Homeಮುಖಪುಟಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

ಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಬೇಕು: ಗುಜರಾತ್‌ನ ಇಬ್ಬರು ಶಾಸಕರ ಒತ್ತಾಯ

- Advertisement -
- Advertisement -

ವಯಸ್ಕ ಯುವಕ-ಯುವತಿ ಪ್ರೀತಿಸಿ ಮದುವೆಯಾಗುವಾಗ ಪೋಷಕರ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯಗೊಳಿಸಬೇಕು ಎಂದು ಗುಜರಾತ್‌ನ ಇಬ್ಬರು ಶಾಸಕರು ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಾರ್ಚ್ 17ರಂದು ನಡೆದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕ ಫತೇಸಿನ್ಹ್ ಚೌಹಾಣ್ ಮತ್ತು ಕಾಂಗ್ರೆಸ್ ಶಾಸಕ ಜೆನಿಬೆನ್ ಠಾಕೂರ್ ಅವರು ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಚೌಹಾಣ್ ಮತ್ತು ಠಾಕೂರ್ ಅವರು, ”ಮದುವೆಗಳ ನೋಂದಣಿ ಕಾಯಿದೆ-2009, ತಿದ್ದುಪಡಿ ಕೋರಿದರು. ಈ ಸಂದರ್ಭಗಳಲ್ಲಿ ಪೋಷಕರ ಸಹಿ ಕಡ್ಡಾಯಗೊಳಿಸಬೇಕು. ಪುರುಷ ಅಥವಾ ಮಹಿಳೆ ವಾಸಿಸುವ ತಾಲೂಕಿನಲ್ಲಿಯೇ ಇಂತಹ ವಿವಾಹಗಳನ್ನು ನೋಂದಣಿ ಮಾಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ವಿವಾಹಗಳಿಂದ ಅಪರಾಧದ ಪ್ರಮಾಣದ ಹೆಚ್ಚಳಕ್ಕೆ ಕಾರಣವಾಗುತ್ತವೆ…. ಅಂತಹ ಮದುವೆಗಳನ್ನು ಪೋಷಕರ ಒಪ್ಪಿಗೆಯೊಂದಿಗೆ ನೋಂದಾಯಿಸಿದರೆ, ಅಪರಾಧದ ಪ್ರಮಾಣವು 50% ಕ್ಕೆ ಇಳಿಯುತ್ತದೆ” ಎಂದು ಚೌಹಾಣ್ ಹೇಳಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

”ಹುಡುಗ ಮತ್ತು ಹುಡುಗಿ ತಮ್ಮ ದಾಖಲೆಗಳನ್ನು ಮರೆಮಾಡಿ ಬೇರೆ ಜಿಲ್ಲೆಗಳಲ್ಲಿ ಮದುವೆಯಾಗುತ್ತಾರೆ. ಇದರಿಂದ ಮುಂದೆ ಆ ಹುಡುಗಿ ತಂದೆ ತಾಯಿಯಿಂದ ದೂರ ಉಳಿದು ಬಳಲುತ್ತಾಳೆ ಅಥವಾ ಪೋಷಕರು ಮಗಳು ಓಡಿಹೋಗಿದ್ದಾಳೆ ಎಂದು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದರು.

”ತಂದೆ ತಾಯಿ ತಮ್ಮ ವೃತ್ತಿಯ ಕಾರಣಕ್ಕೆ ಕೆಲಸದಲ್ಲೇ ಕಾರ್ಯನಿರತರಾಗಿತ್ತಾರೆ ಹಾಗಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗಿರುವುದಿಲ್ಲ. ಈ ವೇಳೆ ಸಮಾಜ ವಿರೋಧಿಗಳು ಇದರ ಲಾಭವನ್ನು ಪಡೆದುಕೊಳ್ಳುತ್ತಾರೆ, ಮತ್ತೆ ಹುಡುಗಿಯರೊಂದಿಗೆ ಓಡಿಹೋಗುತ್ತಾರೆ” ಎಂದು ಹೇಳಿದರು.

ಈ ವೇಳೆ ಠಾಕೂರ್ ಮಾತನಾಡಿ, ”ಪೋಷಕರ ಒಪ್ಪಿಗೆಯಿಲ್ಲದೆ ನಡೆಯುವ ಪ್ರೇಮ ವಿವಾಹಗಳನ್ನು ವಿರೋಧಿಸಬೇಕು” ಎಂದರು.

“ನಾವು ಹುಡುಗಿ ಮತ್ತು ಹುಡುಗನ ನಡುವಿನ ‘ಪ್ರೇಮ’ ವಿವಾಹಗಳನ್ನು ವಿರೋಧಿಸುವುದಿಲ್ಲ, ಆದರೆ ಪೋಷಕರ ಒಪ್ಪಿಗೆಯನ್ನು ಪಡೆಯದ ಮದುವೆಗೆ ನಾವು ವಿರೋಧಿಸುತ್ತೇವೆ” ಎಂದು ಅವರು ಹೇಳಿದರೆಂದು ದಿ ಹಿಂದೂ ವರದಿ ಮಾಡಿದೆ.

”ಮಹಿಳೆಯ ಕುಟುಂಬ ವಾಸಿಸುವ ತಾಲೂಕಿನಲ್ಲಿ ಇಂತಹ ವಿವಾಹಗಳನ್ನು ನೋಂದಾಯಿಸಬೇಕು ಮತ್ತು ಮದುವೆಗಳಿಗೆ ಸ್ಥಳೀಯ ಸಾಕ್ಷಿಗಳು ಇರಬೇಕು” ಎಂದು ಠಾಕೂರ್ ಒತ್ತಾಯಿಸಿದರು.

ಕಳೆದ ವರ್ಷ, ರಾಜ್ಯದ ಪ್ರಭಾವಿ ಪಾಟಿದಾರ್ ಸಮುದಾಯದ ಸದಸ್ಯರು, ”ತಮ್ಮ ಸಮುದಾಯದ ಮಹಿಳೆ ಪ್ರೇಮವಿವಾಹವಾಗಬೇಕಾದರೆ, ಅವರು ತಮ್ಮ ಮದುವೆಯನ್ನು ನೋಂದಾಯಿಸಲು ಕನಿಷ್ಠ ಒಬ್ಬ ಪೋಷಕರ ಸಹಿ ಕಡ್ಡಾಯವಾಗಿರಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Love marriage means after mutual consent of the lovers it will take place. If consents of parents required means independence of lovers in jeopardy.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...