Homeಮುಖಪುಟರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ; ಲೋಕಸಭಾ ಸದಸ್ಯತ್ವ ಅನರ್ಹಗೊಳ್ಳುವುದೇ?

ರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ; ಲೋಕಸಭಾ ಸದಸ್ಯತ್ವ ಅನರ್ಹಗೊಳ್ಳುವುದೇ?

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ 2019ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ತೀರ್ಪು ನೀಡಿದ್ದು, ಸಂಸದ ರಾಹುಲ್‌ ಅವರು ತಪ್ಪಿತಸ್ಥರೆಂದು ಗುರುತಿಸಿದೆ.

ಗುಜರಾತ್‌ನ ನ್ಯಾಯಾಲಯವು ರಾಹು‌ಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಆದರೆ ತಕ್ಷಣಕ್ಕೆ ಜಾರಿಯಾಗುವುದಿಲ್ಲ. ಐಪಿಸಿ ಸೆಕ್ಷನ್ 500 (ಮಾನನಷ್ಟ) ಅಡಿಯಲ್ಲಿ ರಾಹುಲ್ ಅವರನ್ನು ತಪ್ಪಿತಸ್ಥರು ಎಂದು ಗುರುತಿಸಲಾಗಿದೆ. ಎರಡು ವರ್ಷಗಳವರೆಗೆ ಸರಳ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕೋರ್ಟ್ ಹೇಳಿದೆ.

ಸೂರತ್ ನ್ಯಾಯಾಲಯವು ರಾಹುಲ್‌ ಅವರ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತುಗೊಳಿಸಿದ್ದು, ಅವರ ವಕೀಲರ ತಂಡದಲ್ಲಿನ ಮನವಿಯ ಆಧಾರದಲ್ಲಿ ಈ ತೀರ್ಪನ್ನು ಪ್ರಶ್ನಿಸಲು ಅವಕಾಶ ನೀಡಲಾಗಿದೆ.

2013ರಲ್ಲಿ ಶಿಕ್ಷೆಗೊಳಗಾದ ಸಂಸದರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅನ್ವಯ ರಾಹುಲ್ ಅವರು ಲೋಕಸಭಾ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆಯೇ ಎಂಬ ಊಹಾಪೋಹಗಳು ಹಬ್ಬಿವೆ. (ಕುತೂಹಲಕಾರಿ ಸಂಗತಿಯೆಂದರೆ ಸುಪ್ರೀಂಕೋರ್ಟ್‌ನ ತೀರ್ಮಾನವನ್ನು ರದ್ದುಗೊಳಿಸುವ ಸುಗ್ರೀವಾಜ್ಞೆಯನ್ನು ವಿರೋಧಿಸಿದ್ದ ರಾಹುಲ್‌, ತನ್ನದೇ ಪಕ್ಷದ ನಿರ್ಧಾರವನ್ನು ಟೀಕಿಸಿದ್ದರು.) ಆದಾಗ್ಯೂ, ಈ ಶಿಕ್ಷೆಯನ್ನು ತಡೆಯಲು ಉನ್ನತ ನ್ಯಾಯಾಲಯದ ಮೆಟ್ಟಿಲೇರಲು ರಾಹುಲ್ ಅವರಿಗೆ ಅವಕಾಶವಿದೆ.

ರಾಹುಲ್ ಅವರ ಅನರ್ಹತೆಯು ಒಂದು ತಿಂಗಳ ನಂತರ ಪ್ರಾರಂಭವಾಗಲಿದೆ, ಆ ಅವಧಿಯೊಳಗೆ ಅವರು ಮೇಲ್ಮನವಿ ಸಲ್ಲಿಸಬಹುದು.

ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಯಾಗಿರುವ ಕಾರಣ ರಾಹುಲ್ ಅವರು ನೇರವಾಗಿ ಉಚ್ಚ ನ್ಯಾಯಾಲಯ ಅಥವಾ ಸರ್ವೊಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ಸಾಧ್ಯವಿಲ್ಲ. “ಸೂರತ್ ನ್ಯಾಯಾಲಯದ ತೀರ್ಪಿನಿಂದಾಗಿ ದೊಡ್ಡ ಸಾರ್ವಜನಿಕ ಹಿತಾಸಕ್ತಿಗಳಿಗೆ ಹಾನಿಯಾಗುತ್ತದೆ ಎಂಬ ಕಾರಣಕ್ಕಾಗಿ ಉನ್ನತ ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಮೂರನೇ ವ್ಯಕ್ತಿಯೊಬ್ಬರು ಮುಂದಾಗಬಹುದು.”

ಮೊದಲನೆಯದಾಗಿ, 1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 8(1) ರಲ್ಲಿ ಅಪರಾಧವನ್ನು ಪಟ್ಟಿ ಮಾಡಿದ್ದರೆ ಪ್ರಶ್ನೆ ಉದ್ಭವಿಸುತ್ತದೆ. ಈ ಕಾನೂನು ಲಂಚ ಮತ್ತು ಅನಗತ್ಯ ಪ್ರಭಾವದಂತಹ ಅಪರಾಧಗಳನ್ನು ಒಳಗೊಳ್ಳುತ್ತದೆ. ಮಾನನಷ್ಟವನ್ನು ಈ ವಿಭಾಗದಲ್ಲಿ ಸೇರಿಸಲಾಗಿಲ್ಲ.

ಎರಡನೆಯದಾಗಿ, ಒಬ್ಬ ಜನಪ್ರತಿನಿಧಿಯು ಇತರ ಅಪರಾಧಗಳಲ್ಲಿ ತಪ್ಪಿತಸ್ಥನಾಗಿದ್ದರೆ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರೆ ಸೆಕ್ಷನ್ 8(3) ಪ್ರಕಾರ ಸಂಸದರನ್ನು ಅನರ್ಹಗೊಳಿಸಬಹುದು.

ಸೆಕ್ಷನ್ 8(4)ರ ಪ್ರಕಾರ ಅನರ್ಹತೆಯು ಅಪರಾಧ ನಿರ್ಣಯದ ದಿನಾಂಕದಿಂದ ‘ಮೂರು ತಿಂಗಳುಗಳು ಕಳೆದ ನಂತರ’ ಮಾತ್ರ ಜಾರಿಗೆ ಬರುತ್ತದೆ.

ಇದರರ್ಥ ಮೇಲ್ಮನವಿ ಸಲ್ಲಿಸುವುದು ಸಾಕಾಗುವುದಿಲ್ಲ. ಆದರೆ ಶಿಕ್ಷೆಗೊಳಗಾದ ಸಂಸದ ಅಥವಾ ಶಾಸಕರು ವಿಚಾರಣಾ ನ್ಯಾಯಾಲಯದ ಶಿಕ್ಷೆಗೆ ವಿರುದ್ಧವಾಗಿ ನಿರ್ದಿಷ್ಟ ತಡೆಯಾಜ್ಞೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389ರ ಪ್ರಕಾರ ಮೇಲ್ಮನವಿಯು ಬಾಕಿ ಉಳಿದಿರುವಾಗ ಮೇಲ್ಮನವಿ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಬಹುದು.

2013ರ ‘ಲಿಲಿ ಥಾಮಸ್ ವಿ ಯೂನಿಯನ್ ಆಫ್ ಇಂಡಿಯಾ’ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ಸೆಕ್ಷನ್ 8(4) ಅನ್ನು ರದ್ದುಗೊಳಿಸಿತು. ಸಂಸದರು ಮತ್ತು ಶಾಸಕರ ಅಪರಾಧಗಳಿಗೆ ಶಿಕ್ಷೆಯಾದರೆ, ಮೇಲ್ಮನವಿ ಸಲ್ಲಿಸಲು ಮೂರು ತಿಂಗಳ ಸಮಯವನ್ನು ನೀಡದೆ ತಕ್ಷಣವೇ ಅವರ ಸ್ಥಾನದಿಂದ ಅನರ್ಹಗೊಳಿಸಲಾಗುವುದು ಎಂದು ಕೋರ್ಟ್ ಹೇಳಿತು.

ಅದೇ ವರ್ಷದಲ್ಲಿ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ತೀರ್ಪನ್ನು ರದ್ದುಗೊಳಿಸಲು ಮತ್ತು ಸೆಕ್ಷನ್ 8 (4) ಅನ್ನು ಉಳಿಸಿಕೊಳ್ಳಲು ಪ್ರಯತ್ನಿಸಿತು. ಆದರೆ ಯುಪಿಎಯ ಸುಗ್ರೀವಾಜ್ಞೆಯನ್ನು ವಿರೋಧಿಸಿದ ರಾಹುಲ್ ಗಾಂಧಿ, “ಇದು ಕಿತ್ತು ಬಿಸಾಡಬೇಕಾದ ಅಸಂಬದ್ಧ ಸಂಗತಿ” ಎಂದಿದ್ದರು.

ಸುಪ್ರೀಂ ಕೋರ್ಟ್ ವಕೀಲ ಉಪಮನ್ಯು ಹಜಾರಿಕಾ ‘ಹಿಂದೂಸ್ತಾನ್ ಟೈಮ್ಸ್‌’ಗೆ ಪ್ರತಿಕ್ರಿಯಿಸಿದ್ದು, “ಈ 30 ದಿನಗಳು ಅವರಿಗೆ ನಿರ್ಣಾಯಕ. ಸೂರತ್ ಜಿಲ್ಲಾ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲು ಅಥವಾ ರದ್ದುಗೊಳಿಸಲು ಅವರು ಉನ್ನತ ನ್ಯಾಯಾಲಯದ ಮೆಟ್ಟಿಲೇರಿದರೆ ಅವರು ತಮ್ಮ ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಬಹುದು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಚೇತನ್‌ ಬಂಧನ; ವಾಕ್ ಸ್ವಾತಂತ್ರ್ಯದ ಹರಣವೆಂದು ಜನಾಕ್ರೋಶ

ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಲು ಕಾಂಗ್ರೆಸ್‌ನ ಕಾನೂನು ತಂಡವು ಯಾವುದೇ ಸಮಯವನ್ನು ವ್ಯರ್ಥ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಮತ್ತೊಬ್ಬ ವಕೀಲ ಮುಹಮ್ಮದ್ ಖಾನ್ ಹೇಳಿದ್ದಾರೆ.

ಅಂತಹ ಪ್ರಕರಣಗಳಲ್ಲಿ ಮೇಲ್ಮನವಿಯನ್ನು ಸೆಷನ್ಸ್‌ ನ್ಯಾಯಾಲಯದಲ್ಲಿ ಸಲ್ಲಿಸಬೇಕಾಗುತ್ತದೆ. ಅಂದರೆ ಅವರು ತಾವಾಗಿಯೇ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ.

ಪ್ರಧಾನಿ ಮೋದಿ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?

‘ಮೋದಿ’ ಎಂಬ ಸರ್‌ನೇಮ್‌ (ಉಪನಾಮ) ಬಳಸಿದ್ದಕ್ಕಾಗಿ 2019ರಲ್ಲಿ ರಾಹುಲ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು. ಕರ್ನಾಟಕದಲ್ಲಿ ಚುನಾವಣಾ ಪೂರ್ವ ರ್‍ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಗುರಿಯಾಗಿತ್ತು.

ವರದಿ ಕೃಪೆ: ಮಿಂಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...