Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...