್ಲಾ ಸವಲತ್ತಿನಿಂದ ಸಂತೃಪ್ತವಾಗಿದೆ. ಆದಕಾರಣ ವಿರೋಧ ವ್ಯಕ್ತವಾಗಿದೆ; ಟಿಪ್ಪು ಆಡಳಿತದ ಚುಕ್ಕಾಣಿ ಹಿಡಿದಿದ್ದ ಬ್ರಾಹ್ಮಣರು ಏನು ಮಾಡಿದರು, ಎಷ್ಟು ಜಹಗೀರಿಗಳನ್ನು ಪಡೆದು ಆ ಭೂಮಿಯಲ್ಲಿ ಒಕ್ಕಲಿಗರಿಗೆ ಬೇಸಾಯ ಮಾಡಲು ಬಿಟ್ಟು ಗರ್ಭಗುಡಿಯಲ್ಲಿ ತಾವು ಆರಾಮವಾಗಿದ್ದು ಅವಸಾನ ಹೊಂದಿದರು ಎಂಬ ಸಂಗತಿ ಉರಿಗೌಡ ನಂಜೇಗೌಡರ ಸಂಗತಿಯೊಂದಿಗೆ ಈಚೆಬರಬೇಕಾಗಿದೆಯೆಲ್ಲಾ, ಥೂತ್ತೇರಿ.

****

ಈ ಜಗತ್ತಿಗೆ ಶ್ರೇಷ್ಠ ರಾಜಕೀಯ ವ್ಯವಸ್ಥೆ ಎಂದರೆ ಅದು ಪ್ರಜಾತಂತ್ರ. ಇಂತಹ ವ್ಯವಸ್ಥೆಯನ್ನು ದುರುಳವಾಗಿ ಬಳಸಿಕೊಂಡ ಬಿಜೆಪಿಗಳು ಏನೆಲ್ಲಾ ಅನಾಹುತ ಸಾಧ್ಯವೊ ಅದನ್ನೆಲ್ಲಾ ಮಾಡಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲೇ ಚುನಾವಣೆಗೆ ಸ್ಪರ್ಧಿಸಿ ಗೆದ್ದುಬಂದು ತಮ್ಮ ಅಜೆಂಡಾಗಳನ್ನು ಕೈಗೆತ್ತಿಕೊಂಡರು. ಆರಂಭವೇ ರಥಯಾತ್ರೆ, ಇದು ಮುಗಿದನಂತರ ರಾಮಜ್ಯೋತಿ ಪಾದುಕೆ ಮತ್ತು ಇಟ್ಟಿಗೆ ಯಾತ್ರೆ ನಂತರ ಬಾಬರಿ ಮಸೀದಿಯನ್ನು ಕೆಡವಲಾಯ್ತು. ಅಲ್ಲಿಗೆ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನೇ ಕೆಡವಿ ಕೋಮುಘರ್ಷಣೆಯನ್ನು ದೊಡ್ಡಮಟ್ಟದಲ್ಲಿ ಉದ್ಘಾಟಿಸಲಾಯ್ತು. ಅಂದಿನಿಂದ ನಿರಂತರವಾಗಿ ಮತೀಯ ಘರ್ಷಣೆ ನಡೆಸುತ್ತ, ಪ್ರಜಾತಂತ್ರ ಬಳಸಿಕೊಂಡು ಗೆದ್ದು ಬಂದು, ನಾವು ಸಂವಿಧಾನವನ್ನು ಬದಲಿಸಲು ಬಂದಿದ್ದೇವೆ ಎಂದು ಹೇಳಿದ ಸಂಸದನ ವಿರುದ್ಧ ಮೋದಿ ಮಾತನಾಡಲಿಲ್ಲ. ಇಲ್ಲಿನ ಶಿಕ್ಷಣ ಸಂಸ್ಥೆಗಳನ್ನು ಹಾಳುಮಾಡಿ ನ್ಯಾಯಾಂಗ ವ್ಯವಸ್ಥೆಯನ್ನು ಶಿಥಿಲಗೊಳಿಸಿ ದೇಶಕ್ಕೆ ಗಂಡಾಂತರ ತಂದಿರುವಾಗ ಆ ಬಗ್ಗೆ ಮಾತನಾಡಿದ ರಾಹುಲಗಾಂಧಿಗೇ ಪ್ರಜಾತಂತ್ರದಿಂದ ತೊಂದರೆಯಾಗಿದೆ ಎನ್ನುವ ಮೋದಿಯವರು ಪ್ರಜಾತಂತ್ರದ ಬುಡಕ್ಕೆ ಕೊಡಲಿ ಏಟು ಕೊಡುತ್ತ ಬಂದಿರುವುದು ಅರಿವಿಗೇ ಬಂದಿಲ್ಲವಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...