Homeಕರ್ನಾಟಕವರ್ಷ ಕಳೆದರೂ ಮುಗಿಯದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಕಣ್ಣೀರಿನಲ್ಲಿ ಕಾಲ ದೂಡುತ್ತಿರುವ ಭಾವೀ ಶಿಕ್ಷಕರು

ವರ್ಷ ಕಳೆದರೂ ಮುಗಿಯದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಕಣ್ಣೀರಿನಲ್ಲಿ ಕಾಲ ದೂಡುತ್ತಿರುವ ಭಾವೀ ಶಿಕ್ಷಕರು

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 500ಕ್ಕೂ ಅಭ್ಯರ್ಥಿಗಳ ಬದುಕಿಗೆ ಕೊಳ್ಳಿ ಇಟ್ಟಿರಿ. ಈಗ ಶಿಕ್ಷಕರ ನೇಮಕಾತಿಯಲ್ಲಿ 13,300 ಕ್ಕೂ ಹೆಚ್ಚು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಮತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು 15,000 ಶಿಕ್ಷಕರ ನೇಮಕಾತಿ ಮಾಡಿಕೊಂಡಿದ್ದೇವೆ ಎಂದು ಹಲವಾರು ಬಾರಿ ತಮ್ಮನ್ನು ತಾವೇ ಹೊಗಳಿಕೊಂಡಿದ್ದುಂಟು. ಆದರೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸರ್ಕಾರ ಮಾಡಿದ ಯಡವಟ್ಟುಗಳಿಂದ ಒಬ್ಬರ ನಂತರ ಒಬ್ಬರಂತೆ ಹಲವರು ಕೋರ್ಟ್ ಮೆಟ್ಟಿಲೇರಿದ ಪರಿಣಾಮ ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಲಿದ್ದು, ನೀತಿ ಸಂಹಿತೆ ಜಾರಿಗೆ ಬಂದಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತೆ 5-6 ತಿಂಗಳು ಮುಂದೆ ಹೋಗುವ ಸಂಭವವಿದೆ. ಇದರಿಂದಾಗಿ ಶಿಕ್ಷಕರಾಗುವ ಕನಸಿನಲ್ಲಿದ್ದ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾಗಿದ್ದ ಮತ್ತು ಯಾವುದೇ ಕಾನೂನು ತೊಡಗಿಲ್ಲದ ಭಾವೀ ಶಿಕ್ಷಕರು ಪ್ರತಿ ದಿನ ಕಣ್ಣೀರಿಡುತ್ತಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ ಆರು ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದಾರೆ.

ಹಾಗಾಗಿ ಸದ್ಯದಲ್ಲಿ ವಿವಾದ ಬಗೆಹರಿಯುವ ಸೂಚನೆ ಕಂಡುಬರುತ್ತಿಲ್ಲ. “ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮೊದಲು ವರ್ಗಾವಣೆಯನ್ನು ಪೂರ್ಣಗೊಳಿಸುವುದು. ವರ್ಗಾವಣೆಯಿಂದಾಗಿ ಖಾಲಿಯಾದ ಹುದ್ದೆಗಳಿಗೆ ಹೊಸ ಶಿಕ್ಷಕರನ್ನು ನಿಯೋಜಿಸುವುದು ನಮ್ಮ ಯೋಜನೆಯಾಗಿದೆ. ಈಗ ವರ್ಗಾವಣೆಗೆ ಸಂಬಂಧಿಸಿದ ಕಡತವು ಇನ್ನೂ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿರುವುದರಿಂದ ಎಲ್ಲವೂ ವಿಳಂಬವಾಗುತ್ತದೆ” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಭಾವೀ ಶಿಕ್ಷಕರ ಆಕ್ರೋಶ; ಸಿಎಂ ಬೊಮ್ಮಾಯಿಗೆ ಪತ್ರ

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಿಮ್ಮ ಸರ್ಕಾರದ ಸಾಧನೆ ಸೊನ್ನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 500ಕ್ಕೂ ಅಭ್ಯರ್ಥಿಗಳ ಬದುಕಿಗೆ ಕೊಳ್ಳಿ ಇಟ್ಟಿರಿ. ಈಗ ಶಿಕ್ಷಕರ ನೇಮಕಾತಿಯಲ್ಲಿ 13,300ಕ್ಕೂ ಹೆಚ್ಚು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ನಾಲ್ಕು ವರ್ಷಗಳಾಗುತ್ತಿವೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ 2021ರ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆದರೂ ಇನ್ನೂ ನೇಮಕಾತಿ ಪ್ರಕ್ರಿಯೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಮತ್ತು ಪಿಯುಸಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಪೋಲಿಸ್ ಹುದ್ದೆಗಳ ನೇಮಕಾತಿ ಕೂಡ ಬಾಕಿ ಉಳಿದಿದೆ. ವರ್ಷಗಟ್ಟಲೆ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುತ್ತಿರುವ ಅದೆಷ್ಟೊ ಅಭ್ಯರ್ಥಿಗಳ‌ ಕನಸಿಗಳಿಗೆ ನೀರೆರೆಚುವ ಕೆಲಸವನ್ನು ನಿಮ್ಮ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ಪಾಠ ಮಾಡುತ್ತಿದ್ದು, ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗುತ್ತದೆ. ಆದರೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ನಮಗೆ ಕೆಲಸ ಸಿಗುವುದು ಮತ್ತಷ್ಟು ಮುಂದೆ ಹೋಗುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ. ಮುಂದಿನ ಶೈಕ್ಷಣಿಗೆ ವರ್ಷದ ಒಳಗೆ ಶಿಕ್ಷಕರ ನೇಮಕಾತಿ ಆಗದೆ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುವ ಅಪಾಯವಿದೆ.

ಹಾಗಾಗಿ ಚುನಾವಣೆ ನೀತಿ ಸಂಹಿತೆಯಿಂದ ತೊಂದರೆಯಾಗದಂತೆ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನ ಚುರುಗೊಳಿಸಬೇಕು. ಕಲ್ಯಾಣ ಕರ್ನಾಟಕ ಹೊರತುಪಡಿಸಿ ಉಳಿದ ಭಾಗಗಳ ಭಾವೀ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ: ಸರ್ಕಾರದ ವಿರುದ್ಧ ಸುಪ್ರೀಂ ಮೊರೆ ಹೋದ 14 ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...