Homeಮುಖಪುಟಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

ಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

- Advertisement -
- Advertisement -

ವಯಸ್ಕ ಯುವಕ-ಯುವತಿ ಪ್ರೀತಿಸಿ ಮದುವೆಯಾಗುವಾಗ ಪೋಷಕರ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯಗೊಳಿಸಬೇಕು ಎಂದು ಗುಜರಾತ್‌ನ ಇಬ್ಬರು ಶಾಸಕರು ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಾರ್ಚ್ 17ರಂದು ನಡೆದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕ ಫತೇಸಿನ್ಹ್ ಚೌಹಾಣ್ ಮತ್ತು ಕಾಂಗ್ರೆಸ್ ಶಾಸಕ ಜೆನಿಬೆನ್ ಠಾಕೂರ್ ಅವರು ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಚೌಹಾಣ್ ಮತ್ತು ಠಾಕೂರ್ ಅವರು, ”ಮದುವೆಗಳ ನೋಂದಣಿ ಕಾಯಿದೆ-2009, ತಿದ್ದುಪಡಿ ಕೋರಿದರು. ಈ ಸಂದರ್ಭಗಳಲ್ಲಿ ಪೋಷಕರ ಸಹಿ ಕಡ್ಡಾಯಗೊಳಿಸಬೇಕು. ಪುರುಷ ಅಥವಾ ಮಹಿಳೆ ವಾಸಿಸುವ ತಾಲೂಕಿನಲ್ಲಿಯೇ ಇಂತಹ ವಿವಾಹಗಳನ್ನು ನೋಂದಣಿ ಮಾಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ವಿವಾಹಗಳಿಂದ ಅಪರಾಧದ ಪ್ರಮಾಣದ ಹೆಚ್ಚಳಕ್ಕೆ ಕಾರಣವಾಗುತ್ತವೆ…. ಅಂತಹ ಮದುವೆಗಳನ್ನು ಪೋಷಕರ ಒಪ್ಪಿಗೆಯೊಂದಿಗೆ ನೋಂದಾಯಿಸಿದರೆ, ಅಪರಾಧದ ಪ್ರಮಾಣವು 50% ಕ್ಕೆ ಇಳಿಯುತ್ತದೆ” ಎಂದು ಚೌಹಾಣ್ ಹೇಳಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

”ಹುಡುಗ ಮತ್ತು ಹುಡುಗಿ ತಮ್ಮ ದಾಖಲೆಗಳನ್ನು ಮರೆಮಾಡಿ ಬೇರೆ ಜಿಲ್ಲೆಗಳಲ್ಲಿ ಮದುವೆಯಾಗುತ್ತಾರೆ. ಇದರಿಂದ ಮುಂದೆ ಆ ಹುಡುಗಿ ತಂದೆ ತಾಯಿಯಿಂದ ದೂರ ಉಳಿದು ಬಳಲುತ್ತಾಳೆ ಅಥವಾ ಪೋಷಕರು ಮಗಳು ಓಡಿಹೋಗಿದ್ದಾಳೆ ಎಂದು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದರು.

”ತಂದೆ ತಾಯಿ ತಮ್ಮ ವೃತ್ತಿಯ ಕಾರಣಕ್ಕೆ ಕೆಲಸದಲ್ಲೇ ಕಾರ್ಯನಿರತರಾಗಿತ್ತಾರೆ ಹಾಗಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗಿರುವುದಿಲ್ಲ. ಈ ವೇಳೆ ಸಮಾಜ ವಿರೋಧಿಗಳು ಇದರ ಲಾಭವನ್ನು ಪಡೆದುಕೊಳ್ಳುತ್ತಾರೆ, ಮತ್ತೆ ಹುಡುಗಿಯರೊಂದಿಗೆ ಓಡಿಹೋಗುತ್ತಾರೆ” ಎಂದು ಹೇಳಿದರು.

ಈ ವೇಳೆ ಠಾಕೂರ್ ಮಾತನಾಡಿ, ”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ಪ್ರೇಮ ವಿವಾಹಗಳನ್ನು ವಿರೋಧಿಸಬೇಕು” ಎಂದರು.

“ನಾವು ಹುಡುಗಿ ಮತ್ತು ಹುಡುಗನ ನಡುವಿನ ‘ಪ್ರೇಮ’ ವಿವಾಹಗಳನ್ನು ವಿರೋಧಿಸುವುದಿಲ್ಲ, ಆದರೆ ಪೋಷಕರ ಒಪ್ಪಿಗೆಯನ್ನು ಪಡೆಯದ ಮದುವೆಗೆ ನಾವು ವಿರೋಧಿಸುತ್ತೇವೆ” ಎಂದು ಅವರು ಹೇಳಿದರೆಂದು ದಿ ಹಿಂದೂ ವರದಿ ಮಾಡಿದೆ.

”ಮಹಿಳೆಯ ಕುಟುಂಬ ವಾಸಿಸುವ ತಾಲೂಕಿನಲ್ಲಿ ಇಂತಹ ವಿವಾಹಗಳನ್ನು ನೋಂದಾಯಿಸಬೇಕು ಮತ್ತು ಮದುವೆಗಳಿಗೆ ಸ್ಥಳೀಯ ಸಾಕ್ಷಿಗಳು ಇರಬೇಕು” ಎಂದು ಠಾಕೂರ್ ಒತ್ತಾಯಿಸಿದರು.

ಕಳೆದ ವರ್ಷ, ರಾಜ್ಯದ ಪ್ರಭಾವಿ ಪಾಟಿದಾರ್ ಸಮುದಾಯದ ಸದಸ್ಯರು, ”ತಮ್ಮ ಸಮುದಾಯದ ಮಹಿಳೆ ಪ್ರೇಮವಿವಾಹವಾಗಬೇಕಾದರೆ, ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಕನಿಷ್ಠ ಒಬ್ಬ ಪೋಷಕರ ಸಹಿ ಕಡ್ಡಾಯವಾಗಿರಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Love marriage means after mutual consent of the lovers it will take place. If consents of parents required means independence of lovers in jeopardy.

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...