Homeಕರ್ನಾಟಕಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ: ಜೈಲಿಂದ ಹೊರಬಂದ ಬಳಿಕ ಪುನರುಚ್ಚರಿಸಿದ ನಟ ಚೇತನ್

- Advertisement -
- Advertisement -

ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಶೇಷಾದ್ರಿಪುರಂ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ಅವರು ಗುರುವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಚೇತನ್, ”ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರೂ ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ..” ಎಂದು ಹೇಳಿದರು.

”ಉರಿಗೌಡ ನಂಜೇಗೌಡ ಎನ್ನುವುದು ಶುದ್ಧಸುಳ್ಳು, ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ಇತಿಹಾಸ ತಜ್ಞರು, ಬುದ್ದಿವಂತರು, ವಿಚಾರವಂತರು ಹಾಗೂ ಓದಿರುವವರೆಲ್ಲರೂ ಹೇಳುತ್ತಾರೆ. ಆ ನಿಟ್ಟಿನಲ್ಲಿ ಉರಿಗೌಡ ನಂಜೇಗೌಡ ಇದ್ದರು ಎನ್ನುವುದಕ್ಕೆ ಯಾವದೇ ದಾಖಲೆಗಳು ಇಲ್ಲ. ಅದೇ ರೀತಿ ಸುಳ್ಳುಗಳ ಮೇಲೆ ಕಟ್ಟಿರುವುದೇ ಹಿಂದುತ್ವ. ನನ್ನ ಟ್ವೀಟ್‌ನಲ್ಲೇ ಹೇಳಿದ್ದೇನೆ. ಸಾವರ್ಕರ್‌ನಿಂದ ಹೇಳಿದ ಸುಳ್ಳುಗಳು, 1992ರಲ್ಲಿ ಆಗಿರುವ ಸುಳ್ಳುಗಳು, 2023ರಲ್ಲಿ ಆಗಿರುವ ಸುಳ್ಳುಗಳು, ಈ ಎಲ್ಲ ಸುಳ್ಳುಗಳ ಮೇಲೆ ಹಿಂದುತ್ವ ನಡೆಯುತ್ತಿದೆ” ಎಂದು ಜೈಲಿಗೆ ಕಳುಹಿಸಲು ಕಾರವಾಗಿದ್ದ ಟ್ವೀಟ್‌ನ್ನೇ ಚೇತನ್ ಪುನರುಚ್ಚರಿಸಿದರು.

”ಉರಿಗೌಡ ನಂಜೇಗೌಡ ಎಂಬುದು ಸುಳ್ಳು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದು ಮುಸ್ಲಿಂರು ಮತ್ತು ಒಕ್ಕಲಿಗರ ನಡುವೆ ದ್ವೇಷ ಬಿತ್ತುವ ಪ್ರಯತ್ನವಾಗಿದೆ, ಅದು ಯಾವುದೇ ಕಾರಣಕ್ಕೂ ಸಫಲ ಆಗಲ್ಲ. ಟಿಪ್ಪು ಒಬ್ಬ ಮಹಾನ್ ಸ್ವಾತಂತ್ರ ಹೋರಾಟಗಾರ, ಅದ್ಭುತ ಕೆಲಸಗಳನ್ನು ಸಹ ಮಾಡಿದ್ದಾರೆ.. ಅವರ ಖಡ್ಗವನ್ನ ನಾವು ಒಪ್ಪಲ್ಲ, ಆದರೆ ಅವರ ಸುಧಾರಣೆ ಇವತ್ತಿನ ದಿನ ನಮಗೆ ಅಗತ್ಯ ಇದೆ . ಅದೇ ರೀತಿಯಲ್ಲಿ ನಮಗೆ ಬಹಳ ಮುಖ್ಯವಾಗಿ ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆ, ಹಾಗೂ ಗಾಂಧಿಯವರ ಸಮಾನತೆ, ನ್ಯಾಯ, ವೈಜ್ಞಾನಿಕತೆ ಮತ್ತು ಅಹಿಂಸೆ ನಮಗೆ ಅಗತ್ಯ ಇದೆ, ಅದೇ ನಮ್ಮ ಶಕ್ತಿ. ಸಮಾನತೆಯೇ ಸತ್ಯ ಸಮಾನತೆಯೇ ಪರಿವರ್ತನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುತ್ವದ ಸುಳ್ಳುಗಳ ಬಗ್ಗೆ ಪೋಸ್ಟ್: ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಾದ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಚೇತನ್, ”ಇದು ನನ್ನನ್ನ ಮಾತ್ರ ಕುಗ್ಗಿಸುವ ಪ್ರಯತ್ನ ಅಲ್ಲ, ಲಕ್ಷಾಂತರ ಸಮಾನತಾವಾದಿಗಳನ್ನು ಕುಗ್ಗಿಸುವ ಪ್ರಯತ್ನವಾಗಿದೆ. ನಾವು ಸತ್ಯ ಮಾತನಾಡಿದರೆ ಜೈಲಿಗೆ ಹಾಕುವ ಪ್ರಯತ್ನ ನಡೆಯುತ್ತದೆ. ಆದರೆ ಅವರು ನಮ್ಮನ್ನ ವಿಚಾರಗಳಲ್ಲಿ ಸೋಲಿಸೋಕಾಗಲ್ಲ ಹಾಗಾಗಿ ಜೈಲಿಗೆ ಹಾಕುವ ಪ್ರಯತ್ನ ಮಾಡುತ್ತಾರೆ. ಅವರಲ್ಲಿ ವಿಚಾರಗಳೇ ಇಲ್ಲ, ಬರೀ ಸುಳ್ಳು, ದ್ವೇಷ, ಅಸಮಾನತೆ, ಹಿಂಸೆ ಇದೆ. ಸಮಾನತಾವಾದಿಗಳಾದ ನಾವುಗಳು ಸಂವಿಧಾನದ ಪೀಠಿಕೆಯನ್ನು ಎತ್ತಿಹಿಡಿಯುತ್ತೇವೆ, ನಾವೇ ನಿಜವಾದ ಭಾರತೀಯರು” ಎಂದರು.

”ನಿಮಗೆ ತಾಕತ್ತಿದ್ದರೆ ವಿಚಾರದಲ್ಲಿ ಸೋಲಿಸಿ, ಯಾವುದೇ ತಪ್ಪಿಲ್ಲದೇ ನಮ್ಮನ್ನ ನೀವು ಜೈಲಿಗೆ ಹಾಕುತ್ತಿದ್ದಿರಿ. ಸಾವಿರಾರು ವರ್ಷಗಳಿಂದ ನಮನ್ನ ಸತ್ಯ ಹೇಳಲಿಕ್ಕೆ ಬಿಟ್ಟಿಲ್ಲ ನೀವು.. ಬಸವಣ್ಣನವರ ವಚನಗಳನ್ನೇ ಸುಟ್ಟು ಹಾಕಿದ್ದಾರೆ. ಬಾಬಾಸಾಹೇಬರ ವಿಚಾರಗಳು ಇಂದಿಗೂ ಬೆಳಕಿಗೆ ಬರಲ್ಲ. ಪೆರಿಯಾರ್ ವಿಚಾರಗಳನ್ನ ಮುಚ್ಚಿಹಾಕುತ್ತಿದ್ದೀರಿ. ಆದರೆ ಸಮಾನತೆಯೇ ಸತ್ಯ ನಮ್ಮ ಹೋರಾಟ ಹೀಗೆ ಮುಂದುವರೆಯುತ್ತದೆ” ಎಂದು ನಟ ಚೇತನ್ ಹೇಳಿದ್ದಾರೆ.

ಗುರುವಾರ, ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು, 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...