Homeಕರ್ನಾಟಕಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

ಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

- Advertisement -
- Advertisement -

14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಬಿಫೆಸ್‌) ಮಾರ್ಚ್ 23ರಿಂದ 30ರವರೆಗೆ ನಡೆಯುತ್ತಿದ್ದು, ಬೆಳಗಿನ ಪಾಸ್‌ ಪಡೆಯಲು ಸಿನಿಮಾಸಕ್ತರು ಪರದಾಡುವಂತಾಗಿದೆ. ಪಾಸ್‌ ಪಡೆಯಲು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಲಾಗದೆ ಒದ್ದಾಡುತ್ತಿದ್ದಾರೆ.

ಪಾಸ್ ಪಡೆದವರ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಆಗುತ್ತಿಲ್ಲ. ಹಣವನ್ನೂ ತೆಗೆದುಕೊಳ್ಳುತ್ತಿಲ್ಲ.ಕ್ಯೂಆರ್‌ ಕೋಡ್ಅನ್ನು ಲೆನ್ಸ್ ಎನ್ನುವ ಆಪ್‌ ಮೂಲಕವೇ ಸ್ಕ್ಯಾನ್‌ ಮಾಡಬೇಕಾಗುತ್ತಿದೆ. ಈ ಕುರಿತು ಆಯೋಜಕರಿಗೂ ಸರಿಯಾದ ತಿಳಿವಳಿಕೆ ಇಲ್ಲ ಎಂದು ಬಿಫೆಸ್‌ಗೆ ಹೋಗಿ ವಾಪಸ್‌ ಬಂದವರು ಬೇಸರ ವ್ಯಕ್ತಪಡಿಸಿದ್ದಾರೆ.

“ಪ್ರವೇಶ ಪಡೆಯಲು ಸಾಧ್ಯವಾಗದೆ ಅನೇಕರು ವಾಪಸ್ ಹೋಗಿದ್ದಾರೆ. ಇಪ್ಪತ್ತು ನಿಮಿಷಕ್ಕೊಬ್ಬನಿಗೆ ಸ್ಕ್ಯಾನ್ ಆಗುತ್ತಿದೆ. ನೋಂದಣಿಯಾದವರು ಹಣ ಕಟ್ಟಲಾಗದೆ, ಪಾಸ್‌ ಪಡೆಯದ ಸ್ಥಿತಿಯೂ ನಿರ್ಮಾಣವಾಗಿದೆ” ಎಂದು ಟಿಕೆಟ್ ಪಡೆಯಲು ಸಾಧ್ಯವಾಗದ ಸಿನಿಮಾಸಕ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಬಿಫೆಸ್‌ನಲ್ಲಿ ಸಿನಿಮಾ ನೋಡಲು ಆಸಕ್ತಿ ಇರುವವರು ಬಿಫೆಸ್ ವೆಬ್‌ಸೈಟ್‌ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಆಧಾರ್‌ ನಂಬರ್‌ ಹಾಗೂ ಫೋಟೋ ಪ್ರತಿಯನ್ನು ನೋಂದಣಿಗೆ ಲಗತ್ತಿಸಬೇಕಾಗಿರುತ್ತದೆ. ಆನಂತರ ಪೇಮೆಂಟ್ ಕೇಳುತ್ತದೆ. ಹಣ ಕಟ್ಟಿದ ಮೇಲೆ ಕನ್ಫರ್ಮ್‌‌ಮೇಷನ್‌‌ ಸಂದೇಶ ಬರುತ್ತದೆ. ಅದರ ಆಧಾರದಲ್ಲಿ ಷೋ ನಡೆಯುವಲ್ಲಿಗೆ ಹೋದಾಗ ಪಾಸ್ ದೊರಕುತ್ತದೆ. ವಿವಿಧ ಪಾಸ್‌ಗಳಿದ್ದು,  ಬೇರೆ ಬೇರೆ ಶುಲ್ಕವಿರುತ್ತದೆ” ಎಂದು ನೋಂದಣಿ ಪ್ರಕ್ರಿಯೆಯ ಕುರಿತು ವಿವರಿಸಿದರು.

ಇದನ್ನೂ ಓದಿರಿ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಪಾಲಾರ್, ಗಾಂಧಿ ಮತ್ತು ನೋಟು ಸಿನಿಮಾ ಆಯ್ಕೆ ಮಾಡದಿರುವುದಕ್ಕೆ ಆಕ್ರೋಶ

“ಫೇಮೆಂಟ್ ಮಾಡಲು ಸಾಧ್ಯವಾಗದೆಯೂ, ಕನ್ಫರ್ಮೆಷನ್ ಬಂದಿರುವ ಉದಾಹರಣೆಗಳಿವೆ. ಹೀಗಾದಾಗ ಪಾಸ್ ಕೊಡುವುದಿಲ್ಲ. ಎರಡು ದಿನ ಮಾತ್ರ ಪೇಮೆಂಟ್ ಲಿಂಕ್‌ ಸರಿಯಾಗಿತ್ತು. ಅನೇಕ ಸಲ ಪ್ರಯತ್ನ ಮಾಡಿದ್ದರಿಂದ ಲಿಂಕ್ ಒಪನ್‌ ಆಗದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ನೋಂದಣಿಯಾಗಿದ್ದರೂ ಪೇಮೆಂಟ್ ಲಿಂಕ್ ತೆರೆದುಕೊಳ್ಳುತ್ತಿರಲಿಲ್ಲ. ಮತ್ತೆ ಪ್ರಯತ್ನಿಸಿದರೆ ಈಗಾಗಲೇ ನೋಂದಣಿಯಾಗಿದೆ ಎಂದು ಬರುತ್ತಿತ್ತು. ಇಂಥವರಿಗೆ ಬೆಳಗಿನ ಪಾಸ್‌ ನೀಡುತ್ತೇವೆ ಎಂದು ತಿಳಿಸಿದರು. ಈಗ ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗುತ್ತಿಲ್ಲ. ಗೂಗಲ್‌ ಪೇ, ಪೋನ್‌ ಪೇ ಮೂಲಕ ಹಣ ಕಟ್ಟಲು ಆಗಲ್ಲ. ಲೆನ್ಸ್‌ ಎನ್ನುವ ಆಪ್‌ ಮೂಲಕ ಕಟ್ಟಬೇಕು ಎನ್ನುತ್ತಿದ್ದಾರೆ. ಅದು ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ್ ಕಶ್ಯಪ್‌ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಲಾಯಿತು. ಆದರೆ ಅವರು ನಮ್ಮ ಕರೆಗೆ ಲಭ್ಯವಾಗಿಲ್ಲ. (ಪ್ರತಿಕ್ರಿಯೆ ಸಿಕ್ಕಲ್ಲಿ ಸುದ್ದಿಯನ್ನು ನವೀಕರಿಸಲಾಗುವುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...