Homeಮುಖಪುಟ‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿರುವ ಅವರು, “ನಾನು ಮುಂದೆ ಮಾಡುವ ಭಾಷಣಗಳ ಕುರಿತು ಪ್ರಧಾನಿ ನರೇಂದ್ರಮೋದಿಯವರು ಭಯಭೀತರಾಗಿದ್ದಾರೆ” ಎಂದಿದ್ದಾರೆ.

ಇದರ ನಡುವೆ, ಬಿಜೆಪಿಯು ರಾಹುಲ್ ಅವರ ಮೇಲಿನ ದಾಳಿಯನ್ನು ದ್ವಿಗುಣಗೊಳಿಸಿದೆ. “ಚುನಾವಣಾ ಲಾಭಕ್ಕಾಗಿ ರಾಹುಲ್ ಅವರ ಹೆಸರನ್ನು ಬಳಸಿಕೊಂಡು ಪ್ರಚಾರ ಮಾಡಲು ಕಾಂಗ್ರೆಸ್‌ ಯೋಚಿಸಿದೆ” ಎಂದು ಬಿಜೆಪಿ ಆರೋಪಿಸಿದೆ.

ಲಂಡನ್‌ನಲ್ಲಿ ಆಡಿರುವ ಮಾತುಗಳಿಗೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಮುಂದಿನ ಭಾಷಣಗಳಿಗೆ ಪ್ರಧಾನಿ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಬಯಸಿದ್ದರು ಎಂಬ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. “ಲಂಡನ್ ಪ್ರವಾಸದ ವೇಳೆ ನೀಡಿದ ಹೇಳಿಕೆಗಳಿಗೆ ಬಂದಿರುವ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಅವರನ್ನು ಕೇಳಿದ್ದೆನು” ಎಂದಿದ್ದಾರೆ ರಾಹುಲ್‌.

“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

“ನನಗೆ ಒಂದೇ ಒಂದು ಇದೆ. ಅದು ಸತ್ಯಕ್ಕಾಗಿ ಹೋರಾಡುವುದು ಮತ್ತು ಈ ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವಮಾನವಿಡೀ ಅನರ್ಹಗೊಳಿಸಿ, ಜೀವಿತಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ಅದಕ್ಕಾಗಿ ಮುನ್ನಡೆಯುತ್ತೇನೆ” ಎಂದು ಗುಡುಗಿದ್ದಾರೆ.

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್‌ ಗಾಂಧಿ.

ಮೋದಿ ಉಪನಾಮವನ್ನು ಬಳಸಿ ರಾಹುಲ್ ಗಾಂಧಿಯವರು ಇತರ ಹಿಂದುಳಿದ ಸಮುದಾಯಗಳನ್ನು (ಒಬಿಸಿ) ಅವಮಾನಿಸಿದ್ದಾರೆ ಎಂದು ಬಿಜೆಪಿ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದೆ.

ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...