Homeಕರ್ನಾಟಕಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

ಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

- Advertisement -
- Advertisement -

14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಬಿಫೆಸ್‌) ಮಾರ್ಚ್ 23ರಿಂದ 30ರವರೆಗೆ ನಡೆಯುತ್ತಿದ್ದು, ಬೆಳಗಿನ ಪಾಸ್‌ ಪಡೆಯಲು ಸಿನಿಮಾಸಕ್ತರು ಪರದಾಡುವಂತಾಗಿದೆ. ಪಾಸ್‌ ಪಡೆಯಲು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಲಾಗದೆ ಒದ್ದಾಡುತ್ತಿದ್ದಾರೆ.

ಪಾಸ್ ಪಡೆದವರ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಆಗುತ್ತಿಲ್ಲ. ಹಣವನ್ನೂ ತೆಗೆದುಕೊಳ್ಳುತ್ತಿಲ್ಲ.ಕ್ಯೂಆರ್‌ ಕೋಡ್ಅನ್ನು ಲೆನ್ಸ್ ಎನ್ನುವ ಆಪ್‌ ಮೂಲಕವೇ ಸ್ಕ್ಯಾನ್‌ ಮಾಡಬೇಕಾಗುತ್ತಿದೆ. ಈ ಕುರಿತು ಆಯೋಜಕರಿಗೂ ಸರಿಯಾದ ತಿಳಿವಳಿಕೆ ಇಲ್ಲ ಎಂದು ಬಿಫೆಸ್‌ಗೆ ಹೋಗಿ ವಾಪಸ್‌ ಬಂದವರು ಬೇಸರ ವ್ಯಕ್ತಪಡಿಸಿದ್ದಾರೆ.

“ಪ್ರವೇಶ ಪಡೆಯಲು ಸಾಧ್ಯವಾಗದೆ ಅನೇಕರು ವಾಪಸ್ ಹೋಗಿದ್ದಾರೆ. ಇಪ್ಪತ್ತು ನಿಮಿಷಕ್ಕೊಬ್ಬನಿಗೆ ಸ್ಕ್ಯಾನ್ ಆಗುತ್ತಿದೆ. ನೋಂದಣಿಯಾದವರು ಹಣ ಕಟ್ಟಲಾಗದೆ, ಪಾಸ್‌ ಪಡೆಯದ ಸ್ಥಿತಿಯೂ ನಿರ್ಮಾಣವಾಗಿದೆ” ಎಂದು ಟಿಕೆಟ್ ಪಡೆಯಲು ಸಾಧ್ಯವಾಗದ ಸಿನಿಮಾಸಕ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಬಿಫೆಸ್‌ನಲ್ಲಿ ಸಿನಿಮಾ ನೋಡಲು ಆಸಕ್ತಿ ಇರುವವರು ಬಿಫೆಸ್ ವೆಬ್‌ಸೈಟ್‌ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಆಧಾರ್‌ ನಂಬರ್‌ ಹಾಗೂ ಫೋಟೋ ಪ್ರತಿಯನ್ನು ನೋಂದಣಿಗೆ ಲಗತ್ತಿಸಬೇಕಾಗಿರುತ್ತದೆ. ಆನಂತರ ಪೇಮೆಂಟ್ ಕೇಳುತ್ತದೆ. ಹಣ ಕಟ್ಟಿದ ಮೇಲೆ ಕನ್ಫರ್ಮ್‌‌ಮೇಷನ್‌‌ ಸಂದೇಶ ಬರುತ್ತದೆ. ಅದರ ಆಧಾರದಲ್ಲಿ ಷೋ ನಡೆಯುವಲ್ಲಿಗೆ ಹೋದಾಗ ಪಾಸ್ ದೊರಕುತ್ತದೆ. ವಿವಿಧ ಪಾಸ್‌ಗಳಿದ್ದು,  ಬೇರೆ ಬೇರೆ ಶುಲ್ಕವಿರುತ್ತದೆ” ಎಂದು ನೋಂದಣಿ ಪ್ರಕ್ರಿಯೆಯ ಕುರಿತು ವಿವರಿಸಿದರು.

ಇದನ್ನೂ ಓದಿರಿ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

“ಫೇಮೆಂಟ್ ಮಾಡಲು ಸಾಧ್ಯವಾಗದೆಯೂ, ಕನ್ಫರ್ಮೆಷನ್ ಬಂದಿರುವ ಉದಾಹರಣೆಗಳಿವೆ. ಹೀಗಾದಾಗ ಪಾಸ್ ಕೊಡುವುದಿಲ್ಲ. ಎರಡು ದಿನ ಮಾತ್ರ ಪೇಮೆಂಟ್ ಲಿಂಕ್‌ ಸರಿಯಾಗಿತ್ತು. ಅನೇಕ ಸಲ ಪ್ರಯತ್ನ ಮಾಡಿದ್ದರಿಂದ ಲಿಂಕ್ ಒಪನ್‌ ಆಗದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ನೋಂದಣಿಯಾಗಿದ್ದರೂ ಪೇಮೆಂಟ್ ಲಿಂಕ್ ತೆರೆದುಕೊಳ್ಳುತ್ತಿರಲಿಲ್ಲ. ಮತ್ತೆ ಪ್ರಯತ್ನಿಸಿದರೆ ಈಗಾಗಲೇ ನೋಂದಣಿಯಾಗಿದೆ ಎಂದು ಬರುತ್ತಿತ್ತು. ಇಂಥವರಿಗೆ ಬೆಳಗಿನ ಪಾಸ್‌ ನೀಡುತ್ತೇವೆ ಎಂದು ತಿಳಿಸಿದರು. ಈಗ ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗುತ್ತಿಲ್ಲ. ಗೂಗಲ್‌ ಪೇ, ಪೋನ್‌ ಪೇ ಮೂಲಕ ಹಣ ಕಟ್ಟಲು ಆಗಲ್ಲ. ಲೆನ್ಸ್‌ ಎನ್ನುವ ಆಪ್‌ ಮೂಲಕ ಕಟ್ಟಬೇಕು ಎನ್ನುತ್ತಿದ್ದಾರೆ. ಅದು ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಲಾಯಿತು. ಆದರೆ ಅವರು ನಮ್ಮ ಕರೆಗೆ ಲಭ್ಯವಾಗಿಲ್ಲ. (ಪ್ರತಿಕ್ರಿಯೆ ಸಿಕ್ಕಲ್ಲಿ ಸುದ್ದಿಯನ್ನು ನವೀಕರಿಸಲಾಗುವುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...