Homeಮುಖಪುಟ‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿರುವ ಅವರು, “ನಾನು ಮುಂದೆ ಮಾಡುವ ಭಾಷಣಗಳ ಕುರಿತು ಪ್ರಧಾನಿ ನರೇಂದ್ರಮೋದಿಯವರು ಭಯಭೀತರಾಗಿದ್ದಾರೆ” ಎಂದಿದ್ದಾರೆ.

ಇದರ ನಡುವೆ, ಬಿಜೆಪಿಯು ರಾಹುಲ್ ಅವರ ಮೇಲಿನ ದಾಳಿಯನ್ನು ದ್ವಿಗುಣಗೊಳಿಸಿದೆ. “ಚುನಾವಣಾ ಲಾಭಕ್ಕಾಗಿ ರಾಹುಲ್ ಅವರ ಹೆಸರನ್ನು ಬಳಸಿಕೊಂಡು ಪ್ರಚಾರ ಮಾಡಲು ಕಾಂಗ್ರೆಸ್‌ ಯೋಚಿಸಿದೆ” ಎಂದು ಬಿಜೆಪಿ ಆರೋಪಿಸಿದೆ.

ಲಂಡನ್‌ನಲ್ಲಿ ಆಡಿರುವ ಮಾತುಗಳಿಗೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಮುಂದಿನ ಭಾಷಣಗಳಿಗೆ ಪ್ರಧಾನಿ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಬಯಸಿದ್ದರು ಎಂಬ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. “ಲಂಡನ್ ಪ್ರವಾಸದ ವೇಳೆ ನೀಡಿದ ಹೇಳಿಕೆಗಳಿಗೆ ಬಂದಿರುವ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಅವರನ್ನು ಕೇಳಿದ್ದೆನು” ಎಂದಿದ್ದಾರೆ ರಾಹುಲ್‌.

“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

“ನನಗೆ ಒಂದೇ ಒಂದು ಇದೆ. ಅದು ಸತ್ಯಕ್ಕಾಗಿ ಹೋರಾಡುವುದು ಮತ್ತು ಈ ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವಮಾನವಿಡೀ ಅನರ್ಹಗೊಳಿಸಿ, ಜೀವಿತಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ಅದಕ್ಕಾಗಿ ಮುನ್ನಡೆಯುತ್ತೇನೆ” ಎಂದು ಗುಡುಗಿದ್ದಾರೆ.

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್‌ ಗಾಂಧಿ.

ಮೋದಿ ಉಪನಾಮವನ್ನು ಬಳಸಿ ರಾಹುಲ್ ಗಾಂಧಿಯವರು ಇತರ ಹಿಂದುಳಿದ ಸಮುದಾಯಗಳನ್ನು (ಒಬಿಸಿ) ಅವಮಾನಿಸಿದ್ದಾರೆ ಎಂದು ಬಿಜೆಪಿ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದೆ.

ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...