Homeಕರ್ನಾಟಕಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ್ ಅವರ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್‌.ಆರ್‌.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ (ಸಕ್ಕರೆ) ಇಲಾಖೆ ಅಧೀನ ಕಾರ್ಯದರ್ಶಿಯೂ ಆಗಿರುವ ಶಾಂತಾರಾಮ್‌, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ‘ವೋಟ್‌ ಫಾರ್‌ ಒಪಿಎಸ್‌’ ಅಭಿಯಾನದಲ್ಲಿ ಸಕ್ರಿಯವಾಗಿದ್ದಾರೆ.

“ನಿರ್ದಿಷ್ಟ ರಾಜಕೀಯ ಪಕ್ಷಗಳ ಪರವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ಹೇಳಿಕೆ ನೀಡಿ, ಚುನಾವಣಾ ನೀತಿ ನಿಯಮಗಳನ್ನು ಉಲ್ಲಂಘಿಸಿರುವ ಶಾಂತಾರಾಮ್‌ ಅವರನ್ನು ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು” ಎಂದು ಎನ್‌.ಆರ್‌.ರಮೇಶ್ ಒತ್ತಾಯಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಸ್ತುತ ಚುನಾವಣಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಚುನಾವಣಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಶಾಂತರಾಮ್‌ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ ಹೇಳಿಕೆಗಳನ್ನು ದಾಖಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಶಾಸಕಾಂಗಕ್ಕೆ ಇರುವ ಸಾಂವಿಧಾನಿಕ ಹಕ್ಕುಗಳನ್ನು ಶಾಂತಾರಾಮ್ ಪ್ರಶ್ನಿಸುವ ಜೊತೆಗೆ ಸಹೋದ್ಯೋಗಿಗಳನ್ನು ಪ್ರೇರೇಪಿಸುತ್ತಿದ್ದಾರೆ. ನಿರ್ದಿಷ್ಟ ಪಕ್ಷದ ಪರ ಮತ ಚಲಾಯಿಸುವಂತೆ ಹೇಳಿಕೆ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶಾಂತಾರಾಮ್ ಅವರ ನಡವಳಿಕೆಯು ಪ್ರಜಾಪ್ರತಿನಿಧ್ಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸರ್ಕಾರಿ ನೌಕರರು ಮುಂಬರುವ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನೇಮಕಗೊಳ್ಳಲಿದ್ದು, ಶಾಂತಾರಾಮ ಅವರ ಪ್ರಚೋದಿತ ಹೇಳಿಕೆಗಳಿಂದ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಾಂತಾರಾಮ್ ಅವರನ್ನು ಕೂಡಲೇ ಅಮಾನತು ಮಾಡಿ ಶಿಸ್ತುಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಶಾಂತಾರಾಮ್ ಪ್ರತಿಕ್ರಿಯೆ

ಬಿಜೆಪಿ ಮುಖಂಡ ರಮೇಶ್ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಶಾಂತಾರಾಮ್‌, “ರಮೇಶ್ ಅವರ ಮೇಲೆ ಗೌರವವಿದೆ. ಭ್ರಷ್ಟಾಚಾರದ ವಿರುದ್ಧ ಜನಪರವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಅವರಾಗಿದ್ದಾರೆ. ನೌಕರರಿಗೆ ಪಿಂಚಣಿ ಇಲ್ಲವಾದರೆ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂಬುದನ್ನು ಅವರು ಗಮನಿಸಬೇಕಿದೆ. ಅವರು ನಡೆಸುತ್ತಿರುವ ಹೋರಾಟದ ಭಾಗವಾಗಿಯೇ ನಾವು ಕೂಡ ನಡೆಯುತ್ತಿದ್ದೇವೆ” ಎಂದರು.

“ಸರ್ಕಾರಿ ನೌಕರರ ವಿಷಯದ ಕುರಿತು ಇವರಿಗೆ ಯಾರೋ ತಪ್ಪು ಸಂದೇಶ ನೀಡಿದಂತಿದೆ. ಎನ್‌ಪಿಎಸ್‌ (ಹೊಸ ಪಿಂಚಣಿ ಯೋಜನೆ) ರದ್ದುಗೊಳಿಸಿ, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸಿ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಿವೃತ್ತಿಯಾದವರಿಗೆ ಒಂದು ಬದುಕು ಕಟ್ಟಿಕೊಡಿ ಎಂದು ಕೇಳುತ್ತಿದ್ದೇವೆ. ನಾವು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರಿ ನೌಕರರಾದ ನಮಗೆ ನಮ್ಮ ಜವಾಬ್ದಾರಿಗಳು ತಿಳಿದಿವೆ” ಎಂದು ಸ್ಪಷ್ಟಪಡಿಸಿದರು.

“‘ವೋಟ್‌ ಫಾರ್‌ ಒಪಿಎಸ್‌’ ಎಂಬ ಅಭಿಯಾನವು ರಾಷ್ಟ್ರೀಯ ಕಾರ್ಯಕ್ರಮದ ಭಾಗವಾಗಿದೆ. ಅದನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ. ಸರ್ಕಾರಿ ನೌಕರರಿಗೆ ರಮೇಶ್ ಅವರ ಮೇಲೆ ಗೌರವವಿದೆ. ಅದನ್ನು ಹಾಳು ಮಾಡಿಸಬೇಕೆಂದು ಅವರಿಂದ ಈ ರೀತಿ ದೂರನ್ನು ಯಾರೋ ಕೊಡಿಸಿದ್ದಾರೆ. ಯಾರೋ ಮಿಸ್‌‌ಲೀಡ್‌ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ವೋಟ್‌ ಫಾರ್‌ ಒಪಿಎಸ್‌ ಹೋರಾಟಕ್ಕೆ ರಮೇಶ್ ಸೇರಿದಂತೆ ಎಲ್ಲರ ಸಹಕಾರ ಬೇಕಿದೆ. ಎನ್‌ಪಿಎಸ್‌ ಹೋರಾಟದ ಹಿನ್ನೆಲೆಯೇನು ಎಂಬುದು ರಮೇಶ್‌ ಅವರಿಗೆ ತಿಳಿದಿಲ್ಲ ಅನಿಸುತ್ತಿದೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...