Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...