Homeಕರ್ನಾಟಕಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ್ ಅವರ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್‌.ಆರ್‌.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ (ಸಕ್ಕರೆ) ಇಲಾಖೆ ಅಧೀನ ಕಾರ್ಯದರ್ಶಿಯೂ ಆಗಿರುವ ಶಾಂತಾರಾಮ್‌, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ‘ವೋಟ್‌ ಫಾರ್‌ ಒಪಿಎಸ್‌’ ಅಭಿಯಾನದಲ್ಲಿ ಸಕ್ರಿಯವಾಗಿದ್ದಾರೆ.

“ನಿರ್ದಿಷ್ಟ ರಾಜಕೀಯ ಪಕ್ಷಗಳ ಪರವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ಹೇಳಿಕೆ ನೀಡಿ, ಚುನಾವಣಾ ನೀತಿ ನಿಯಮಗಳನ್ನು ಉಲ್ಲಂಘಿಸಿರುವ ಶಾಂತಾರಾಮ್‌ ಅವರನ್ನು ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು” ಎಂದು ಎನ್‌.ಆರ್‌.ರಮೇಶ್ ಒತ್ತಾಯಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಸ್ತುತ ಚುನಾವಣಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಚುನಾವಣಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಶಾಂತರಾಮ್‌ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ ಹೇಳಿಕೆಗಳನ್ನು ದಾಖಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಶಾಸಕಾಂಗಕ್ಕೆ ಇರುವ ಸಾಂವಿಧಾನಿಕ ಹಕ್ಕುಗಳನ್ನು ಶಾಂತಾರಾಮ್ ಪ್ರಶ್ನಿಸುವ ಜೊತೆಗೆ ಸಹೋದ್ಯೋಗಿಗಳನ್ನು ಪ್ರೇರೇಪಿಸುತ್ತಿದ್ದಾರೆ. ನಿರ್ದಿಷ್ಟ ಪಕ್ಷದ ಪರ ಮತ ಚಲಾಯಿಸುವಂತೆ ಹೇಳಿಕೆ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶಾಂತಾರಾಮ್ ಅವರ ನಡವಳಿಕೆಯು ಪ್ರಜಾಪ್ರತಿನಿಧ್ಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸರ್ಕಾರಿ ನೌಕರರು ಮುಂಬರುವ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನೇಮಕಗೊಳ್ಳಲಿದ್ದು, ಶಾಂತಾರಾಮ ಅವರ ಪ್ರಚೋದಿತ ಹೇಳಿಕೆಗಳಿಂದ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಾಂತಾರಾಮ್ ಅವರನ್ನು ಕೂಡಲೇ ಅಮಾನತು ಮಾಡಿ ಶಿಸ್ತುಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಶಾಂತಾರಾಮ್ ಪ್ರತಿಕ್ರಿಯೆ

ಬಿಜೆಪಿ ಮುಖಂಡ ರಮೇಶ್ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಶಾಂತಾರಾಮ್‌, “ರಮೇಶ್ ಅವರ ಮೇಲೆ ಗೌರವವಿದೆ. ಭ್ರಷ್ಟಾಚಾರದ ವಿರುದ್ಧ ಜನಪರವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಅವರಾಗಿದ್ದಾರೆ. ನೌಕರರಿಗೆ ಪಿಂಚಣಿ ಇಲ್ಲವಾದರೆ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂಬುದನ್ನು ಅವರು ಗಮನಿಸಬೇಕಿದೆ. ಅವರು ನಡೆಸುತ್ತಿರುವ ಹೋರಾಟದ ಭಾಗವಾಗಿಯೇ ನಾವು ಕೂಡ ನಡೆಯುತ್ತಿದ್ದೇವೆ” ಎಂದರು.

“ಸರ್ಕಾರಿ ನೌಕರರ ವಿಷಯದ ಕುರಿತು ಇವರಿಗೆ ಯಾರೋ ತಪ್ಪು ಸಂದೇಶ ನೀಡಿದಂತಿದೆ. ಎನ್‌ಪಿಎಸ್‌ (ಹೊಸ ಪಿಂಚಣಿ ಯೋಜನೆ) ರದ್ದುಗೊಳಿಸಿ, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸಿ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಿವೃತ್ತಿಯಾದವರಿಗೆ ಒಂದು ಬದುಕು ಕಟ್ಟಿಕೊಡಿ ಎಂದು ಕೇಳುತ್ತಿದ್ದೇವೆ. ನಾವು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರಿ ನೌಕರರಾದ ನಮಗೆ ನಮ್ಮ ಜವಾಬ್ದಾರಿಗಳು ತಿಳಿದಿವೆ” ಎಂದು ಸ್ಪಷ್ಟಪಡಿಸಿದರು.

“‘ವೋಟ್‌ ಫಾರ್‌ ಒಪಿಎಸ್‌’ ಎಂಬ ಅಭಿಯಾನವು ರಾಷ್ಟ್ರೀಯ ಕಾರ್ಯಕ್ರಮದ ಭಾಗವಾಗಿದೆ. ಅದನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ. ಸರ್ಕಾರಿ ನೌಕರರಿಗೆ ರಮೇಶ್ ಅವರ ಮೇಲೆ ಗೌರವವಿದೆ. ಅದನ್ನು ಹಾಳು ಮಾಡಿಸಬೇಕೆಂದು ಅವರಿಂದ ಈ ರೀತಿ ದೂರನ್ನು ಯಾರೋ ಕೊಡಿಸಿದ್ದಾರೆ. ಯಾರೋ ಮಿಸ್‌‌ಲೀಡ್‌ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ವೋಟ್‌ ಫಾರ್‌ ಒಪಿಎಸ್‌ ಹೋರಾಟಕ್ಕೆ ರಮೇಶ್ ಸೇರಿದಂತೆ ಎಲ್ಲರ ಸಹಕಾರ ಬೇಕಿದೆ. ಎನ್‌ಪಿಎಸ್‌ ಹೋರಾಟದ ಹಿನ್ನೆಲೆಯೇನು ಎಂಬುದು ರಮೇಶ್‌ ಅವರಿಗೆ ತಿಳಿದಿಲ್ಲ ಅನಿಸುತ್ತಿದೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...