Homeಕರ್ನಾಟಕ‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

“ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಂಗಾಯಣ ನಿರ್ದೇಶಕರು ಆಶಿಸಿದ್ದಾರೆ

- Advertisement -
- Advertisement -

“ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ನಾನು ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ” ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸ್ಪಷ್ಟಪಡಿಸಿದ್ದಾರೆ.

ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ. ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದು ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಅಡ್ಡಂಡ ಅವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ಕ್ಷಮೆ ಕೋರಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅವರ ಕ್ಷಮೆಯಾಚನೆ ಹೀಗಿದೆ:

“ನಿರ್ಮಲಾನಂದ ಸ್ವಾಮೀಜಿಯವರನ್ನು ಅವಮಾನಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನಾನು ಮೂರ್ಖನಾಗಿ ಏನನ್ನೂ ಮಾತನಾಡಿಲ್ಲ. ಸಂತರ ನಾಡು ಇದು. ಸಂತರಿಲ್ಲದಿದ್ದರೆ ಈ ನಾಡನ್ನು ಕಟ್ಟಲು ಆಗುತ್ತಿಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಕೇವಲ ಸಂತರಲ್ಲ, ಎಂಟೆಕ್‌ ಓದಿಕೊಂಡವರು.”

“ಕೊಡವರಿಗೆ ಮಠಾಧೀಶರಿಲ್ಲ. ನನಗೆ ಯಾರು ಸ್ವಾಮೀಜಿ? ನಿರ್ಮಲಾನಂದ ಸ್ವಾಮೀಜಿಯವರೇ ನನಗೂ ಸ್ವಾಮೀಜಿ. ಕೊಡಗಿನಲ್ಲಿ ಅರೆಭಾಷೆ ಗೌಡರಿದ್ದಾರೆ. ಕೊಡವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದ ಅರೆಭಾಷೆ ಗೌಡ ಸಮುದಾಯಕ್ಕೂ ನಿರ್ಮಲಾನಂದರೇ ಸ್ವಾಮೀಜಿ. ಈ ಸ್ವಾಮೀಜಿಯವರ ಬಗ್ಗೆ ಕೆಟ್ಟ ಮಾತನಾಡಲು ಸಿದ್ಧನಿಲ್ಲ, ನಾನು ಆ ಕೆಲಸ ಮಾಡುವುದಿಲ್ಲ.”

“ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಇರಬೇಕೆಂದು ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿರುವುದಾಗಿ ಪತ್ರಿಕೆಯಲ್ಲಿ ಬಂದಿದೆ ಎಂದು ಹೇಳಿದ್ದೇನಷ್ಟೇ. ಅದು ಸುಳ್ಳಾದರೆ ಸುಳ್ಳು. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.”

“ಸ್ವಾಮೀಜಿಯವರಿಗೆ ಬುದ್ಧಿವಾದ ಹೇಳುವಷ್ಟು ನಾನು ಗ್ರೇಟ್ ಅಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಇವರಂತೆಯೇ ಅನೇಕ ಸ್ವಾಮೀಜಿಗಳು ಈ ನಾಡಿನಲ್ಲಿ ಇದ್ದಾರೆ. ಎಲ್ಲರೂ ಸಂತರೇ. ಇವರನ್ನು ಆರ್‌ಎಸ್‌ಎಸ್‌ ಗೌರವಿಸುತ್ತದೆ, ಸಮಾಜವಾದಿಗಳು ಗೌರವಿಸುತ್ತಾರೆ.”

“ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಅವಹೇಳನ ಮಾಡಿದ್ದೇನೆ ಎಂಬುದು ಸುಳ್ಳು, ರಾಜಕೀಯವಾಗಿ ಮಾತನಾಡಿದ್ದೇನೆ. ರಂಗಾಯಣ ನಿರ್ದೇಶಕರಾಗಿರುವ ನೀನು ರಾಜಕೀಯ ಮಾತನಾಡಬಹುದೇ ಎಂದು ಕೇಳುತ್ತಾರೆ. ರಾಜಕೀಯವೆಂದರೆ ಪವಿತ್ರ ಕ್ಷೇತ್ರ. ಪ್ರಧಾನಿ, ರಾಷ್ಟ್ರಪತಿಯವರೆಲ್ಲ ರಾಜಕೀಯದಿಂದ ಬಂದವರು. ರಾಜಕೀಯ ಮಾತನಾಡಬಾರದು ಎಂಬುದು ಅವೈಜ್ಞಾನಿಕ ಅರೆಜ್ಞಾನ. ರಾಜಕೀಯ ಮಾತನಾಡಿದರೆ ತಪ್ಪೇನು?”

“ಯಾವುದೋ ಒಂದು ಪಕ್ಷದ ಕುರಿತು ಹೇಳಿಲ್ಲ. ಒಟ್ಟು ರಾಜಕೀಯದ ಚರ್ಚೆಯನ್ನು ಮಾಡಿದ್ದೇವೆ. ನಾನು ಈಗ ನೇರವಾಗಿ ಆದಿಚುಂಚನಗಿರಿ ಮಠಕ್ಕೆ ಹೋಗುತ್ತೇನೆ. ಅವರೇನು ನನ್ನನ್ನು ಅಲ್ಲಿಂದ ಓಡಿಸುವುದಿಲ್ಲ. ಯಾಕೆಂದರೆ ಅವರು ಅತ್ಯಂತ ಶಾಂತ ಸ್ವಭಾವದವರು. ಅವರು ಕೋಪ ಮಾಡಿಕೊಂಡಿದ್ದನ್ನು ಎಂದೂ ಕಂಡಿಲ್ಲ.”

“ನಮ್ಮ ನಾಡಿನಲ್ಲಿ ಎಲ್ಲಾ ಜನಾಂಗಗಳಿಗೂ ಸ್ವಾಮೀಜಿಗಳು ಇದ್ದಾರಲ್ಲವಾ? ಅದು ಸುಳ್ಳಾ? ವೀರಶೈವರಿಗೆ ಒಬ್ಬರು ಸ್ವಾಮೀಜಿ, ದಲಿತರಿಗೊಬ್ಬರು ಸ್ವಾಮೀಜಿ ಇದ್ದಾರೆ. ಮುನ್ನೂರು ಜನ ಸ್ವಾಮೀಜಿಗಳು ನನ್ನ ‘ಟಿಪ್ಪು ನಿಜಕನಸುಗಳು’ ನಾಟಕ ನೋಡಲು ಕಲ್ಬುರ್ಗಿಯಲ್ಲಿ ಬಂದಿದ್ದರು. ನಾನು ಸಂತರಿಗೆ ಗೌರವ ಕೊಡುವ ಸಂಸ್ಕಾರದವನು. ನಾನು ಕಮ್ಯುನಿಸ್ಟ್ ಅಲ್ಲ.ಈ ಚುನಾವಣೆ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಯವರ ಹೆಸರನ್ನು ಯಾರಾದರೂ ಬಳಸಿಕೊಂಡರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಂತರು ಕ್ಷಮಿಸಬಲ್ಲರಲ್ಲವಾ? ಕ್ಷಮಿಸಿ.”

“ಒಕ್ಕಲಿಗರು ಬಂದು ಮುತ್ತಿಗೆ ಹಾಕಿದ್ದಾರೆ ಎನ್ನುತ್ತೀರಿ. ಯಾವ ಒಕ್ಕಲಿಗರು ಎಂದು ನೋಡಬೇಕಲ್ಲವಾ? ಜೆಡಿಎಸ್‌‌ ಒಕ್ಕಲಿಗರಾ? ಕಾಂಗ್ರೆಸ್ ಒಕ್ಕಲಿಗರಾ? ಬಿಜೆಪಿ ಒಕ್ಕಲಿಗರ?- ಇದು ರಾಜಕೀಯ. ಸ್ವಾಮೀಜಿಯವರಲ್ಲಿ ವಿನಂತಿ ಮಾಡುತ್ತೇನೆ. ನಾನು ನಿಮ್ಮಷ್ಟು ದೊಡ್ಡ ವ್ಯಕ್ತಿಯಾಗಲಾರೆ. ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರು ಬೆಳೆಯಬೇಕೆಂದು ಹೇಳುತ್ತಿಲ್ಲ, ಒಟ್ಟಾರೆ ಸ್ವಾಮೀಜಿಗಳ ಕುರಿತು ಹೇಳುತ್ತಿದ್ದೇನೆ.”

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

“ನಾನು ಮಾತನಾಡಿದ್ದು ತಪ್ಪು ಎಂಬುದಾದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ವಿಷಾದ ಬೇರೆಯಲ್ಲ, ಕ್ಷಮೆ ಬೇರೆಯಲ್ಲ. ಸ್ವಾಮೀಜಿಗಿಂತ ದೊಡ್ಡವನು ನಾನಲ್ಲ. ನಾನು ಸ್ವಾಮೀಜಿಗೆ ಅವಮಾನ ಮಾಡಿಲ್ಲ. ಮಾಡುವುದೂ ಇಲ್ಲ. ನನ್ನ ಹೇಳಿಕೆಯಿಂದ ಅವರ ಭಕ್ತಕೋಟಿಯಲ್ಲಿ ಮುಜುಗರವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರಲ್ಲಿ ನಾನು ಕ್ಷಮೆ ಕೋರುತ್ತೇನೆ ಹೊರತು, ಇಲ್ಲಿ ಬಂದು ರಾಜಕೀಯಕ್ಕಾಗಿ ಗಲಾಟೆ ಮಾಡುವವರಲ್ಲಿ ಅಲ್ಲ. ಒಂದು ಪಕ್ಷದ ಹಿಂಬಾಲಕರಲ್ಲಿ ಕ್ಷಮೆ ಕೇಳಲ್ಲ.”

“ನಿರ್ಮಲಾನಂದ ಸ್ವಾಮೀಜಿಯವರ ಬಗ್ಗೆ ನಾನು ಅಪಮಾನಕರವಾಗಿ ಮಾತನಾಡಿಲ್ಲ. ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಬಂದರೆ ಅದಕ್ಕೆ ನಾನು ಹೊಣೆಯಲ್ಲ. ನಾನು ಮಾತನಾಡಿದ್ದು ನನ್ನ ಬಳಿ ರೆಕಾರ್ಡ್‌‌ನಲ್ಲಿ ಇದೆ. ನಾನು ಎಲ್ಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಲ್ಲ, ಮಾಧ್ಯಮ ಗೋಷ್ಠಿ ನಡೆಸಿ ಹೇಳಿದ್ದಲ್ಲ. ಯಾವುದೋ ಒಂದು ಮಿಡಿಯದವರು ತಮಗೆ ಬೇಕಾದಂತೆ ಬಳಸಿಕೊಂಡು ಟಿಆರ್‌ಪಿ ಹೆಚ್ಚಿಸಿಕೊಂಡಿದ್ದರೆ, ಅವರಿಗೆ ಲಾಭವಾಗಿದ್ದರೆ ಧನ್ಯವಾದ. ಆ ಟಿ.ವಿ. ಚಾನೆಲ್‌ ಕೂಡ ಲಾಸ್ ಆಗಬಾರದು.”

-ಈ ಮೇಲಿನ ಮಾತುಗಳನ್ನು ಅಡ್ಡಂಡ ಕಾರ್ಯಪ್ಪ ಅವರು ಖಾಸಗಿ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...