Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...