Homeಕರ್ನಾಟಕಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

ಸಮಾಜವಾದಿ ಪ.ಮಲ್ಲೇಶ್‌ ಕುರಿತು ಅಡ್ಡಂಡ ಅವಹೇಳನ; ಮಾನಹಾನಿ ಪ್ರಕರಣ ದಾಖಲಿಸಲು ರೈತಸಂಘ ನಿರ್ಧಾರ

- Advertisement -
- Advertisement -

“ಉರಿಗೌಡ, ದೊಡ್ಡನಂಜೇಗೌಡ ಎಂಬ (ಕಾಲ್ಪನಿಕ) ಪಾತ್ರಗಳೇ ಟಿಪ್ಪುವನ್ನು ಕೊಂದಿದ್ದು” ಎಂದು ಪ್ರತಿಪಾದಿಸಿ ಟೀಕೆಗೆ ಒಳಗಾಗಿರುವ ರಂಗಾಯಣ ನಿರ್ದೇಶಕ, ‘ಟಿಪ್ಪು ನಿಜಕನಸುಗಳು’ ನಾಟಕದ ಸೃಷ್ಟಿಕರ್ತ ಅಡ್ಡಂಡ ಕಾರ್ಯಪ್ಪ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಿಧನರಾದ ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರ ವಿರುದ್ಧ ಇತ್ತೀಚೆಗೆ ಬಹಳ ಹಗುರವಾಗಿ ಮಾತನಾಡಿರುವ ಅಡ್ಡಂಡ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ರೈತ ಸಂಘ ಮುಂದಾಗಿದೆ.

ಈ ಕುರಿತು ಮೈಸೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಲಾಗಿದ್ದು, “ಹೋರಾಟಗಾರ ಪ.ಮಲ್ಲೇಶ್ ಅವರ ಕುರಿತು ಅಪಹಾಸ್ಯವಾಗಿ ಮಾತಾಡಿರುವ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಾರದೊಳಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು” ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.

“ಪ.ಮಲ್ಲೇಶ್ ಅವರು ಮರಣ ಹೊಂದಿದ್ದಾರೆ. ತೀರಿಹೋದವರ ಕುರಿತು ಕೇವಲವಾಗಿ ಮಾತಾಡಿರುವ ಅಡ್ಡಂಡ ಕಾರ್ಯಪ್ಪ ಸಂಸ್ಕೃತಿ ಹೀನ ವ್ಯಕ್ತಿತ್ವದವರು. ವಿಕೃತವಾದ ಆಲೋಚನೆ ಹಾಗೂ ಸಮಾಜ ಒಡೆಯುವ ನೀತಿ ಅಡ್ಡಂಡ ಹೊಂದಿದ್ದಾರೆ” ಎಂದು ಟೀಕಿಸಿದ್ದಾರೆ.

ವ್ಯಕ್ತಿ ಮೃತಪಟ್ಟ ವ್ಯಕ್ತಿಯ ಕುರಿತು ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುವಂತೆ ಯಾರಾದರೂ ನಡೆದುಕೊಂಡರೆ ಈ ದೇಶದ ಕಾನೂನಿನಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಕ್ಕೆ ಅವಕಾಶವಿದೆ. ವಾರದೊಳಗೆ ಅವರು ಕ್ಷಮೆ ಕೇಳದಿದ್ದರೆ ಸಾಮಾಜಿಕ ಹಿತಚಿಂತನೆಯ ದೃಷ್ಟಿಯಿಂದ ಮಾನನಷ್ಟ ಪ್ರಕರಣ ದಾಖಲಿಸುತ್ತೇವೆ. ಅಹಿಂಸಾತ್ಮಕ ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

“ಮೈಸೂರಿಗೆ ಸಾಂಸ್ಕೃತಿಕವಾಗಿ ಸಾಹಿತ್ಯಕವಾಗಿ ಗೌರವವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪು, ಸಾಹುಕಾರ್ ಚೆನ್ನಯ್ಯ, ಯಶೋಧರ ದಾಸಪ್ಪ, ಪ್ರೊ.ನಂಜುಂಡಸ್ವಾಮಿ ಪ್ರೇರಕ ಶಕ್ತಿಯಾಗಿದ್ದಾರೆ. ಅವರ ಮುಮದುವರಿದ ಭಾಗಿ ಇದ್ದವರು ಪ.ಮಲ್ಲೇಶ್‌. ಈ ಪರಂಪರೆಗೆ ಧಕ್ಕೆ ತರುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ರಂಗಾಯಣದಿಂದ ಎತ್ತಂಗಡಿ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನವನ್ನು ನವೆಂಬರ್‌ 19ರಂದು ಆಯೋಜಿಸಲಾಗಿತ್ತು. ಆ ವೇಳೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ಉಪನಿರ್ದೇಶಕಿ ನಿರ್ಮಲಾ ಮಠಮತಿ ಅವರ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು.

ಈ ವೇಳೆ ಪ.ಮಲ್ಲೇಶ್ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪಿಸಿದ ಕಾರ್ಯಪ್ಪ, “ರಂಗಾಯಣಕ್ಕೆ ಯಾವ ಅತಿಥಿಯನ್ನು ಕರೆದರೂ ಅದಕ್ಕೂ ಗಲಾಟೆ. ಪಾಪ ಒಬ್ಬ ಸ್ಪಾನ್ಸರ್‌ (ಪ್ರಾಯೋಜಕರು) ಇದ್ದರು. ಅವರು ಸತ್ತು ಹೋದರು. ಪಾಪ ಪ.ಮಲ್ಲೇಶ್ ಅಂಥ ಅವರ ಹೆಸರು. ಚಳವಳಿಗಾರರಿಗೆ ಸ್ಪಾನ್ಸರ್‌. ಶಾಮಿಯಾನಬೇಕು, ಟೀ ಬೇಕು, ಸಂಜೆ ಹೋಗುವಾಗ ಸಕಲ ತೀರ್ಥಗಳನ್ನು ಸೇವಿಸುವವರಿಗೆ ಅದೂ ಬೇಕು. ಇದನ್ನೆಲ್ಲ ಅವರು ಕೊಡ್ತಾ ಇದ್ದರು. ಅವರು ಸತ್ತು ಹೋದರು. ಇನ್ನೊಂದು ಎಡಪಂಥೀಯ ಗುಂಪು ನಿತ್ಯ ಇದನ್ನೇ ಕಾಯಕ ಮಾಡಿಕೊಂಡಿತ್ತು. ಚಳವಳಿ, ಚಳವಳಿ… ಇದೆಲ್ಲದರ ನಡುವೆ ಯಶಸ್ವಿಯಾಗಿ ನಾಟಕ ಮಾಡಿಯೇ ತೀರಿದ್ದೇನೆ” ಎಂದಿದ್ದರು.

ಸಮಾಜವಾದಿ ಪ.ಮಲ್ಲೇಶ್‌ ಅವರ ಕುರಿತು ಅಡ್ಡಂಡ ಕಾರ್ಯಪ್ಪ ಹಗುರವಾಗಿ ಮಾತನಾಡಿರುವುದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ.

ರಾಹುಲ್‌ ಅನರ್ಹತೆ ಸಮರ್ಥನೀಯವಲ್ಲ: ಬಡಗಲಪುರ ನಾಗೇಂದ್ರ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನ ಅನರ್ಹ ಕಾನೂನಿನ ಪ್ರಕಾರವೇ ಸಮರ್ಥನೀಯವಲ್ಲ. ಪ್ರಜಾಪ್ರಭುತ್ವದ ಅಂತಃಸತ್ವವನ್ನು ಅಡಗಿಸುವ ತೀರ್ಮಾನವಿದು. ಇದರ ವಿರುದ್ಧ ದೇಶದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಯಾಗಬೇಕು” ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಶಿಸಿದರು.

ಕೆಳಗಿನ ನ್ಯಾಯಾಲಯಗಳು ತೀರ್ಪು ಅಂತಿಮವಲ್ಲ. ಮುಂದಿನ ಕೋರ್ಟ್‌ಗಳಲ್ಲಿ ಅದನ್ನು ಪ್ರಶ್ನೆ ಮಾಡಬೇಕು. ಹಾಗೆಯೇ ಯಾವುದೇ ಕ್ರಮಗಳು ಪಾರದರ್ಶಕ ಮತ್ತು ಜನ ಒಪ್ಪುವಂತಿರಬೇಕು. ತೀರ್ಪಿಗೂ ಮುನ್ನ ನ್ಯಾಯಾಧೀಶರು ವ್ಯಕ್ತಿಯ ನಡತೆ, ಆ ಮಾತುಗಳು ಹಿಂದಿನ ಉದ್ದೇಶ ಏನು ಎಂಬುದನ್ನೆಲ್ಲ ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣಗಳಲ್ಲಿ ಆ ಪ್ರಕ್ರಿಯೆ ನಡೆದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ದಾಖಲಾದ 1 ಲಕ್ಷ ಮಾನನಷ್ಟ ಪ್ರಕರಣಗಳಲ್ಲಿ 5 ಜನರಿಗೆ ಶಿಕ್ಷೆಯಾದರೆ ಹೆಚ್ಚು. ಇಂತಹ ಪ್ರಕರಣ ದಾಖಲಿಸುವಂತಿದ್ದರೆ ಲಂಕೇಶ್, ಎ.ಕೆ.ಸುಬ್ಬಯ್ಯ, ಪ್ರೊ.ನಂಜುಂಡಸ್ವಾಮಿ ಸಾವಿರ ಸಲ ಜೈಲಿಗೆ ಹೋಗಬೇಕಿತ್ತು. ರಾಹುಲ್ ಅಭಿವ್ಯಕ್ತಿ ದಮನ ಮುಂದೆ ನಮ್ಮೆಲ್ಲರಿಗೂ ಆಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಮೀಸಲಾತಿ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಒಬ್ಬರ ಮೀಸಲಾತಿಯನ್ನು ಕಿತ್ತು ಇನ್ನೊಬ್ಬರಿಗೆ ಕೊಡುವುದು ನ್ಯಾಯವಲ್ಲ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು. ಮೀಸಲಾತಿ ಸಾಂವಿಧಾನಿಕ ಹಕ್ಕು. ಬೇರೆ ಬೇರೆ ಸಮಾಜಗಳು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜಕ್ಕೆ ಮೀಸಲಾತಿ ಕೊಡಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ವೋದಯ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ ಅವರು ಮಾತನಾಡಿ, “ಅಡ್ಡಂಡ ಕಾರ್ಯಪ್ಪ ನಾನು ಹೇಳುವುದೇ ಸತ್ಯ. ಅದನ್ನು ಎಲ್ಲರೂ ಒಪ್ಪಬೇಕೆಂದು ಒತ್ತಾಯಿಸುವುದು ದಾಷ್ಟ್ಯತನ. ಇವರ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ ಅನಿಸುತ್ತದೆ. ಇವರಿಗೆ ಬುದ್ಧಿ ಕಲಿಸುವ ಅಗತ್ಯವಿದೆ” ಎಂದರು.

ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮುಖಂಡರಾದ ನೇತ್ರಾವತಿ, ಮಹೇಶ್ ಮಂಡಕಳ್ಳಿ, ಪಿ.ಮರಂಕಯ್ಯ, ರಾಘವೇಂದ್ರ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...