Homeಮುಖಪುಟಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

- Advertisement -
- Advertisement -

ಜಾಕೀರ್ ಹುಸೇನ್ ಎಂಬ ಮುಸ್ಲಿಂ ವ್ಯಕ್ತಿಗೆ ಸೇರಿದ ಗೋದಾಮಿನೊಳಗೆ ರಂಜಾನ್ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಮುಸ್ಲಿಮರನ್ನು ಬಜರಂಗದಳದ ಗುಂಪು ಶನಿವಾರ ತಡೆದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಗರದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಮುಸ್ಲಿಂರ ಗುಂಪೊಂದು ಪ್ರಾರ್ಥನೆ ಸಲ್ಲಿಸುವುದನ್ನು ಬಲಪಂಥೀಯ ಸಂಘಟನೆ ರಾಷ್ಟ್ರೀಯ ಬಜರಂಗದಳದ ರಾಜ್ಯಾಧ್ಯಕ್ಷ ರೋಹನ್ ಸಕ್ಸೇನಾ ನೇತೃತ್ವದ ಗುಂಪು ವಿರೋಧಿಸಿದೆ. ರಂಜಾನ್ ಪ್ರಾರ್ಥನಾ ಸಭೆಗೆ ನುಗ್ಗಿ ಗದ್ದಲವನ್ನು ಸೃಷ್ಟಿಸಿದ್ದಾರೆ. ಆ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿಯನ್ನು ಶಾಂತಗೊಳಿಸಲಾಯಿತು.

”ನಗರದ ಲಜಪತ್ ನಗರ ಪ್ರದೇಶದ ನಿವಾಸಿಗಳಿಂದ ಪ್ರಾರ್ಥನಾ ಸಭೆಯ ಬಗ್ಗೆ ದೂರು ಸ್ವೀಕರಿಸಿದ್ದೇವೆ” ಎಂದು ಮೊರಾದಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಲಜಪತ್ ನಗರವು ಹಿಂದೂ ಬಹುಸಂಖ್ಯಾತ ವಿವಿಧ ಧರ್ಮಗಳ ಜನರಿಂದ ಕೂಡಿದೆ. ಪೊಲೀಸರ ಸಮ್ಮುಖದಲ್ಲಿ ಪ್ರಾರ್ಥನಾ ಸಭೆಯನ್ನು ಶನಿವಾರ ನಡೆಸಲು ಅನುಮತಿಸಲಾಗಿದೆ. ಆದರೆ ಪ್ರದೇಶದ ಮುಸ್ಲಿಮರು ತಮ್ಮ ಮನೆಗಳಲ್ಲಿ ಅಥವಾ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಕೇಳಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಕ್ಸೇನಾ, ನಗರದಲ್ಲಿ ಹೊಸ ಸಂಪ್ರದಾಯಗಳನ್ನು (ಸಂಪ್ರದಾಯ) ನಡೆಸಲು ನಾವು ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹೋಳಿ ಕಾರ್ಯಕ್ರಮಕ್ಕೆ ನುಗ್ಗಿ ಬಜರಂಗದಳ ಕಾರ್ಯಕರ್ತರ ಪುಂಡಾಟ; ಪ್ರಕರಣ ದಾಖಲು

”ಝಾಕಿರ್ ತನ್ನ ಮುಸ್ಲಿಂ ಸಹೋದರರೊಂದಿಗೆ ಪ್ರಾರ್ಥನೆ ನಡೆಸುವ ಮೂಲಕ ಹೊಸ ಸಂಪ್ರದಾಯವನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ನಾವು ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಮತ್ತು ನಮ್ಮ ನಗರ ಅಥವಾ ರಾಜ್ಯದಲ್ಲಿ ಅಂತಹ ಯಾವುದೇ ಸಂಪ್ರದಾಯವನ್ನು ಹುಟ್ಟುಹಾಕಲು ಬಿಡುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ.

”ನಮಗೆ ನಮಗೆ ಈ ಗೋದಾಮಿನ ನೆರೆಹೊರೆಯವರಿಂದ ಈ ಮಾಹಿತಿ ಬಂದಿದೆ. ನಮ್ಮಲ್ಲಿ ಪುರಾವೆಯಾಗಿ ಚಿತ್ರಗಳೂ ಇವೆ. ನಾವು ಇದನ್ನು ಸಹಿಸುವುದಿಲ್ಲ” ಅವರ ವಿರುದ್ಧ ದೂರು ದಾಖಲಿಸಲು ನಾವು ಪೊಲೀಸ್ ಅಧಿಕಾರಿಗಳನ್ನು ಕೇಳಿದ್ದೇವೆ. ಮತ್ತು ಅವರು ಕ್ರಮ ತಗೆದುಕೊಳ್ಳದಿದ್ದರೆ, ರಾಷ್ಟ್ರೀಯ ಬಜರಂಗದಳವು ಅದರ ವಿರುದ್ಧ ಪ್ರತಿಭಟಿಸಲು ಬೀದಿಗೆ ಬರಲಿದೆ ಎಂದು ಸಕ್ಸೇನಾ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಾದ ಹಿಂದುತ್ವ ಸಂಘಟನೆಗಳ ದಾಳಿಗಳು

ಕಳೆದ ಕೆಲವು ವರ್ಷಗಳಿಂದ, ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದ್ದಕ್ಕಾಗಿ ಮುಸ್ಲಿಮರನ್ನು ಬಂಧಿಸುವ ಅಥವಾ ಕಿರುಕುಳ ನೀಡುವ ಹಲವಾರು ನಿದರ್ಶನಗಳಿವೆ. ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚಿನ ಘಟನೆಗಳು ವರದಿಯಾಗಿವೆ ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆಯ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕಾನೂನು ತಜ್ಞರು ಸ್ಕ್ರಾಲ್‌ ಅವರು, ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವುದು ಮುಂತಾದ ವಿವಿಧ ಆರೋಪಗಳ ಅಡಿಯಲ್ಲಿ ಬಂಧನಗಳನ್ನು ಮಾಡಲಾಗಿದೆ. ಸಾರ್ವಜನಿಕವಾಗಿ ಪ್ರಾರ್ಥನೆ ಸಲ್ಲಿಸುವ ಜನರನ್ನು ಬಂಧಿಸುವುದನ್ನು ಭಾರತೀಯ ಕಾನೂನನು ಬೆಂಬಲಿಸಲಾಗುವುದಿಲ್ಲ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...