Homeಮುಖಪುಟಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

- Advertisement -
- Advertisement -

ಜಾಕೀರ್ ಹುಸೇನ್ ಎಂಬ ಮುಸ್ಲಿಂ ವ್ಯಕ್ತಿಗೆ ಸೇರಿದ ಗೋದಾಮಿನೊಳಗೆ ರಂಜಾನ್ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಮುಸ್ಲಿಮರನ್ನು ಬಜರಂಗದಳದ ಗುಂಪು ಶನಿವಾರ ತಡೆದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಮುಸ್ಲಿಂರ ಗುಂಪೊಂದು ಪ್ರಾರ್ಥನೆ ಸಲ್ಲಿಸುವುದನ್ನು ಬಲಪಂಥೀಯ ಸಂಘಟನೆ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ರೋಹನ್ ಸಕ್ಸೇನಾ ನೇತೃತ್ವದ ಗುಂಪು ವಿರೋಧಿಸಿದೆ. ರಂಜಾನ್ ಪ್ರಾರ್ಥನಾ ಸಭೆಗೆ ನುಗ್ಗಿ ಗದ್ದಲವನ್ನು ಸೃಷ್ಟಿಸಿದ್ದಾರೆ. ಆ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ಶಾಂತಗೊಳಿಸಲಾಯಿತು.

”ನಗರದ ಲಜಪತ್ ನಗರ ಪ್ರದೇಶದ ನಿವಾಸಿಗಳಿಂದ ಪ್ರಾರ್ಥನಾ ಸಭೆಯ ಬಗ್ಗೆ ದೂರು ಸ್ವೀಕರಿಸಿದ್ದೇವೆ” ಎಂದು ಮೊರಾದಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲಜಪತ್ ನಗರವು ಹಿಂದೂ ಬಹುಸಂಖ್ಯಾತ ವಿವಿಧ ಧರ್ಮಗಳ ಜನರಿಂದ ಕೂಡಿದೆ. ಪೊಲೀಸರ ಸಮ್ಮುಖದಲ್ಲಿ ಪ್ರಾರ್ಥನಾ ಸಭೆಯನ್ನು ಶನಿವಾರ ನಡೆಸಲು ಅನುಮತಿಸಲಾಗಿದೆ. ಆದರೆ ಪ್ರದೇಶದ ಮುಸ್ಲಿಮರು ತಮ್ಮ ಮನೆಗಳಲ್ಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಕೇಳಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ನಗರದಲ್ಲಿ ಹೊಸ ಸಂಪ್ರದಾಯಗಳನ್ನು (ಸಂಪ್ರದಾಯ) ನಡೆಸಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

”ಝಾಕಿರ್ ತನ್ನ ಮುಸ್ಲಿಂ ಸಹೋದರರೊಂದಿಗೆ ಪ್ರಾರ್ಥನೆ ನಡೆಸುವ ಮೂಲಕ ಹೊಸ ಸಂಪ್ರದಾಯವನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನಾವು ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಮತ್ತು ನಮ್ಮ ನಗರ ಅಥವಾ ರಾಜ್ಯದಲ್ಲಿ ಅಂತಹ ಯಾವುದೇ ಸಂಪ್ರದಾಯವನ್ನು ಹುಟ್ಟುಹಾಕಲು ಬಿಡುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ.

”ನಮಗೆ ನಮಗೆ ಈ ಗೋದಾಮಿನ ನೆರೆಹೊರೆಯವರಿಂದ ಈ ಮಾಹಿತಿ ಬಂದಿದೆ. ನಮ್ಮಲ್ಲಿ ಪುರಾವೆಯಾಗಿ ಚಿತ್ರಗಳೂ ಇವೆ. ನಾವು ಇದನ್ನು ಸಹಿಸುವುದಿಲ್ಲ” ಅವರ ವಿರುದ್ಧ ದೂರು ದಾಖಲಿಸಲು ನಾವು ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದೇವೆ. ಮತ್ತು ಅವರು ಕ್ರಮ ತಗೆದುಕೊಳ್ಳದಿದ್ದರೆ, ರಾಷ್ಟ್ರೀಯ ಬಜರಂಗದಳವು ಅದರ ವಿರುದ್ಧ ಪ್ರತಿಭಟಿಸಲು ಬೀದಿಗೆ ಬರಲಿದೆ ಎಂದು ಸಕ್ಸೇನಾ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಾದ ಹಿಂದುತ್ವ ಸಂಘಟನೆಗಳ ದಾಳಿಗಳು

ಕಳೆದ ಕೆಲವು ವರ್ಷಗಳಿಂದ, ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದ್ದಕ್ಕಾಗಿ ಮುಸ್ಲಿಮರನ್ನು ಬಂಧಿಸುವ ಅಥವಾ ಕಿರುಕುಳ ನೀಡುವ ಹಲವಾರು ನಿದರ್ಶನಗಳಿವೆ. ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆಯ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾನೂನು ತಜ್ಞರು ಸ್ಕ್ರಾಲ್‌ ಅವರು, ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು ಮುಂತಾದ ವಿವಿಧ ಆರೋಪಗಳ ಅಡಿಯಲ್ಲಿ ಬಂಧನಗಳನ್ನು ಮಾಡಲಾಗಿದೆ. ಸಾರ್ವಜನಿಕವಾಗಿ ಪ್ರಾರ್ಥನೆ ಸಲ್ಲಿಸುವ ಜನರನ್ನು ಬಂಧಿಸುವುದನ್ನು ಭಾರತೀಯ ಕಾನೂನನು ಬೆಂಬಲಿಸಲಾಗುವುದಿಲ್ಲ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...