Homeಕರ್ನಾಟಕಚೇತನ್‌ ಬಂಧನ; ವಾಕ್ ಸ್ವಾತಂತ್ರ್ಯದ ಹರಣವೆಂದು ಜನಾಕ್ರೋಶ

ಚೇತನ್‌ ಬಂಧನ; ವಾಕ್ ಸ್ವಾತಂತ್ರ್ಯದ ಹರಣವೆಂದು ಜನಾಕ್ರೋಶ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಸಂಬಂಧ ಆಕ್ರೋಶ ವ್ಯಕ್ತವಾಗುತ್ತಿದೆ. ಅನೇಕ ಹೋರಾಟಗಾರರು, ಚಿಂತಕರು ಚೇತನ್‌ ಬಂಧನವನ್ನು ಖಂಡಿಸಿದ್ದಾರೆ.

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಲಿಂಗಾಯತ ಸಮುದಾಯದ ಮುಖಂಡರಾದ ಸಿದ್ದಪ್ಪ ಮೂಲಗೆಯವರು ಪ್ರತಿಕ್ರಿಯಿಸಿದ್ದು, “ಲಿಂಗಾಯತರ ಪ್ರಾತಿನಿಧಿಕ ಸಂಸ್ಥೆಯೆಂದು ಹೇಳಿಕೊಳ್ಳುವ ಜಾಗತಿಕ ಲಿಂಗಾಯತ ಮಹಾಸಭೆಯು ಸಮುದಾಯದ ನಟ ಚೇತನ್ ಬಂಧನವನ್ನು ಇಂದಾದರೂ ಖಂಡಿಸುತ್ತದೆಯೋ? ಅಥವಾ ಬಿಜೆಪಿ ಮೇಲಿನ ಪ್ರೀತಿ ಖಂಡಿಸದಂತೆ ತಡೆಯುತ್ತದೆಯೋ?” ಎಂದು ಪ್ರಶ್ನಿಸಿದ್ದಾರೆ.

ಚಿಂತಕರಾದ ಆದಿತ್ಯ ಜೆ.ಬಿದನೂರು ಪೋಸ್ಟ್‌ ಮಾಡಿದ್ದು, “ಈ ಕೆಳಗಿನ ಪೋಸ್ಟಿಗಾಗಿ ಚೇತನ್ ಅಹಿಂಸಾನನ್ನು ಬಂಧಿಸಲಾಗಿದೆ ಅನ್ನುವುದಾದರೆ, ಅದು ಉರಿಗೌಡ-ನಂಜೇಗೌಡ ವಿಚಾರದಲ್ಲಿ ಸಂಘ ಪರಿವಾರಕ್ಕೆ ಆದ ಹಿನ್ನಡೆಯನ್ನು ಮರೆಮಾಚುವ, ‘ಚುನಾವಣೆಯ ಸಮಯದಲ್ಲಿ ಹಿಂದುತ್ವದ ಝೋಂಭೀ ಪಡೆ ಮತ್ತು ಆಡಿಯನ್ಸಿನ ಮತಾಂಧತೆ, ಉತ್ಸಾಹವನ್ನು ಈವರೆಗಿನ ಮೊಮೆಂಟಮ್‌ನಲ್ಲೇ ಮೇಂಟೇನ್ ಮಾಡುವ ಕಾರ್ಯಾಚಾರಣೆ ಅಷ್ಟೇ. ಯಾಕೆಂದರೆ, ಈ ಕೆಳಗಿನವು ಹಿಂದುತ್ವಕ್ಕೆ ಸಂಬಂಧಿಸಿದಂತೆ ಬೇಸಿಕ್ ಫ್ಯಾಕ್ಟುಗಳು. ಒಪೀನಿಯನ್ ಕೂಡ ಅಲ್ಲ! ಎಫ್ಐಆರ್ ರದ್ದು ಮಾಡದೇ ಅಥವಾ ಕೊನೆಯಪಕ್ಷ ಜಾಮೀನು ಮಂಜೂರು ಮಾಡದೇ ಕಸ್ಟಡಿಗೆ ಕೊಡಲಾಗಿದೆ ಅಂದರೆ, ಇದು ಶುದ್ಧ ಪೊಲಿಟಿಕಲ್ ಕೇಸು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬರಹಗಾರ ಅಕ್ರಂ ಪೀರ್‌‌ ಈ ಕುರಿತು ಪೋಸ್ಟ್‌ ಮಾಡಿದ್ದು, “ಬಿಜೆಪಿಯ ಸುಳ್ಳುಗಳ ಬಗ್ಗೆ ಪೋಸ್ಟ್ ಹಾಕಿದ್ದಕ್ಕೆ ದೂರು ಕೊಟ್ಟ ತಕ್ಷಣ ನಟ ಚೇತನ್ ಅವರನ್ನು ಪೊಲೀಸರು ಅರೆಸ್ಟ್ ಮಾಡ್ತಾರೆ, ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ಅಂತ ಆದೇಶ ನೀಡ್ತಾರೆ. ಲೋಕಾಯುಕ್ತ ದಾಳಿ ವೇಳೆ ಕೋಟಿಗಟ್ಟಲೆ ಅಕ್ರಮ‌ ಹಣದ ಜೊತೆ ಸಿಕ್ಕಿಹಾಕಿಕೊಂಡ ಶಾಸಕ ಮಾಡಾಳ್ ವಿರೂಪಾಕ್ಷರನ್ನು ಪೊಲೀಸರು ಬಂಧಿಸಲ್ಲ. ಕೋರ್ಟ್ ನಿರೀಕ್ಷಣಾ ಜಾಮೀನು ಕೊಡುತ್ತದೆ. ಸುಳ್ಯದ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರತೀಕಾರವಾಗಿ ಸುರತ್ಕಲ್‌ನ ಮುಸ್ಲಿಂ ಯುವಕ ಫಾಜಿಲ್‌ನ ಹತ್ಯೆ ಮಾಡಿದ್ದೇವೆ ಎಂದು ಘಂಟಾಘೋಷವಾಗಿ ಮೈಕ್ ಮುಂದೆ ಕಿರುಚಿ ಹೇಳಿದ ಶರಣ್ ಪಂಪ್‌ವೆಲ್‌ ವಿರುದ್ಧ ಫಾಜಿಲ್ ತಂದೆಯೇ ದೂರು ಕೊಟ್ಟರೂ ಬಂಧನವಾಗಿಲ್ಲ. ಎಲ್ಲಿದೆನ್ಯಾಯ?” ಎಂದು ಕೇಳಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ನಟ ಚೇತನ್ ಬಂಧನ ಖಂಡನೀಯ. ಬಿಜೆಪಿಯ ಸಿದ್ದಾಂತವನ್ನು ಪ್ರಶ್ನಿಸಿದರೆ, ಟೀಕಿಸಿದರೆ ಜೈಲಿಗೆ ಹಾಕುವುದಾದರೆ ಪ್ರಜಾಪ್ರಭುತ್ವ ಎಲ್ಲಿ ಉಳಿಯಿತು? ಚೇತನ್ ಫೇಸ್ ಬುಕ್ ಪೋಸ್ಟ್‌ನಲ್ಲಿ ಬಂಧನ ನಡೆಸುವಂತಹ ವಿಚಾರ ಏನಿತ್ತು ಎಂದು ಮುಖ್ಯಮಂತ್ರಿಗಳು ಜನತೆಗೆ ವಿವರಿಸಲಿ. ಬಿಜೆಪಿ ಇಡೀ ದೇಶವನ್ನು ಜೈಲಾಗಿ ಪರಿವರ್ತಿಸುತ್ತಿದೆ. ಬಾಯಿ ತೆರೆದರೆ ಇಲ್ಲಿ ಜೈಲು ಭಾಗ್ಯ. ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಚೇತನ್ ಬಂಧನವನ್ನು ಖಂಡಿಸುತ್ತದೆ. ಬಿಡುಗಡೆಗೆ ಆಗ್ರಹಿಸುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...