Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...