Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...