Homeಕರ್ನಾಟಕ'ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?': ಸಿದ್ದರಾಮಯ್ಯ ಪ್ರಶ್ನೆ

‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರವಿವಾರ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ ನಡೆಸಲು ಕರೆ ಕೊಡಲಾಗಿತ್ತು. ರಾಜ್ಯದಲ್ಲಿ ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಭಾನುವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ”ಭಾರತ್‌ ಜೋಡೊ ಯಾತ್ರೆಯ ಬಳಿಕ ರಾಹುಲ್‌ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರ ಆತಂಕ ಹೆಚ್ಚಿಸಿದೆ. ರಾಜಕೀಯ ದ್ವೇಷದಿಂದ ಅನರ್ಹತೆ ಮಾಡಲಾಗಿದೆ” ಎಂದು ಹೇಳಿದರು.

”ಇದು ಹಿಟ್ಲರ್‌ನ ಜರ್ಮನಿಯೂ ಅಲ್ಲ. ಮುಸೊಲಿನಿಯ ಇಟಲಿಯೂ ಅಲ್ಲ. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡು ಬದುಕುತ್ತಿದ್ದೇವೆ. ಅನರ್ಹತೆ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ತಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

”2019ರ ಲೋಕಸಭೆ ಚುನಾವಣೆ ಹಿನ್ನೆಲೆ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ವೇಳೆ ನಾನೂ ವೇದಿಕೆಯಲ್ಲಿದ್ದೆ. ಜಾತಿ ನಿಂದನೆ ಅಥವಾ ಮಾನಹಾನಿಕರ ರೀತಿಯಲ್ಲಿ ಮಾತನಾಡಿಲ್ಲ. ದೇಶದ ಜನರ ಹಣವನ್ನು ಕೊಳ್ಳೆ ಹೊಡೆದು ವಿದೇಶಕ್ಕೆ ಹೋದವರ ಹೆಸರು ಪ್ರಸ್ತಾಪಿಸಿದ್ದರು. ಅವರನ್ನು ಕಳ್ಳರು ಎಂದು ಕರೆಯುವ ಸ್ವಾತಂತ್ರ್ಯವೂ ಇಲ್ಲವೇ? ಹಾಗಿದ್ದರೆ ಅವರು ಸಮಾಜ ಸುಧಾರಕರೇ? ಹಿಟ್ಲರ್‌, ಮುಸೊಲಿನಿ ವಂಶಸ್ಥರಿಂದ ನಾವು ದೇಶ ಭಕ್ತಿಯ ಪಾಠ ಕಲಿಯಬೇಕಿಲ್ಲ” ಎಂದು ಹೇಳಿದರು.

”ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಮಾತನಾಡಿ, ”ಲಲಿತ್ ಮೋದಿ, ನೀರವ್‌ ಮೋದಿ ಸೇರಿ ಹಲವರು ಬ್ಯಾಂಕ್‌ಗಳನ್ನು ಕೊಳ್ಳೆ ಹೊಡೆದು ವಿದೇಶದಲ್ಲಿದ್ದಾರೆ. ಅದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ನಳಿನ್‌ಕುಮಾರ್ ಕಟೀಲ್‌, ನಡ್ಡಾ, ಅಮಿತ್‌ ಶಾ ಅವರ ಹಣ ಅಲ್ಲ. ಜನರ ದುಡ್ಡು. ಪ್ರಜಾಪ್ರಭುತ್ವದ ತಾಯಿ ಭಾರತವೆಂದು ಕರೆಯಲಾಗುತ್ತಿತ್ತು. ಅದನ್ನೇ ನಾಶ ಪಡಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ದಿನೇಶ್‌ ಗುಂಡೂರಾವ್‌ ಮಾತನಾಡಿ, ”ತನ್ನ ವಿರುದ್ಧ ಮಾತನಾಡುವವರನ್ನು ಬಿಜೆಪಿ ಅನರ್ಹಗೊಳಿಸುತ್ತಿದೆ. ಪ್ರಜಾಪ್ರಭುತ್ವದ ವಿರೋಧಿ ನಡೆಯನ್ನು ಮಾಧ್ಯಮಗಳೂ ಪ್ರಶ್ನಿಸುತ್ತಿಲ್ಲ. ತಪ್ಪು ಮಾಡಿದಾಗ ಟೀಕೆಗಳು ಪ್ರಜಾತಂತ್ರ ವ್ಯವಸ್ಥೆಯ ಭಾಗ. ದುರುದ್ದೇಶದಿಂದ ರಾಹುಲ್‌ ಅವರ ಬಾಯಿ ಮುಚ್ಚಿಸಲು ಅನರ್ಹತೆ ಕ್ರಮ ಬಳಸಲಾಗಿದೆ” ಎಂದು ಕಿಡಿಕಾರಿದರು.

ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಶಾಸಕರಾದ ಕೆ.ಜೆ.ಜಾರ್ಜ್‌, ಎನ್‌.ಎ. ಹ್ಯಾರೀಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಇತರರು ಭಾಗಿಯಾಗಿದ್ದರು.

ಪ್ರತಿಪಕ್ಷಗಳಿಂದಲೂ ಪ್ರತಿಭಟನೆ

ರಾಹುಲ್ ಗಾಂಧಿಯವರನ್ನು ಲೋಕಸಭೆಯಿಂದ ಅನರ್ಹಗೊಳಿಸುವುದರ ವಿರುದ್ಧ ರವಿವಾರ ದೇಶಾದ್ಯಂತ ಕಾಂಗ್ರೆಸ್ ಅಹೋರಾತ್ರಿ ಸತ್ಯಾಗ್ರಹ ನಡೆಸಿತು. ರಾಹುಲ್ ಅನರ್ಹತೆ ಖಂಡಿಸಿ ಸೋಮವಾರ 17 ಪ್ರತಿಪಕ್ಷಗಳು ದೆಹಲಿಯಲ್ಲಿ ಜಂಟಿ ಪ್ರತಿಭಟನೆ ನಡೆಸಿದವು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಭಾಗವಹಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...