Homeಕರ್ನಾಟಕವರ್ಷ ಕಳೆದರೂ ಮುಗಿಯದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಕಣ್ಣೀರಿನಲ್ಲಿ ಕಾಲ ದೂಡುತ್ತಿರುವ ಭಾವೀ ಶಿಕ್ಷಕರು

ವರ್ಷ ಕಳೆದರೂ ಮುಗಿಯದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಕಣ್ಣೀರಿನಲ್ಲಿ ಕಾಲ ದೂಡುತ್ತಿರುವ ಭಾವೀ ಶಿಕ್ಷಕರು

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 500ಕ್ಕೂ ಅಭ್ಯರ್ಥಿಗಳ ಬದುಕಿಗೆ ಕೊಳ್ಳಿ ಇಟ್ಟಿರಿ. ಈಗ ಶಿಕ್ಷಕರ ನೇಮಕಾತಿಯಲ್ಲಿ 13,300 ಕ್ಕೂ ಹೆಚ್ಚು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಮತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು 15,000 ಶಿಕ್ಷಕರ ನೇಮಕಾತಿ ಮಾಡಿಕೊಂಡಿದ್ದೇವೆ ಎಂದು ಹಲವಾರು ಬಾರಿ ತಮ್ಮನ್ನು ತಾವೇ ಹೊಗಳಿಕೊಂಡಿದ್ದುಂಟು. ಆದರೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸರ್ಕಾರ ಮಾಡಿದ ಯಡವಟ್ಟುಗಳಿಂದ ಒಬ್ಬರ ನಂತರ ಒಬ್ಬರಂತೆ ಹಲವರು ಕೋರ್ಟ್ ಮೆಟ್ಟಿಲೇರಿದ ಪರಿಣಾಮ ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಲಿದ್ದು, ನೀತಿ ಸಂಹಿತೆ ಜಾರಿಗೆ ಬಂದಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತೆ 5-6 ತಿಂಗಳು ಮುಂದೆ ಹೋಗುವ ಸಂಭವವಿದೆ. ಇದರಿಂದಾಗಿ ಶಿಕ್ಷಕರಾಗುವ ಕನಸಿನಲ್ಲಿದ್ದ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾಗಿದ್ದ ಮತ್ತು ಯಾವುದೇ ಕಾನೂನು ತೊಡಗಿಲ್ಲದ ಭಾವೀ ಶಿಕ್ಷಕರು ಪ್ರತಿ ದಿನ ಕಣ್ಣೀರಿಡುತ್ತಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ ಆರು ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದಾರೆ.

ಹಾಗಾಗಿ ಸದ್ಯದಲ್ಲಿ ವಿವಾದ ಬಗೆಹರಿಯುವ ಸೂಚನೆ ಕಂಡುಬರುತ್ತಿಲ್ಲ. “ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮೊದಲು ವರ್ಗಾವಣೆಯನ್ನು ಪೂರ್ಣಗೊಳಿಸುವುದು. ವರ್ಗಾವಣೆಯಿಂದಾಗಿ ಖಾಲಿಯಾದ ಹುದ್ದೆಗಳಿಗೆ ಹೊಸ ಶಿಕ್ಷಕರನ್ನು ನಿಯೋಜಿಸುವುದು ನಮ್ಮ ಯೋಜನೆಯಾಗಿದೆ. ಈಗ ವರ್ಗಾವಣೆಗೆ ಸಂಬಂಧಿಸಿದ ಕಡತವು ಇನ್ನೂ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿರುವುದರಿಂದ ಎಲ್ಲವೂ ವಿಳಂಬವಾಗುತ್ತದೆ” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಭಾವೀ ಶಿಕ್ಷಕರ ಆಕ್ರೋಶ; ಸಿಎಂ ಬೊಮ್ಮಾಯಿಗೆ ಪತ್ರ

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಿಮ್ಮ ಸರ್ಕಾರದ ಸಾಧನೆ ಸೊನ್ನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 500ಕ್ಕೂ ಅಭ್ಯರ್ಥಿಗಳ ಬದುಕಿಗೆ ಕೊಳ್ಳಿ ಇಟ್ಟಿರಿ. ಈಗ ಶಿಕ್ಷಕರ ನೇಮಕಾತಿಯಲ್ಲಿ 13,300ಕ್ಕೂ ಹೆಚ್ಚು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ನಾಲ್ಕು ವರ್ಷಗಳಾಗುತ್ತಿವೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ 2021ರ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆದರೂ ಇನ್ನೂ ನೇಮಕಾತಿ ಪ್ರಕ್ರಿಯೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಮತ್ತು ಪಿಯುಸಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಪೋಲಿಸ್ ಹುದ್ದೆಗಳ ನೇಮಕಾತಿ ಕೂಡ ಬಾಕಿ ಉಳಿದಿದೆ. ವರ್ಷಗಟ್ಟಲೆ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುತ್ತಿರುವ ಅದೆಷ್ಟೊ ಅಭ್ಯರ್ಥಿಗಳ‌ ಕನಸಿಗಳಿಗೆ ನೀರೆರೆಚುವ ಕೆಲಸವನ್ನು ನಿಮ್ಮ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ಪಾಠ ಮಾಡುತ್ತಿದ್ದು, ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗುತ್ತದೆ. ಆದರೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ನಮಗೆ ಕೆಲಸ ಸಿಗುವುದು ಮತ್ತಷ್ಟು ಮುಂದೆ ಹೋಗುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ. ಮುಂದಿನ ಶೈಕ್ಷಣಿಗೆ ವರ್ಷದ ಒಳಗೆ ಶಿಕ್ಷಕರ ನೇಮಕಾತಿ ಆಗದೆ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುವ ಅಪಾಯವಿದೆ.

ಹಾಗಾಗಿ ಚುನಾವಣೆ ನೀತಿ ಸಂಹಿತೆಯಿಂದ ತೊಂದರೆಯಾಗದಂತೆ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನ ಚುರುಗೊಳಿಸಬೇಕು. ಕಲ್ಯಾಣ ಕರ್ನಾಟಕ ಹೊರತುಪಡಿಸಿ ಉಳಿದ ಭಾಗಗಳ ಭಾವೀ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ: ಸರ್ಕಾರದ ವಿರುದ್ಧ ಸುಪ್ರೀಂ ಮೊರೆ ಹೋದ 14 ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...