Homeಮುಖಪುಟಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ "ಕಪ್ಪು" ಬಟ್ಟೆ ಧರಿಸಿ...

ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಇಂದು (ಸೋಮವಾರ) ಮೊದಲ ಬಾರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಣಿಸಿಕೊಂಡಿದೆ. ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಇದು ಅಪರೂಪದ ಬೆಳವಣಿಗೆಯಾಗಿದೆ.

ಈ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಹುಲ್ ಗಾಂಧಿಯ ಸಂಸದರಾಗಿ ಅನರ್ಹಗೊಳಿಸುವಿಕೆಯ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.

ಸಭೆ ಬಳಿಕ ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಪ್ರತಿಪಕ್ಷದ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಸೋಮವಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಕಾರ್ಯತಂತ್ರದ ಸಭೆಯಲ್ಲಿ ತೃಣಮೂಲದ ಪ್ರಸೂನ್ ಬ್ಯಾನರ್ಜಿ ಮತ್ತು ಜವಾಹರ್ ಸಿರ್ಕಾರ್ ಭಾಗಿಯಾದರು. ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನವಾಗಿ ಉಳಿಯುವುದಾಗಿ ಘೋಷಿಸಿದ ನಂತರ ಇದು ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.

ರಾಹುಲ್ ಗಾಂಧಿ ಅನರ್ಹತೆ ವಿಚಾರದ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎಂದು ನಂಬಿರುವುದರಿಂದ ಈ ಪ್ರತಿಭಟನೆಗೆ ಮಾತ್ರ ತಮ್ಮ ಬೆಂಬಲವನ್ನು ಸೀಮಿತಗೊಳಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪ್ರತಿಪಾದಿಸಿದೆ.

ಇದನ್ನೂ ಓದಿ: ‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

ತೃಣಮೂಲದ ಕಾಂಗ್ರೆಸ್‌ನ ಅಚ್ಚರಿಯ ಈ ನಡೆಗೆ ಪ್ರತಿಕ್ರಿಯಿಸಿದ ಖರ್ಗೆ, ”ಪ್ರಜಾಪ್ರಭುತ್ವವನ್ನು ರಕ್ಷಿಸಲು” ಯಾರೇ ಮುಂದೆ ಬಂದರೂ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಅದಕ್ಕಾಗಿಯೇ ನಾನು ನಿನ್ನೆ ಎಲ್ಲರಿಗೂ ಧನ್ಯವಾದ ಹೇಳಿದ್ದೇನೆ ಮತ್ತು ಇಂದು ಕೂಡ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಮತ್ತು ಜನರನ್ನು ರಕ್ಷಿಸಲು ಯಾರಾದರೂ ಮುಂದೆ ಬಂದರೆ ನಾವು ಸ್ವಾಗತಿಸುತ್ತೇವೆ. ನಮ್ಮನ್ನು ಬೆಂಬಲಿಸುವ ಜನರಿಗೆ ನಾವು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿದರು.

”ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ” ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಸಂಸದರು ಕಪ್ಪು ಶರ್ಟ್ ಧರಿಸಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ನ ಪ್ರತಿಸ್ಪರ್ಧಿಯಾಗಿರುವ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಹ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆಗೆ “”ಕಪ್ಪು ಬಟ್ಟೆ ಧರಿಸಿ” ಪ್ರತಿಭಟನೆಯಲ್ಲಿ ಸೇರಿಕೊಂಡಿತು.

ಹದಿನೇಳು ವಿರೋಧ ಪಕ್ಷಗಳು – ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯ ಅನರ್ಹತೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಲೆಕ್ಕಾಚಾರದ ಮೌನವನ್ನು ವಹಿಸಿತ್ತು. ಬಿಜೆಪಿಯು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವುದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎನ್ನುವ ವ್ಯಾಪಕ ಕರೆಗಳು ಬಂದಾಗಲೂ ತೃಣಮೂಲ ಸದಸ್ಯರು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಕಾರ್ಯತಂತ್ರದ ಸಭೆಗಳಿಂದ ದೂರ ಉಳಿದಿದ್ದರು.

ಇದೀಗ ಬಿಜೆಪಿಯ ತೀವ್ರ ಟೀಕಾಕಾರರಾಗಿರುವ ತೃಣಮೂಲ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ.

”ಪ್ರಧಾನಿ ಮೋದಿಯವರ ನವಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಅದೇ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣದ ಕಾರಣಕ್ಕಾಗಿ ಅನರ್ಹಗೊಳಿಸಲಾಗಿದೆ. ಇಂದು, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಬ್ಯಾನರ್ಜಿ ಹೇಳಿದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...