Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...