Homeಚಳವಳಿಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

ಪರಿಶಿಷ್ಟರ ಒಳಮೀಸಲಾತಿ: ಬಿಜೆಪಿ ಗಿಮಿಕ್

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಎಂದಿನಂತ ಚುನಾವಣೆಯ ಹೊಸ್ತಿಲಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದೆ. ಆದರೆ ಒಳಮೀಸಲಾತಿ ಜಾರಿ ಎಂದೇ ಸುಳ್ಳು ಪ್ರಚಾರ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ದಲಿತ ಬಾಂಧವರು ಕುಣಿದು ಕುಪ್ಪಳಿಸಿದ್ದಾರೆ. ಸಂತೋಷ. ಆದರೆ ಈ ಒಳಮೀಸಲಾತಿ ಶಿಫಾರಸ್ಸು ಜಾರಿಯಾಗುವುದೇ ಅಥವಾ ಕೇವಲ ಬಿಜೆಪಿ ಗಿಮಿಕ್ ಮಾತ್ರವೇ ಎಂಬುದನ್ನು ತಿಳಿಯಬೇಕಿದೆ.

1. ಒಳಮೀಸಲಾತಿ ವರ್ಗೀಕರಣ ಶಿಫಾರಸ್ಸು ಮಾದಿಗ ಸಮುದಾಯ ನಡೆಸಿದ 30 ವರ್ಷಗಳ ಹೋರಾಟದ ಪ್ರತಿಫಲವೇ ಹೊರತು ಯಾವುದೋ ಒಂದು ಸರ್ಕಾರದ ಸಾಧನೆಯಲ್ಲ.

2. ಜಸ್ಟೀಸ್ ಸದಾಶಿವ ಆಯೋಗ ಮಾಡಿದ ವರ್ಗೀಕರಣವು ಶೇ. 15 ರ ಮೀಸಲಾತಿಯನ್ನು ಆಧರಿಸಿತ್ತು. ಹಲವು ವರ್ಷಗಳ ಕಾಲ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮಾಡಿ ಎಡಗೈ ಸಂಬಂಧಿತ ಜಾತಿಗಳಿಗೆ 6%, ಬಲಗೈ ಸಂಬಂಧಿತ ಜಾತಿಗಳಿಗೆ 5%, ಸ್ಪೃಶ್ಯ ಜಾತಿಗಳಿಗೆ 3%, ಇತರೆ ಪರಿಶಿಷ್ಟರಿಗೆ 1% ಮೀಸಲಾತಿ ನಿಗಧಿಗೊಳಿಸಿತ್ತು. ಈಗ ಬಿಜೆಪಿ ಸರ್ಕಾರ ಪರಿಶಿಷ್ಟರಿಗೆ ಹೆಚ್ಚಳಗೊಳಿಸಬೇಕೆಂದಿರುವ 17% ಮೀಸಲಾತಿಯಲ್ಲಿ ಮೇಲಿನಂತೆ ಕ್ರಮವಾಗಿ 6%, 5.5%, 4.5% ಮತ್ತು 1% ವರ್ಗೀಕರಿಸಿ ಆದೇಶಿಸಿದೆ. ಇದಕ್ಕೆ‌ಯಾವುದೇ ಸಮೀಕ್ಷೆಗಳು ಆಗಿಲ್ಲ. ಅದಕ್ಕೆ ಪುರಾವೆಗಳನ್ನೂ ಸಹ ಸರ್ಕಾರ ನೀಡಿಲ್ಲ. ಯಾವ ಆಧಾರದಲ್ಲಿ ಸ್ಪೃಶ್ಯ ಜಾತಿಗಳಿಗೆ ಹೆಚ್ಚುವರಿಯಾಗಿ 1.5% ನೀಡಿತೋ ತಿಳಿಯದಾಗಿದೆ. ಈ ಅನ್ಯಾಯವನ್ನು ಮುಚ್ಚಿಡಲು ಹೊಲೆಯರ ಮೂಗಿಗೆ 0.5% ಹೆಚ್ಚುವರಿ ತುಪ್ಪ ಸವರಿದೆ. ಹೆಚ್ಚಳ ಮಾಡುತ್ತೇವೆ ಎಂದಿರುವ 17% ನಲ್ಲಿ ಮಾದಿಗರಿಗೆ ಬಹುದೊಡ್ಡ ಅನ್ಯಾಯವಾಗಿದೆ.

3. ಆಯ್ತು, ಈಗಾಗಿರುವ ವರ್ಗೀಕರಣವನ್ನೇ ಒಪ್ಪಿಕೊಂಡರೂ ಅದು ಜಾರಿಯಾಗುತ್ತದೆಯೇ? ನೋಡೋಣ ಬನ್ನಿ. ಪರಿಶಿಷ್ಟರ ಮೀಸಲಾತಿಯನ್ನು 15% ನಿಂದ 17% ಗೆ ಹೆಚ್ಚಿಸಬೇಕೆಂದು ಆದೇಶ ಮಾಡಿರುವ ಬಿಜೆಪಿ ಸರ್ಕಾರದ ನಡೆ ಸಂಪೂರ್ಣ ವಂಚನೆಯಿಂದ ಕೂಡಿದೆ. ಪರಿಶಿಷ್ಟರಿಗೆ 17% ಗೆ ಮೀಸಲಾತಿ ಹೆಚ್ಚಳವಾದರೆ ಅದು ಸುಪ್ರೀಂ ಕೋರ್ಟ್ ವಿಧಿಸಿರುವ 50% ಮಿತಿ ದಾಟುತ್ತದೆ. ಹಾಗಾಗಿ 17% ಊರ್ಜಿತವಾಗಬೇಕೆಂದರೆ ದೆಹಲಿಯ ಸಂಸತ್ತಿನಲ್ಲಿ ಸಂವಿಧಾನದ 9 ನೇ ಶೆಡ್ಯೂಲಿಗೆ ಕಾಯ್ದೆ ಮಾಡಿ ಸೇರಿಸಬೇಕಿದೆ. ತಮಿಳುನಾಡು ಹೀಗೇ ಜಾರಿ ಮಾಡಿಕೊಂಡದ್ದು. ಮಹಾವಂಚನೆ ಏನೆಂದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವವನ್ನೇ ಕಳಿಸಿಲ್ಲ. ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲವೆಂದು ಹೇಳಿದ್ದಾರೆ. ಅಲ್ಲಿಗೆ 17% ಕತೆ ಮುಗಿಯಿತು. 17% ಗೇ ಮೀಸಲಾತಿ ಹೆಚ್ಚಳವಾಗಲ್ಲ ಎಂದರೆ 17% ವರ್ಗೀಕರಣ ಮಾಡಿರುವ ಒಳಮೀಸಲಾತಿ ಹೇಗೆ ಜಾರಿಯಾಗುತ್ತದೆ? ಸಾಧ್ಯವಿಲ್ಲ.

4. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರದ ಕೈಯಲ್ಲಿಲ್ಲವೇ? ಹೌದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವುದು ಅಸಾಧ್ಯ. ಹಿಂದೆ ಪಂಬಾಬ್ ನ ಧರ್ವಿಂದರ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 5 ಜನ ನ್ಯಾಯಾಧೀಶರ ಪೀಠ ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಗಳಿಗಿಲ್ಲ ಎಂದಿತ್ತು. ಆದರೆ 2020 ರಲ್ಲಿ ಅರುಣ್ ಮಿಶ್ರಾ ಅವರನ್ನು ಒಳಗೊಂಡ 5 ಜನ ನ್ಯಾಯಾಧೀಶರ ಪೀಠವು ಒಳಮೀಸಲಾತಿ ಜಾರಿಗೊಳಿಸುವ ಹಕ್ಕು ರಾಜ್ಯಕ್ಕಿದೆ ಎಂದು ತೀರ್ಪು ನೀಡಿದೆ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ 5 ಜನ ನ್ಯಾಯಾಧೀಶರು ನೀಡಿದ ತೀರ್ಪನ್ನು ಮತ್ತೊಂದು 5 ಜನ ನ್ಯಾಯಾಧೀಶರ ಪೀಠವು ಅನೂರ್ಜಿತಗೊಳಿಸಲಾರದು. ಹಾಗಾಗಿ 7 ಜನ‌ ನ್ಯಾಯಾಧೀಶರ ಪೀಠದ ಮುಂದೆ ಈ ವಿಷಯ ಹೋಗಬೇಕು. ದುರಂತವೆಂದರೆ ಮೂರು ವರ್ಷವಾದರೂ 7 ಜನ ನ್ಯಾಯಾಧೀಶರ ಪೀಠವನ್ನು ರಚಿಸಿಲ್ಲ.

5. ಹಾಗಾದರೆ ಒಳಮೀಸಲಾತಿ ಜಾರಿ ಅಸಾಧ್ಯವೇ? ಇಲ್ಲ ಸಾಧ್ಯವಾಗುತ್ತದೆ. 2008 ರಲ್ಲಿ ಉಷಾ ಮೆಹ್ರಾ ಸಮಿತಿಯು ಸಂವಿಧಾನ ವಿಧಿ 341 ಕ್ಕೆ 3 ನೇ ತಿದ್ದುಪಡಿ ತರುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ವರದಿ‌ ನೀಡಿದೆ. EWS ಮಾದರಿಯಲ್ಲಿ ಮೂರೇ ದಿನದಲ್ಲಿ ಈ ಕೆಲಸವನ್ನು ಮೋದಿ ಸರ್ಕಾರ ಮಾಡಬಹುದು. ಆದರೆ ಪ್ರತಿಯೊಂದಕ್ಕೂ ಚುನಾವಣೆಯ ಗಿಮಿಕ್ ಮಾಡುವ ಮೋದಿ ಸರ್ಕಾರ ಇದನ್ನು 2024 ರ ಲೋಕಸಭಾ ಚುನಾವಣೆಯವರೆಗೆ ತಳ್ಳುತ್ತ ಬ್ಲಾಕ್‌ಮೇಲ್ ಮಾಡುತ್ತದೆ. 2024 ಕ್ಕೆ ಮೋದಿ ಸರ್ಕಾರ ಬಂದರೆ ಅಂಬೇಡ್ಕರ್ ಸಂವಿಧಾನವನ್ನೇ ಬದಲಾಯಿಸುವುದು ಖಚಿತ. ಆಗ ಒಳಮೀಸಲಾತಿ ಮಾತ್ರವಲ್ಲ ಮೀಸಲಾತಿಯೇ ಇರುವುದಿಲ್ಲ.

ಒಟ್ಟಾರೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಳಮೀಸಲಾತಿ ಹೋರಾಟಗಾರರಿಗೆ ಅದರಲ್ಲೂ ಮಾದಿಗ ಸಂಬಂಧಿ ಜಾತಿಗಳ ಮೂರು ದಶಕದ ಹೋರಾಟಕ್ಕೆ ಮೋಸ ಮಾಡಿದೆ. ಚುನಾವಣಾ ಹೊಸ್ತಿಲಲ್ಲಿ ಓಟಿನ‌ ಮೇಲೆ ಕಣ್ಣಿಟ್ಟು ಒಳಮೀಸಲಾತಿ ಹೋರಾಟಗಾರರನ್ನು ಕಣ್ಕಟ್ಟಿನ ಮೂಲಕ ವಂಚಿಸಲು ಹವಣಿಸಿದೆ. 2023 ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬ್ಲಾಕ್‌ಮೇಲ್ ತಂತ್ರಕ್ಕೆ ಕೈ ಹಾಕಿದೆ. ದಲಿತರೇ ಎಚ್ಚರ. ಸುಳ್ಳು ಹೇಳುವುದು ಹಾಗೂ ಬರಿಗೈ ಮ್ಯಾಜಿಕ್ ಮಾಡುವುದೇ ಬಿಜೆಪಿಯ ಚಾಣಕ್ಯ ತಂತ್ರ.

– ಸಾಕ್ಯ ಸಮಗಾರ

ಇದನ್ನೂ ಓದಿ; ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...