Homeಮುಖಪುಟಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

ಲಂಡನ್‌ ಭಾಷಣ ಸಂಬಂಧ ಕ್ಷಮೆಯಾಚಿಸಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ; ಕೇಂದ್ರ ಸಚಿವ

- Advertisement -
- Advertisement -

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕ್ಷಮೆಯಾಚಿಸಿದ್ದರೆ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುತ್ತಿರಲಿಲ್ಲ” ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಶನಿವಾರ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

‘ಮೋದಿ’ ಉಪನಾಮದ ಕುರಿತು ಮಾಡಿದ ಟೀಕೆಗೆ ಸಂಬಂಧಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರಾಹುಲ್ ಅವರಿಗೆ ವಿಧಿಸಿದ ಒಂದು ದಿನದ ನಂತರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅಮಾನತು ಮಾಡಲಾಯಿತು.

ವಿದೇಶದಲ್ಲಿದ್ದಾಗ ರಾಹುಲ್ ಅವರು ಆಗಾಗ್ಗೆ ಭಾರತದ ವಿರುದ್ಧ ಮಾತನಾಡುತ್ತಾರೆ. ಹೀಗಾಗಿ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸುವುದು ಸರಿಯಾದ ನಿರ್ಧಾರ ಎಂದು ಅಠಾವಳೆ ಹೇಳಿಕೆ ನೀಡಿದ್ದಾರೆ.

“ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾಗಿದ್ದು, ಅವರು ಪಕ್ಷದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷವು 60 ರಿಂದ 70 ವರ್ಷಗಳ ಕಾಲ ದೇಶವನ್ನು ಆಳಿದೆ, ಆದ್ದರಿಂದ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವುದು ಒಳ್ಳೆಯದಲ್ಲ ಎಂದು ರಾಹುಲ್ ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ, ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ  ಪೂರ್ಣ ಪ್ರಮಾಣದ ಆಕ್ರಮಣ ನಡೆಯುತ್ತಿದೆ ಎಂದು ರಾಹುಲ್ ಗಾಂಧಿಯವರು ಲಂಡನ್‌ನಲ್ಲಿ ನೀಡಿರುವ ಹೇಳಿಕೆಯ ಹಿನ್ನೆಲೆಯ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

“ನಮ್ಮ ಸಂವಿಧಾನದಲ್ಲಿ ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ನಿಬಂಧನೆ ಇದೆ. ನಮ್ಮ ಪ್ರಜಾಪ್ರಭುತ್ವ ಬಲಿಷ್ಠವಾಗಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ರಾಹುಲ್ ಅವರು ಲಂಡನ್‌ನಲ್ಲಿ ಹೇಳಿರುವುದು ರಾಷ್ಟ್ರಕ್ಕೆ ಮಾಡಿದ ಅಪಚಾರವಾಗಿದೆ” ಎಂದು ಟೀಕಿಸಿದ್ದಾರೆ.

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದಿದ್ದ ರಾಹುಲ್‌, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆ” ಎಂದು ಬ್ರಿಟನ್‌ನಲ್ಲಿ ಹೇಳಿದ್ದರು.

ಅಮಾನತುಗೊಂಡ ಒಂದು ದಿನದ ನಂತರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.

ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಬಿಡುಗಡೆ ಮಾಡಿದ ವರದಿಯ ಬಳಿಕ ಅದಾನಿ ಗ್ರೂಪ್‌ನ ಹಗರಣಗಳು ಹೊರಬಿದ್ದಿದ್ದವು. ಷೇರುಗಳ ಮೌಲ್ಯವನ್ನು ಕೃತಕವಾಗಿ ಹೆಚ್ಚಿಸಲಾಗಿದೆ ಎಂದು ಹಿಂಡನ್‌ಬರ್ಗ್‌‌ ಸಂಸ್ಥೆ ಹೇಳಿತ್ತು.

“ಲೋಕಸಭೆ ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಂಡರೂ ದೇಶಕ್ಕಾಗಿ ಹೋರಾಡುತ್ತೇನೆ” ಎಂದು ರಾಹುಲ್ ಗುಡುಗಿದ್ದಾರೆ.

“ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದ್ದರೂ, ತೀರ್ಪನ್ನು ಉಚ್ಚ ನ್ಯಾಯಾಲಯವು ತಡೆಹಿಡಿದರೆ ರಾಹುಲ್ ಗಾಂಧಿಯವರು ಮತ್ತೆ ಸದಸ್ಯರಾಗಿ ಉಳಿಯಬಹುದು.”

ಸಂಸತ್ತಿನಲ್ಲಿ ಇರದಿದ್ದರೂ ತನ್ನ ಕೆಲಸವನ್ನು ಮಾಡುತ್ತಲೇ ಇರುತ್ತೇನೆ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

“ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಅದು ನನ್ನ ಕೆಲಸ ಮತ್ತು ನಾನು ಅನರ್ಹಗೊಂಡರೂ ಅಥವಾ ಬಂಧಿಸಲ್ಪಟ್ಟರೂ ಆ ಕೆಲಸವನ್ನು ಮಾಡುತ್ತಲೇ ಇರುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ, ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ” ಎಂದಿದ್ದಾರೆ.

ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸುತ್ತೀರಾ ಎಂಬ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಹೆಸರು ರಾಹುಲ್‌ ಗಾಂಧಿ, ಸಾವರ್ಕರ್ ಅಲ್ಲ. ನಾನು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ” ಎಂದು ದಿಟ್ಟವಾಗಿ ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಬ್ರಿಟಿಷರಿಗೆ ಬರೆದ ಕ್ಷಮಾಪಣ ಪತ್ರಗಳನ್ನು ರಾಹುಲ್ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...