Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...