Homeಮುಖಪುಟಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

ಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

- Advertisement -
- Advertisement -

ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಅವರ ತೇಜೋವದೆಗೆ ಯತ್ನಿಸಿದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಟ್ವಿಟ್ಟರ್ ಹಾಗೂ ಫೇಸ್‌ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಹಿನ್ನಲೆಯಲ್ಲಿ ದೇವೇಗೌಡರನ್ನು ಎಳೆದು ತಂದು ಅಪಮಾನ ಮಾಡಲಾಗಿತ್ತು. “ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು” ಎಂದು ಬರೆದು “ಸುಮ್ಮನೆ ಒಂದು ಉದಾಹರಣೆ ಕೊಟ್ಟೆ ಅಷ್ಟೆ, ಸೀರಿಯಸ್ ಆಗಿ ತಗೊಳಬೇಡಿ” ಎಂದು ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡಿದ್ದರು.

ಅವಹೇಳನಕಾರಿ ಬರೆದು ತೆಜೋವಧೆ ಮಾಡಿದ ಸಂಬರ್ಗಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಮಾರ್ಚ್ 15ರಂದು ಹೆಚ್ ಡಿ ದೇವೇಗೌಡ ಅವರ ವಿರುದ್ಧ Elephant whisperers ಪೋಸ್ಟ್​ ಮೇಲೆ ‘ಎಲ್ಲೇ ಕೂಸು ಹುಟ್ಟಲಿ ನಾನೇ ಅಪ್ಪ’ ಎಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11ರಂದು ದೇವೇಗೌಡ ಅವರ ವಿರುದ್ಧ ‘ಇವರು ಹೊಟ್ಟೆಗೆ ಅನ್ನ ತಿಂತಾರ ಇಲ್ಲ ಏನು ತಿಂತಾರೆ?’ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾರ್ಚ್ 13ರಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿದ ಸಾರ್ವಜನಿಕ ಭಾಷಣದ ಕ್ಲಿಪ್ ಬಳಿಸಿಕೊಂಡು ಪ್ರಶಾಂತ್ ಸಂಬರಗಿ ‘ಚೀ ಕಳ್ಳ ಕುಮಾರ್ ಸಾಬ್ ಖಾನ್’ ಎಂದು ಹೇಳಿ ಅವಮಾನಿಸಿದ್ದಾನೆ. ಈ ಎಲ್ಲ ಪೋಸ್ಟ್​ಗಳನ್ನು ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ದೂರಿನಲ್ಲಿ ಉಲ್ಲೆಖಿಸಿದೆ.

ಅತ್ತ ದೂರು ದಾಖಲಾಗುತ್ತಲೇ ಬೆದರಿದ ಪ್ರಶಾಂತ್ ಸಂಬರ್ಗಿ ದೇವೇಗೌಡರ ಬಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ತಂದೆ ಸಮಾನರಾದ Shri ದೇವೆಗೌಡ್ರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು ಒಂದು ಉದಾರಣೆಯಾಗಿ ದೇವೆ ಗೌಡ ಎಂದು ಹೆಸರನ್ನು ಬಳಸಿದೆ ಹೊರತು ಯಾವುದೇ ದುರುದ್ವೇಷ ವಿರಲಿಲ್ಲ. ಇದು ಯಾವುದೇ ರೀತಿಯಲ್ಲೂ ಅವರ ಗೌರವಕ್ಕೆ ಚುತ್ತಿ ತರಲು ಬಳಸಲಿಲ್ಲ. ಇದರಿಂದ ಯಾರಿಗಾದರೂ ಅಸಮಾಧಾನವಾಗಿದ್ದರೆ ನನ್ನ ಕಳ ಕಳಿಯ ಕ್ಷಮೆ ವಿರಲಿ #sorry” ಎಂದು ಬರೆದಿದ್ದಾರೆ.

ದೇವೇಗೌಡರ ಬಗ್ಗೆ ತಾನು ಮಾಡಿದ್ದ ಅವಹೇಳನಕಾರಿ ಟ್ವೀಟ್ ಅನ್ನು ಡಿಲೀಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ಮತ್ತೊಂದು ಟ್ವೀಟ್‌ನಲ್ಲಿ ದೇವೇಗೌಡರ ಹೆಸರು ತೆಗೆದು ಶಾರೂಕ್ ಖಾನ್ ಹೆಸರು ಹಾಕಿ ಅದೇ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...