Homeಕರ್ನಾಟಕಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

- Advertisement -
- Advertisement -

“ಉರಿಗೌಡ, ದೊಡ್ಡನಂಜೇಗೌಡ ಎಂಬ (ಕಾಲ್ಪನಿಕ) ಪಾತ್ರಗಳೇ ಟಿಪ್ಪುವನ್ನು ಕೊಂದಿದ್ದು” ಎಂದು ಪ್ರತಿಪಾದಿಸಿ ಟೀಕೆಗೆ ಒಳಗಾಗಿರುವ ರಂಗಾಯಣ ನಿರ್ದೇಶಕ, ‘ಟಿಪ್ಪು ನಿಜಕನಸುಗಳು’ ನಾಟಕದ ಸೃಷ್ಟಿಕರ್ತ ಅಡ್ಡಂಡ ಕಾರ್ಯಪ್ಪ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಿಧನರಾದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರ ವಿರುದ್ಧ ಇತ್ತೀಚೆಗೆ ಬಹಳ ಹಗುರವಾಗಿ ಮಾತನಾಡಿರುವ ಅಡ್ಡಂಡ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ರೈತ ಸಂಘ ಮುಂದಾಗಿದೆ.

ಈ ಕುರಿತು ಮೈಸೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಲಾಗಿದ್ದು, “ಹೋರಾಟಗಾರ ಪ.ಮಲ್ಲೇಶ್ ಅವರ ಕುರಿತು ಅಪಹಾಸ್ಯವಾಗಿ ಮಾತಾಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಾರದೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು” ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

“ಪ.ಮಲ್ಲೇಶ್ ಅವರು ಮರಣ ಹೊಂದಿದ್ದಾರೆ. ತೀರಿಹೋದವರ ಕುರಿತು ಕೇವಲವಾಗಿ ಮಾತಾಡಿರುವ ಅಡ್ಡಂಡ ಕಾರ್ಯಪ್ಪ ಸಂಸ್ಕೃತಿ ಹೀನ ವ್ಯಕ್ತಿತ್ವದವರು. ವಿಕೃತವಾದ ಆಲೋಚನೆ ಹಾಗೂ ಸಮಾಜ ಒಡೆಯುವ ನೀತಿ ಅಡ್ಡಂಡ ಹೊಂದಿದ್ದಾರೆ” ಎಂದು ಟೀಕಿಸಿದ್ದಾರೆ.

ವ್ಯಕ್ತಿ ಮೃತಪಟ್ಟ ವ್ಯಕ್ತಿಯ ಕುರಿತು ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುವಂತೆ ಯಾರಾದರೂ ನಡೆದುಕೊಂಡರೆ ಈ ದೇಶದ ಕಾನೂನಿನಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಅವಕಾಶವಿದೆ. ವಾರದೊಳಗೆ ಅವರು ಕ್ಷಮೆ ಕೇಳದಿದ್ದರೆ ಸಾಮಾಜಿಕ ಹಿತಚಿಂತನೆಯ ದೃಷ್ಟಿಯಿಂದ ಮಾನನಷ್ಟ ಪ್ರಕರಣ ದಾಖಲಿಸುತ್ತೇವೆ. ಅಹಿಂಸಾತ್ಮಕ ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ಮೈಸೂರಿಗೆ ಸಾಂಸ್ಕೃತಿಕವಾಗಿ ಸಾಹಿತ್ಯಕವಾಗಿ ಗೌರವವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪು, ಸಾಹುಕಾರ್ ಚೆನ್ನಯ್ಯ, ಯಶೋಧರ ದಾಸಪ್ಪ, ಪ್ರೊ.ನಂಜುಂಡಸ್ವಾಮಿ ಪ್ರೇರಕ ಶಕ್ತಿಯಾಗಿದ್ದಾರೆ. ಅವರ ಮುಮದುವರಿದ ಭಾಗಿ ಇದ್ದವರು ಪ.ಮಲ್ಲೇಶ್‌. ಈ ಪರಂಪರೆಗೆ ಧಕ್ಕೆ ತರುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ರಂಗಾಯಣದಿಂದ ಎತ್ತಂಗಡಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನವನ್ನು ನವೆಂಬರ್‌ 19ರಂದು ಆಯೋಜಿಸಲಾಗಿತ್ತು. ಆ ವೇಳೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ಉಪನಿರ್ದೇಶಕಿ ನಿರ್ಮಲಾ ಮಠಮತಿ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ಈ ವೇಳೆ ಪ.ಮಲ್ಲೇಶ್ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪಿಸಿದ ಕಾರ್ಯಪ್ಪ, “ರಂಗಾಯಣಕ್ಕೆ ಯಾವ ಅತಿಥಿಯನ್ನು ಕರೆದರೂ ಅದಕ್ಕೂ ಗಲಾಟೆ. ಪಾಪ ಒಬ್ಬ ಸ್ಪಾನ್ಸರ್‌ (ಪ್ರಾಯೋಜಕರು) ಇದ್ದರು. ಅವರು ಸತ್ತು ಹೋದರು. ಪಾಪ ಪ.ಮಲ್ಲೇಶ್ ಅಂಥ ಅವರ ಹೆಸರು. ಚಳವಳಿಗಾರರಿಗೆ ಸ್ಪಾನ್ಸರ್‌. ಶಾಮಿಯಾನಬೇಕು, ಟೀ ಬೇಕು, ಸಂಜೆ ಹೋಗುವಾಗ ಸಕಲ ತೀರ್ಥಗಳನ್ನು ಸೇವಿಸುವವರಿಗೆ ಅದೂ ಬೇಕು. ಇದನ್ನೆಲ್ಲ ಅವರು ಕೊಡ್ತಾ ಇದ್ದರು. ಅವರು ಸತ್ತು ಹೋದರು. ಇನ್ನೊಂದು ಎಡಪಂಥೀಯ ಗುಂಪು ನಿತ್ಯ ಇದನ್ನೇ ಕಾಯಕ ಮಾಡಿಕೊಂಡಿತ್ತು. ಚಳವಳಿ, ಚಳವಳಿ… ಇದೆಲ್ಲದರ ನಡುವೆ ಯಶಸ್ವಿಯಾಗಿ ನಾಟಕ ಮಾಡಿಯೇ ತೀರಿದ್ದೇನೆ” ಎಂದಿದ್ದರು.

ಸಮಾಜವಾದಿ ಪ.ಮಲ್ಲೇಶ್‌ ಅವರ ಕುರಿತು ಅಡ್ಡಂಡ ಕಾರ್ಯಪ್ಪ ಹಗುರವಾಗಿ ಮಾತನಾಡಿರುವುದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.

ರಾಹುಲ್‌ ಅನರ್ಹತೆ ಸಮರ್ಥನೀಯವಲ್ಲ: ಬಡಗಲಪುರ ನಾಗೇಂದ್ರ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ಅನರ್ಹ ಕಾನೂನಿನ ಪ್ರಕಾರವೇ ಸಮರ್ಥನೀಯವಲ್ಲ. ಪ್ರಜಾಪ್ರಭುತ್ವದ ಅಂತಃಸತ್ವವನ್ನು ಅಡಗಿಸುವ ತೀರ್ಮಾನವಿದು. ಇದರ ವಿರುದ್ಧ ದೇಶದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಯಾಗಬೇಕು” ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಶಿಸಿದರು.

ಕೆಳಗಿನ ನ್ಯಾಯಾಲಯಗಳು ತೀರ್ಪು ಅಂತಿಮವಲ್ಲ. ಮುಂದಿನ ಕೋರ್ಟ್‌ಗಳಲ್ಲಿ ಅದನ್ನು ಪ್ರಶ್ನೆ ಮಾಡಬೇಕು. ಹಾಗೆಯೇ ಯಾವುದೇ ಕ್ರಮಗಳು ಪಾರದರ್ಶಕ ಮತ್ತು ಜನ ಒಪ್ಪುವಂತಿರಬೇಕು. ತೀರ್ಪಿಗೂ ಮುನ್ನ ನ್ಯಾಯಾಧೀಶರು ವ್ಯಕ್ತಿಯ ನಡತೆ, ಆ ಮಾತುಗಳು ಹಿಂದಿನ ಉದ್ದೇಶ ಏನು ಎಂಬುದನ್ನೆಲ್ಲ ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣಗಳಲ್ಲಿ ಆ ಪ್ರಕ್ರಿಯೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ದಾಖಲಾದ 1 ಲಕ್ಷ ಮಾನನಷ್ಟ ಪ್ರಕರಣಗಳಲ್ಲಿ 5 ಜನರಿಗೆ ಶಿಕ್ಷೆಯಾದರೆ ಹೆಚ್ಚು. ಇಂತಹ ಪ್ರಕರಣ ದಾಖಲಿಸುವಂತಿದ್ದರೆ ಲಂಕೇಶ್, ಎ.ಕೆ.ಸುಬ್ಬಯ್ಯ, ಪ್ರೊ.ನಂಜುಂಡಸ್ವಾಮಿ ಸಾವಿರ ಸಲ ಜೈಲಿಗೆ ಹೋಗಬೇಕಿತ್ತು. ರಾಹುಲ್ ಅಭಿವ್ಯಕ್ತಿ ದಮನ ಮುಂದೆ ನಮ್ಮೆಲ್ಲರಿಗೂ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಮೀಸಲಾತಿ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ನ್ಯಾಯವಲ್ಲ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಮೀಸಲಾತಿ ಸಾಂವಿಧಾನಿಕ ಹಕ್ಕು. ಬೇರೆ ಬೇರೆ ಸಮಾಜಗಳು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಮೀಸಲಾತಿ ಕೊಡಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ ಅವರು ಮಾತನಾಡಿ, “ಅಡ್ಡಂಡ ಕಾರ್ಯಪ್ಪ ನಾನು ಹೇಳುವುದೇ ಸತ್ಯ. ಅದನ್ನು ಎಲ್ಲರೂ ಒಪ್ಪಬೇಕೆಂದು ಒತ್ತಾಯಿಸುವುದು ದಾಷ್ಟ್ಯತನ. ಇವರ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ ಅನಿಸುತ್ತದೆ. ಇವರಿಗೆ ಬುದ್ಧಿ ಕಲಿಸುವ ಅಗತ್ಯವಿದೆ” ಎಂದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ನೇತ್ರಾವತಿ, ಮಹೇಶ್ ಮಂಡಕಳ್ಳಿ, ಪಿ.ಮರಂಕಯ್ಯ, ರಾಘವೇಂದ್ರ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...